AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSCA ಅಂಡರ್ 14 ಕ್ರಿಕೆಟ್: ಬೆಂಗಳೂರಿನ ವಿದ್ಯಾನಿಕೇತನ ಶಾಲೆಗೆ 410 ರನ್‌ಗಳ ಭರ್ಜರಿ ಜಯ

2025-26ನೇ ಸಾಲಿನ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(KSCA) ಬಿ.ಟಿ.ಆರ್ 14 ವರ್ಷದೊಳಗಿನವರ ಎರಡನೇ ಡಿವಿಷನ್ ಕ್ರಿಕೆಟ್ ಪಂದ್ಯದಲ್ಲಿ ಬೆಂಗಳೂರಿನ ವಿದ್ಯಾನಿಕೇತನ ಶಾಲೆ ಭರ್ಜರಿ ಗೆಲುವು ಸಾಧಿಸಿದೆ. ಬ್ಯಾಟಿಂಗ್ , ಬೌಲಿಂಗ್​​ನ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಕಾರ್ಮೆಲ್ ಶಾಲೆಯನ್ನು ಮಣಿಸಿದೆ. ಅದು ಬರೋಬ್ಬರಿ 410 ರನ್‌ಗಳಿಂದ ಗೆಲುವಿನ ನಗೆ ಬೀರಿದೆ.

KSCA ಅಂಡರ್ 14 ಕ್ರಿಕೆಟ್: ಬೆಂಗಳೂರಿನ ವಿದ್ಯಾನಿಕೇತನ ಶಾಲೆಗೆ 410 ರನ್‌ಗಳ ಭರ್ಜರಿ ಜಯ
Vidyaniketan School
TV9 Web
| Edited By: |

Updated on: Dec 25, 2025 | 9:11 PM

Share

ಬೆಂಗಳೂರು, (ಡಿಸೆಂಬರ್ 25): 2025-26ನೇ ಸಾಲಿನ ಕೆ.ಎಸ್.ಸಿ.ಎ (KSCA) ಬಿ.ಟಿ.ಆರ್ 14 ವರ್ಷದೊಳಗಿನವರ ಎರಡನೇ ಡಿವಿಷನ್ ಕ್ರಿಕೆಟ್ ಪಂದ್ಯದಲ್ಲಿ ಬೆಂಗಳೂರಿನ ವಿದ್ಯಾನಿಕೇತನ ಶಾಲೆ (Bengaluru vidyaniketan School) ಭರ್ಜರಿ ಜಯಗಳಿಸಿದೆ. ವ್ಯೊಮ್ ನಾಯ್ಡು ಅದ್ಭುತ ದ್ವಿಶತಕದ ನೆರವಿನಿಂದ ವಿದ್ಯಾನಿಕೇತನ ಶಾಲೆಯು, ಬೆಂಗಳೂರಿನ ಕಾರ್ಮೆಲ್ ಶಾಲೆ (carmel school) (B-70) ವಿರುದ್ಧ 410 ರನ್‌ಗಳ ಬೃಹತ್ ಮೊತ್ತದ ಜಯ ದಾಖಲಿಸಿದೆ.

ಬೆಂಗಳೂರು ನಗರದ ಸರ್ ಎಂ. ವಿಶ್ವೇಶ್ವರಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MVIT-2) ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವಿದ್ಯಾನಿಕೇತನ ಶಾಲೆ,  ನಿಗದಿತ 50 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 504 ರನ್‌ ಪೇರಿಸಿತು.  ವಿದ್ಯಾನಿಕೇತನ ಪರವಾಗಿ ವ್ಯೊಮ್ ನಾಯ್ಡು 150 ಎಸೆತಗಳಲ್ಲಿ  47 ಬೌಂಡರಿಗಳ ಮೂಲಕ  ಬರೋಬ್ಬರಿ 283 ರನ್‌ ಬಾರಿಸಿ ಮಿಂಚಿದರು.

ಈ ಬೃಹತ್ ಮೊತ್ತದ ಗುರಿಯನ್ನು ಬೆನ್ನಟ್ಟಿದ ಬೆಂಗಳುರಿನ ಕಾರ್ಮೆಲ್ ಶಾಲೆ ಕೇವಲ 20.5 ಓವರ್‌ಗಳಲ್ಲಿ  94 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 410 ರನ್​​​ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ ವಿದ್ಯಾನಿಕೇತನ ಶಾಲೆ ಭಾರಿ ಅಂತರದ ಜಯವನ್ನು ತನ್ನದಾಗಿಸಿಕೊಂಡಿದೆ. ಈ ಅಮೋಘ ಪ್ರದರ್ಶನ ನೀಡುವ ಮೂಲಕ ವ್ಯೊಮ್ ನಾಯ್ಡು ಅವರು ಪ್ರಸ್ತುತ ಕೆ.ಎಸ್.ಸಿ.ಎ ಬಿ.ಟಿ.ಆರ್ ಶೀಲ್ಡ್‌ ಟೂರ್ನಿಯಲ್ಲಿ ಅತ್ಯಂತ ಭರವಸೆಯ ಯುವ ಪ್ರತಿಭೆಯಾಗಿ ಹೊರಹೊಮ್ಮಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!