AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG 2nd Test: ಇಬ್ಬರು ಸ್ಪಿನ್ನರ್ಸ್: ಎರಡನೇ ಟೆಸ್ಟ್ ಬಗ್ಗೆ ನಿರೀಕ್ಷೆ ಹುಟ್ಟಿಸಿದ ಭಾರತದ ಪ್ಲೇಯಿಂಗ್ XI

India vs England 2nd Test: ಇಂಗ್ಲೆಂಡ್‌ನಲ್ಲಿ ಹವಾಮಾನ ಮುನ್ಸೂಚನೆಯ ಪ್ರಕಾರ ಎರಡನೇ ಟೆಸ್ಟ್ನ 1, 4 ಮತ್ತು 5ನೇ ದಿನಗಳಲ್ಲಿ ಮಳೆ ಬರುವ ಸಾಧ್ಯತೆ ಇದೆ. ಆದರೆ ಎಡ್ಜ್‌ಬಾಸ್ಟನ್ ಪಿಚ್‌ನ ಶುಷ್ಕ ಸ್ವಭಾವದಿಂದಾಗಿ ಭಾರತ ಇಬ್ಬರು ಸ್ಪಿನ್ನರ್‌ಗಳನ್ನು ಆಡಿಸಬೇಕಾಗಬಹುದು, ಎಡಗೈ ಮಣಿಕಟ್ಟಿನ ಸ್ಪಿನ್ನರ್ ಕುಲ್‌ದೀಪ್ ಯಾದವ್‌ಗಿಂತ ಮೊದಲು ವಾಷಿಂಗ್ಟನ್ ಸುಂದರ್ ಎರಡನೇ ಸ್ಪಿನ್ನರ್ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.

IND vs ENG 2nd Test: ಇಬ್ಬರು ಸ್ಪಿನ್ನರ್ಸ್: ಎರಡನೇ ಟೆಸ್ಟ್ ಬಗ್ಗೆ ನಿರೀಕ್ಷೆ ಹುಟ್ಟಿಸಿದ ಭಾರತದ ಪ್ಲೇಯಿಂಗ್ XI
Team India (2)
ಪ್ರೀತಿ ಭಟ್​, ಗುಣವಂತೆ
| Edited By: |

Updated on:Jul 16, 2025 | 6:04 PM

Share

ಬೆಂಗಳೂರು (ಜು. 21); ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಟೆಸ್ಟ್ ಜುಲೈ 2 ರಿಂದ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿದೆ. ಮೊದಲ ಟೆಸ್ಟ್‌ನಲ್ಲಿ ಆತಿಥೇಯ ಇಂಗ್ಲೆಂಡ್ ತಂಡವು ಟೀಮ್ ಇಂಡಿಯಾವನ್ನು (Team India) 5 ವಿಕೆಟ್‌ಗಳಿಂದ ಸೋಲಿಸಿತು. ಪರಿಣಾಮ ಇಂಗ್ಲೆಂಡ್ ಸರಣಿಯಲ್ಲಿ 1-0 ಮುನ್ನಡೆಯಲ್ಲಿದೆ. ಈಗ ಎರಡನೇ ಟೆಸ್ಟ್​ಗೆ ಭಾರತದ ಪ್ಲೇಯಿಂಗ್ 11 ಹೇಗಿರಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಇದರ ಮಧ್ಯೆ ಬರ್ಮಿಂಗ್ಹ್ಯಾಮ್‌ನಲ್ಲಿ ಟೀಮ್ ಇಂಡಿಯಾ 2 ಸ್ಪಿನ್ನರ್‌ಗಳೊಂದಿಗೆ ಆಡಬಹುದು ಎಂದು ನಿರೀಕ್ಷಿಸಲಾಗಿದೆ. ಭಾರತದ ಸಹಾಯಕ ಕೋಚ್ ಕೂಡ ಪತ್ರಿಕಾಗೋಷ್ಠಿಯಲ್ಲಿ ಇದನ್ನೇ ಸೂಚಿಸಿದ್ದಾರೆ. ಅವರ ಹೇಳಿಕೆಯ ಪ್ರಕಾರ, ವಾಷಿಂಗ್ಟನ್ ಸುಂದರ್ ಕುಲ್​ದೀಪ್ ಯಾದವ್‌ಗಿಂತ ಹೆಚ್ಚಿನ ಅವಕಾಶ ಪಡೆಯಬಹುದು. ಸುಂದರ್ ಅವರನ್ನು ಆಡಿಸುವುದರಿಂದ ಭಾರತಕ್ಕೆ ಬ್ಯಾಟಿಂಗ್‌ನಲ್ಲಿ ಡೆಪ್ತ್ ಸಿಗುತ್ತದೆ.

ಇಬ್ಬರು ಸ್ಪಿನ್ನರ್‌ಗಳೊಂದಿಗೆ ಆಡುವ ಬಲವಾದ ಸಾಧ್ಯತೆಯಿದೆ – ರಯಾನ್ ಟೆನ್ ಡೋಸ್ಚೇಟ್

ಇಂಗ್ಲೆಂಡ್‌ನಲ್ಲಿ ಹವಾಮಾನ ಮುನ್ಸೂಚನೆಯ ಪ್ರಕಾರ ಎರಡನೇ ಟೆಸ್ಟ್​ನ 1, 4 ಮತ್ತು 5ನೇ ದಿನಗಳಲ್ಲಿ ಮಳೆ ಬರುವ ಸಾಧ್ಯತೆ ಇದೆ. ಆದರೆ ಎಡ್ಜ್‌ಬಾಸ್ಟನ್ ಪಿಚ್‌ನ ಶುಷ್ಕ ಸ್ವಭಾವದಿಂದಾಗಿ ಭಾರತ ಇಬ್ಬರು ಸ್ಪಿನ್ನರ್‌ಗಳನ್ನು ಆಡಿಸಬೇಕಾಗಬಹುದು, ಎಡಗೈ ಮಣಿಕಟ್ಟಿನ ಸ್ಪಿನ್ನರ್ ಕುಲ್‌ದೀಪ್ ಯಾದವ್‌ಗಿಂತ ಮೊದಲು ವಾಷಿಂಗ್ಟನ್ ಸುಂದರ್ ಎರಡನೇ ಸ್ಪಿನ್ನರ್ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ
Image
IPL 2026: ಐಪಿಎಲ್ ಟ್ರೇಡ್ ವಿಂಡೋ ಓಪನ್: ಯಾವ ತಂಡಕ್ಕೆ ಯಾರು?
Image
ಶತಕಗಳ ಮೇಲೆ ಶತಕ... ಫಾಫ್ ಡುಪ್ಲೆಸಿಸ್ ಹೊಸ ವಿಶ್ವ ದಾಖಲೆ
Image
ಇಬ್ಬರು ಸ್ಪಿನ್ನರ್ ಕಣಕ್ಕೆ, ಬುಮ್ರಾ ಕೂಡ ಆಯ್ಕೆಗೆ ಲಭ್ಯ; ಕೋಚ್ ಮಾತು
Image
ಇಂಗ್ಲೆಂಡ್​ನಲ್ಲಿ ಭರ್ಜರಿ ಶತಕ ಸಿಡಿಸಿದ ಮುಶೀರ್ ಖಾನ್

ಟೆನ್ ಡೋಸ್ಚೇಟ್ ಹೇಳಿದರು, ‘ಇಬ್ಬರು ಸ್ಪಿನ್ನರ್‌ಗಳೊಂದಿಗೆ ಆಡುವ ಸಾಧ್ಯತೆ ತುಂಬಾ ಹೆಚ್ಚಾಗಿದೆ. ನಾವು ಯಾವ ಇಬ್ಬರು ಸ್ಪಿನ್ನರ್‌ಗಳೊಂದಿಗೆ ಆಡುತ್ತೇವೆ ಎಂಬುದು ಮುಖ್ಯ. ಮೂವರು ಸ್ಪಿನ್ನರ್‌ಗಳು ತುಂಬಾ ಚೆನ್ನಾಗಿ ಬೌಲಿಂಗ್ ಮಾಡುತ್ತಿದ್ದಾರೆ. ವಾಶಿ (ವಾಷಿಂಗ್ಟನ್ ಸುಂದರ್) ತುಂಬಾ ಚೆನ್ನಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಹೀಗಿರುವಾಗ ನಾವು ಯಾವ ಸಂಯೋಜನೆಯೊಂದಿಗೆ ಆಡುತ್ತೇವೆ ಎಂಬುದು ಮುಖ್ಯ? ಆಲ್-ರೌಂಡರ್ ಸ್ಪಿನ್ನರ್ ಅಥವಾ ಔಟ್-ಅಂಡ್-ಔಟ್ ಸ್ಪಿನ್ನರ್?’.

