AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾದಿಂದ ಗೇಟ್​ಪಾಸ್; ಐಪಿಎಲ್​ನಲ್ಲೂ ನಿರಾಸೆ ಮೂಡಿಸಿದ ಆಟಗಾರನಿಗೆ ಈಗ ದಿಢೀರ್ ನಾಯಕತ್ವ!

Kuldeep Yadav: ವಾಸ್ತವವಾಗಿ ಕುಲದೀಪ್ ಯಾದವ್ ಅವರನ್ನು ಉತ್ತರ ಪ್ರದೇಶದ ರಣಜಿ ತಂಡದ ನಾಯಕರನ್ನಾಗಿ ನೇಮಿಸಲಾಗಿದೆ. ಕುಲದೀಪ್ ಈ ವರ್ಷದ ಜುಲೈನಲ್ಲಿ ತಮ್ಮ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದರು.

ಟೀಂ ಇಂಡಿಯಾದಿಂದ ಗೇಟ್​ಪಾಸ್; ಐಪಿಎಲ್​ನಲ್ಲೂ ನಿರಾಸೆ ಮೂಡಿಸಿದ ಆಟಗಾರನಿಗೆ ಈಗ ದಿಢೀರ್ ನಾಯಕತ್ವ!
ಕುಲ್ದೀಪ್ ಯಾದವ್
TV9 Web
| Edited By: |

Updated on: Dec 29, 2021 | 9:36 PM

Share

ಒಂದು ಕಾಲದಲ್ಲಿ ಟೀಂ ಇಂಡಿಯಾದ ದೊಡ್ಡ ಮ್ಯಾಚ್ ವಿನ್ನಿಂಗ್ ಬೌಲರ್ ಆಗಿದ್ದ ಕುಲದೀಪ್ ಯಾದವ್ ಅವರ ವೃತ್ತಿಜೀವನವು ಇದ್ದಕ್ಕಿದ್ದಂತೆ ಕುಸಿಯಿತು. ಕುಲದೀಪ್ ಯಾದವ್ ಅತ್ಯುತ್ತಮ ಪ್ರದರ್ಶನದ ಹೊರತಾಗಿಯೂ ತಂಡದಿಂದ ಹೊರಗುಳಿದರು. ನಂತರ ಅವರ ಫಾರ್ಮ್ ಕೂಡ ಕಳೆಗುಂದಿತು. ಕಳಪೆ ಫಾರ್ಮ್‌ನಿಂದಾಗಿ, ಅವರು ಅನೇಕ ಪಂದ್ಯಗಳಿಗೆ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್‌ನ ಪ್ಲೇಯಿಂಗ್ XI ನಲ್ಲಿ ಸೇರಿಸಲಾಗಿಲ್ಲ. ಆದರೆ, ಈಗ ಈ ಚೀನಾಮನ್ ಬೌಲರ್‌ಗಳಿಗೆ ನಾಯಕತ್ವ ಸಿಕ್ಕಿದೆ.

ಆಶ್ಚರ್ಯಪಡಬೇಡಿ, ವಾಸ್ತವವಾಗಿ ಕುಲದೀಪ್ ಯಾದವ್ ಅವರನ್ನು ಉತ್ತರ ಪ್ರದೇಶದ ರಣಜಿ ತಂಡದ ನಾಯಕರನ್ನಾಗಿ ನೇಮಿಸಲಾಗಿದೆ. ಕುಲದೀಪ್ ಈ ವರ್ಷದ ಜುಲೈನಲ್ಲಿ ತಮ್ಮ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ರಣಜಿ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಭಾರತ ತಂಡಕ್ಕೆ ಮರಳುವ ಅವಕಾಶವನ್ನು ಅವರು ಹೊಂದಿರುತ್ತಾರೆ.

ಯುಪಿ ರಣಜಿ ತಂಡ ಕುಲದೀಪ್ ಯಾದವ್ (ನಾಯಕ), ಕರಣ್ ಶರ್ಮಾ (ಉಪನಾಯಕ), ಮಾಧವ್ ಕೌಶಿಕ್, ಅಲ್ಮಾಸ್ ಶೌಕತ್, ಸಮರ್ಥ್ ಸಿಂಗ್, ಹರ್ದೀಪ್ ಸಿಂಗ್, ರಿಂಕು ಸಿಂಗ್, ಪ್ರಿಯಾಂ ಗಾರ್ಗ್, ಅಕ್ಷದೀಪ್ ನಾಥ್, ಸಮೀರ್ ಚೌಧರಿ, ಕೃತಗ್ಯಾ ಸಿಂಗ್, ಅರುಣ್ ಜುಯಲ್, ಧ್ರುವ ಸಿಂಗ್ ಜುರೈಲ್ , ಶಿವಂ ಮಾವಿ, ಅಂಕಿತ್ ರಜಪೂತ್, ಯಶ್ ದಯಾಳ್, ಕುನಾಲ್ ಯಾದವ್, ಪ್ರಿನ್ಸ್ ಯಾದವ್, ರಿಷಬ್ ಬನ್ಸಾಲ್, ಸಾನು ಸೈನಿ, ಜಸ್ಮರ್, ಜೀಶನ್ ಅನ್ಸಾರಿ, ಶಿವಂ ಶರ್ಮಾ ಮತ್ತು ಪಾರ್ಥ ಮಿಶ್ರಾ.

ಕುಲದೀಪ್ ಯಾದವ್ ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿದ್ದಾರೆ. ಕುಲದೀಪ್ ಯಾದವ್ ಅವರು ಗಾಯದ ಕಾರಣ IPL 2021 ರ ಮದ್ಯದ ಋತುವಿನಿಂದ ಹೊರಗುಳಿದಿದ್ದರು. ಕುಲದೀಪ್ ಯಾದವ್ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ, ಆದರೆ ಈಗ ಅವರು ಫಿಟ್ ಆಗಿ ಕಾಣಿಸಿಕೊಂಡಿದ್ದಾರೆ. ಕುಲದೀಪ್ ಯಾದವ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 33 ಪಂದ್ಯಗಳಲ್ಲಿ 123 ವಿಕೆಟ್‌ಗಳನ್ನು ಪಡೆದಿದ್ದಾರೆ. ಅವರು ಯುಪಿ ರಣಜಿ ತಂಡಕ್ಕೆ ಮರಳಿರುವುದು ಖಂಡಿತವಾಗಿಯೂ ತಂಡದ ಪ್ರದರ್ಶನವನ್ನು ಸುಧಾರಿಸುತ್ತದೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!