AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಲೈವ್​ನಲ್ಲೇ ಟೀಮ್ ಇಂಡಿಯಾ ಮಾಜಿ ಆಟಗಾರನಿಗೆ ಬ್ಯಾಟ್​ನಲ್ಲಿ ಹೊಡೆದ ಶ್ರೀಕಾಂತ್..!

Hemang Badani: ಒಟ್ಟಿನಲ್ಲಿ ಹೆವಿ ಜೋಶ್​ನಲ್ಲಿ ಶ್ರೀಕಾಂತ್ ಮಾಡಿದ ಸಣ್ಣ ಎಡವಟ್ಟಿನಿಂದಾಗಿ ಹೇಮಂಗ್ ಬದಾನಿಯ ಕೈಗೆ ಗಾಯವಾಗಿದ್ದು, ಹೀಗಾಗಿ ಕಾರ್ಯಕ್ರಮದಲ್ಲಿ ಮುಂದುವರೆದಿರಲಿಲ್ಲ.

Viral Video: ಲೈವ್​ನಲ್ಲೇ ಟೀಮ್ ಇಂಡಿಯಾ ಮಾಜಿ ಆಟಗಾರನಿಗೆ ಬ್ಯಾಟ್​ನಲ್ಲಿ ಹೊಡೆದ ಶ್ರೀಕಾಂತ್..!
Krishnamachari Srikkanth
TV9 Web
| Edited By: |

Updated on: Aug 30, 2022 | 12:32 PM

Share

ಆಗಸ್ಟ್ 27 ರಂದು ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ನಡುವಿನ ಏಷ್ಯಾ ಕಪ್ ಪಂದ್ಯಕ್ಕೂ ಮುನ್ನ ನಡೆದ ಟಿವಿ ಕಾರ್ಯಕ್ರಮದಲ್ಲಿ ಟೀಮ್ ಇಂಡಿಯಾದ ಮಾಜಿ ಆಟಗಾರ ಹೇಮಂಗ್ ಬದಾನಿ ಗಾಯ ಮಾಡಿಕೊಂಡಿದ್ದಾರೆ. ಆದರೆ ಈ ಗಾಯ ಬದಾನಿ ತಪ್ಪಿನಿಂದಾಗಿದ್ದಲ್ಲ. ಬದಲಾಗಿ ಜೊತೆಯಿದ್ದ ಮಾಜಿ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್ ಅವರ ಅತ್ಯುತ್ಸಾಹದಿಂದ ಉಂಟಾದ ಗಾಯವಾಗಿದೆ.  ಸ್ಟಾರ್ ಸ್ಪೋರ್ಟ್ಸ್ ತಮಿಳು ಚಾನೆಲ್​ನ ಪ್ರೀವೀವ್ ಕಾರ್ಯಕ್ರಮದಲ್ಲಿ ಕೃಷ್ಣಮಾಚಾರಿ ಶ್ರೀಕಾಂತ್ ಅವರೊಂದಿಗೆ ಲೈವ್​ನಲ್ಲಿ ಬದಾನಿ ಕಾಣಿಸಿಕೊಂಡಿದ್ದರು. ಈ ವೇಳೆ ಶಾಟ್ ಅನ್ನು ವಿವರಿಸುವಾಗ  ಭಾರತದ ಮಾಜಿ ಓಪನರ್ ಶ್ರೀಕಾಂತ್ ಬ್ಯಾಟ್‌ನಿಂದ ಬದಾನಿ ಕೈಗೆ ಹೊಡೆದರು.

ಇತ್ತ ಜೋರಾಗಿಯೇ ಬಿದ್ದ ಏಟಿನಿಂದ ಬದಾನಿ ನರಳುತ್ತಿರುವುದು ಕಾಣಬಹುದು. ಅಲ್ಲದೆ ಕಾರ್ಯಕ್ರಮದಲ್ಲಿ ಮುಂದವರೆಯಲು ಹೆಣಗಾಡಿದರು. ಆ ಬಳಿಕ ಕಾರ್ಯಕ್ರಮದಿಂದ ಹೊರಹೋಗುತ್ತಿದ್ದಂತೆ ಶ್ರೀಕಾಂತ್ ಹೊಡೆದಿದ್ದು ಜೋರಾಯಿತಾ ಎಂದು ಕ್ಷಮಾಪಣೆ ಕೇಳಿದರು.

ಈ ಘಟನೆಯ ಬಳಿಕ ಹೇಮಂಗ್ ಬದಾನಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ. ಕೈಗೆ ಉಂಟಾದ ಗಾಯದ ಕಾರಣ ಆರ್ಮ್​ ಪೌಂಚ್​ ಜೊತೆ ಕಾಣಿಸಿಕೊಂಡ ಬದಾನಿ, ಅದೃಷ್ಟವಶಾತ್ ಯಾವುದೇ ಮೂಳೆ ಮುರಿದಿಲ್ಲ. ಇದಾಗ್ಯೂ ತುಂಬಾ ನೋವಿದೆ. ಸದ್ಯ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಹೆವಿ ಜೋಶ್​ನಲ್ಲಿ ಶ್ರೀಕಾಂತ್ ಮಾಡಿದ ಸಣ್ಣ ಎಡವಟ್ಟಿನಿಂದಾಗಿ ಹೇಮಂಗ್ ಬದಾನಿಯ ಕೈಗೆ ಗಾಯವಾಗಿದ್ದು, ಆ ಬಳಿಕ ಈ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ.

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು