AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL ನಲ್ಲಿ ಇಲ್ಲ ಚಾನ್ಸ್​: ವಿದೇಶಿ ತಂಡದತ್ತ ಮುಖ ಮಾಡಿದ RCB ಮಾಜಿ ಆಟಗಾರ

ಟೀಮ್ ಇಂಡಿಯಾ ಪರ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಾಣಿಸಿಕೊಂಡಿದ್ದ ಕೆಎಸ್ ಭರತ್ ಅವರನ್ನು ಈ ಬಾರಿ ಐಪಿಎಲ್​ನ ಯಾವುದೇ ಫ್ರಾಂಚೈಸಿ ಖರೀದಿಸಿಲ್ಲ. ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 7 ಪಂದ್ಯಗಳನ್ನಾಡಿದ್ದ ಭರತ್ ಒಂದು ಅರ್ಧಶತಕದೊಂದಿಗೆ ಒಟ್ಟು 191 ರನ್ ಕಲೆಹಾಕಿದ್ದರು. ಆದರೆ ಈ ಬಾರಿ ಅವರ ಖರೀದಿಗೆ ಯಾವುದೇ ಫ್ರಾಂಚೈಸಿ ಆಸಕ್ತಿ ತೋರಲಿಲ್ಲ.

IPL ನಲ್ಲಿ ಇಲ್ಲ ಚಾನ್ಸ್​: ವಿದೇಶಿ ತಂಡದತ್ತ ಮುಖ ಮಾಡಿದ RCB ಮಾಜಿ ಆಟಗಾರ
Ks Bharat
ಝಾಹಿರ್ ಯೂಸುಫ್
|

Updated on: Mar 15, 2025 | 9:04 AM

Share

2021 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಾಣಿಸಿಕೊಂಡಿದ್ದ ಶ್ರೀಕರ್ ಭರತ್ ಅವರು ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ ಬಿಕರಿಯಾಗದೇ ಉಳಿದಿದ್ದಾರೆ. ಯಾವುದೇ ತಂಡ ಖರೀದಿಸದಿರುವ ಕಾರಣ ಇದೀಗ ಕೆಎಸ್​ ಭರತ್ ವಿದೇಶಿ ಕ್ರಿಕೆಟ್ ಕ್ಲಬ್​ ಪರ ಕಣಕ್ಕಿಳಿಯಲು ಮುಂದಾಗಿದ್ದಾರೆ.

ಇಂಗ್ಲೆಂಡ್‌ನ ಪ್ರತಿಷ್ಠಿತ ಸರ್ರೆ ಚಾಂಪಿಯನ್‌ಶಿಪ್‌ನಲ್ಲಿ ಡಲ್ವಿಚ್ ಕ್ರಿಕೆಟ್ ಕ್ಲಬ್ ಪರ ಆಡಲು ಕೆಎಸ್ ಭರತ್ ಒಪ್ಪಂದ ಮಾಡಿಕೊಂಡಿದ್ದು, ಅದರಂತೆ ಏಪ್ರಿಲ್​ನಲ್ಲಿ ನಡೆಯಲಿರುವ ಈ ಟೂರ್ನಿಗಾಗಿ ಅವರು ತೆರಳಲಿದ್ದಾರೆ.

ಸರ್ರೆ ಚಾಂಪಿಯನ್‌ಶಿಪ್‌ ಎಂಬುದು ಸ್ಪರ್ಧಾತ್ಮಕ ಕ್ರಿಕೆಟ್. ಇಲ್ಲಿನ ಕ್ರಿಕೆಟ್ ಮೈದಾನಗಳ ಪರಿಸ್ಥಿತಿಗಳು ಭಾರತೀಯ ಪಿಚ್‌ಗಳಿಗಿಂತ ಸಂಪೂರ್ಣವಾಗಿ ಭಿನ್ನವಾಗಿವೆ. ಅಂತಹ ಪರಿಸ್ಥಿತಿಯಲ್ಲಿ, ಭರತ್ ತನ್ನ ತಂತ್ರವನ್ನು ಬದಲಾಯಿಸಲು ಮತ್ತು ಹೊಸ ಅನುಭವಗಳನ್ನು ಪಡೆಯಲು ಅವಕಾಶವನ್ನು ಪಡೆಯಲಿದ್ದಾರೆ. ಈ ಮೂಲಕ ಮತ್ತೊಮ್ಮೆ ಟೀಮ್ ಇಂಡಿಯಾದ ಕದ ತಟ್ಟುವ ಇರಾದೆಯಲ್ಲಿದ್ದಾರೆ.

ಇದನ್ನೂ ಓದಿ
Image
IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
Image
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
Image
ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
Image
ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು

ಏಕೆಂದರೆ ಐಪಿಎಲ್ ಬಳಿಕ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡಲಿದೆ. ಅದಕ್ಕೂ ಮುನ್ನ ಸರ್ರೆ ಚಾಂಪಿಯನ್​ಶಿಪ್​ನಲ್ಲಿ ಮಿಂಚುವ ಮೂಲಕ ಆಯ್ಕೆಗಾರರ ಗಮನ ಸೆಳೆಯುವ ಇರಾದೆಯಲ್ಲಿದ್ದಾರೆ.

ಈ ಮೂಲಕ ಮತ್ತೆ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ. ಇದಕ್ಕೂ ಮುನ್ನ ಅವರು ಟೀಮ್ ಇಂಡಿಯಾ ಪರ 7 ಟೆಸ್ಟ್ ಪಂದ್ಯಗಳನ್ನಾಡಿದ್ದರು. ಈ ವೇಳೆ 12 ಇನಿಂಗ್ಸ್ ಆಡಿದ್ದ ಭರತ್ ಕಲೆಹಾಕಿದ್ದು ಕೇವಲ 221 ರನ್​ಗಳು ಮಾತ್ರ. ಹೀಗಾಗಿ ಅವರನ್ನು ಕೈ ಬಿಟ್ಟು ಯುವ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೇಲ್​ಗೆ ತಂಡದಲ್ಲಿ ಸ್ಥಾನ ನೀಡಲಾಗಿತ್ತು.

ಇದನ್ನೂ ಓದಿ: IPL 2025: RCB ಸ್ಟೆಡಿನಾ? ಕಂಬ್ಯಾಕ್​ಗೆ ಜಸ್​ಪ್ರೀತ್ ಬುಮ್ರಾ ರೆಡಿ

ಇದೀಗ ಕೆಎಸ್ ಭರತ್ ಭಾರತ ತಂಡದಿಂದ ಹೊರಬಿದ್ದು 1 ವರ್ಷ ಕಳೆದಿದೆ. ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲೂ ಅವಕಾಶ ವಂಚಿತರಾಗಿದ್ದಾರೆ. ಹೀಗಾಗಿ ವಿದೇಶಿ ಕ್ಲಬ್ ಪರ ಕಣಕ್ಕಿಳಿಯುವ ಮೂಲಕ ಕಂಬ್ಯಾಕ್ ಮಾಡುವ ಇರಾದೆಯಲ್ಲಿದ್ದಾರೆ ಕೆಎಸ್​ ಭರತ್.

ಕೆಎಸ್​ ಭರತ್ ಐಪಿಎಲ್​ ಪ್ರದರ್ಶನ:

ಕೆಎಸ್ ಭರತ್ ಆರ್​ಸಿಬಿ ಪರ 8 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಒಂದು ಅರ್ಧಶತಕ ಸೇರಿದಂತೆ ಒಟ್ಟು 191 ರನ್ ಕಲೆಹಾಕಿದ್ದಾರೆ. ಇನ್ನು 2022 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ 2 ಪಂದ್ಯಗಳನ್ನಾಡಿದ್ದ ಭರತ್ ಕೇವಲ 8 ರನ್​ ಮಾತ್ರ ಗಳಿಸಿದ್ದರು. ಇದಾಗ್ಯೂ 2023 ರಲ್ಲಿ ಗುಜರಾತ್ ಟೈಟಾನ್ಸ್ ತಂಡವು ಅವರನ್ನು ಖರೀದಿಸಿತ್ತು. ಆದರೆ ಜಿಟಿ ಪರ ಕಣಕ್ಕಿಳಿಯಲು ಅವಕಾಶ ಸಿಕ್ಕಿರಲಿಲ್ಲ. ಇನ್ನು ಈ ಬಾರಿಯ ಐಪಿಎಲ್​ನ ಮೆಗಾ ಹರಾಜಿನಲ್ಲಿ ಬಿಕರಿಯಾಗದೇ ಉಳಿದಿದ್ದಾರೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