IPL 2026: ಐಪಿಎಲ್ ಟ್ರೇಡ್ ವಿಂಡೋ ಓಪನ್: ಯಾವ ತಂಡಕ್ಕೆ ಯಾರು?

‘ಖಂಡಿತ ನಾವು ಮತ್ತೆ ಬೌಲಿಂಗ್ ಆಲ್‌ರೌಂಡರ್‌ನೊಂದಿಗೆ ಆಡಬೇಕಾಗುತ್ತದೆ. ಇದು ಪಿಚ್​ಗೆ ಅನುಗುಣವಾಗಿ ತೆಗೆದುಕೊಂಡ ನಿರ್ಧಾರವಾಗಿರುತ್ತದೆ. ಪಿಚ್ ಸಾಕಷ್ಟು ಹುಲ್ಲು ಮತ್ತು ತೇಪೆಯಿಂದ ಕೂಡಿದೆ, ಮತ್ತು ಇಲ್ಲಿ ಪಿಚ್ ಒಣಗಿದೆ. ಆದರೆ ಬುಧವಾರ ಮಳೆಯ ಮುನ್ಸೂಚನೆಯೂ ಇದೆ. ಆದ್ದರಿಂದ ಮತ್ತೊಮ್ಮೆ, ಬೌಲಿಂಗ್ ವಿಷಯದಲ್ಲಿ ನಾವು ಹೇಗೆ ಮುಂದುವರಿಯಲು ಬಯಸುತ್ತೇವೆ ಎಂಬುದರ ಕುರಿತು ನಾವು ಎರಡು ಆಯ್ಕೆಗಳನ್ನು ಪರಿಗಣಿಸುತ್ತಿದ್ದೇವೆ. ಆದರೆ ಈ ಟೆಸ್ಟ್‌ನಲ್ಲಿ ಇಬ್ಬರು ಸ್ಪಿನ್ನರ್‌ಗಳು ಆಡುತ್ತಾರೆ ಎಂದು ನನಗೆ ಖಚಿತವಾಗಿದೆ’ ಎಂದು ಹೇಳಿದ್ದಾರೆ.

ಕುಲ್‌ದೀಪ್ ಇಂಗ್ಲೆಂಡ್ ವಿರುದ್ಧ ಇದುವರೆಗೆ ಆರು ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಅಲ್ಲಿ 21 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಈ ಅವಧಿಯಲ್ಲಿ ಅವರ ಸರಾಸರಿ 22.28 ಮತ್ತು ಸ್ಟ್ರೈಕ್ ರೇಟ್ 38.7 ಆಗಿದೆ. ಈ ಆರು ಟೆಸ್ಟ್ ಪಂದ್ಯಗಳಲ್ಲಿ ಐದು ಪಂದ್ಯಗಳು ಭಾರತದಲ್ಲಿ ನಡೆದಿವೆ. ಈ ಅವಧಿಯಲ್ಲಿ ಅವರ ಅತ್ಯುತ್ತಮ ಪ್ರದರ್ಶನವೆಂದರೆ 72 ರನ್‌ಗಳಿಗೆ ಐದು ವಿಕೆಟ್‌ಗಳು. 2024 ರಲ್ಲಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕುಲ್‌ದೀಪ್ ನಾಲ್ಕು ಟೆಸ್ಟ್ ಪಂದ್ಯಗಳನ್ನು ಆಡಿದರು ಮತ್ತು ಈ ಅವಧಿಯಲ್ಲಿ ಅವರು 19 ವಿಕೆಟ್‌ಗಳನ್ನು ಕಬಳಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:39 am, Tue, 1 July 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್