SL vs AUS: ಚೆಂಡು ಹತ್ತಿರ ಬಂದಾಗ ಕ್ಯಾಚ್ ಹಿಡಿಯಲು ಮುಂದಾದ ಅಂಪೈರ್ ಧರ್ಮಸೇನ: ಮುಂದೇನಾಯ್ತು?

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ (Sri Lanka vs Australia) ತಂಡ 6 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಬ್ಯಾಟಿಂಗ್ ಮಾಡುತ್ತಿರುವಾಗ ಅಂಪೈರ್ ಕ್ಯಾಚ್ ಹಿಡಿಲು ಮುಂದಾದ ವಿಶೇಷ ಘಟನೆ ನಡೆದಿದೆ.

SL vs AUS: ಚೆಂಡು ಹತ್ತಿರ ಬಂದಾಗ ಕ್ಯಾಚ್ ಹಿಡಿಯಲು ಮುಂದಾದ ಅಂಪೈರ್ ಧರ್ಮಸೇನ: ಮುಂದೇನಾಯ್ತು?
Kumar Dharmasena Catch SL vs AUS
Follow us
| Updated By: Vinay Bhat

Updated on: Jun 20, 2022 | 10:18 AM

ಕೊಲಂಬೋದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ (Sri Lanka vs Australia) ತಂಡ 6 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿದೆ. ಪಥುಮ್ ನಿಸ್ಸಂಕಾ (Pathum Nissanka) ಅವರ ಆಕರ್ಷಕ ಶತಕ ಹಾಗೂ ಕುಸಲ್ ಮೆಂಡಿಸ್ ಅರ್ಧಶತಕದ ನೆರವಿನಿಂದ ಸವಾಲಿನ ಟಾರ್ಗೆಟ್ ಅನ್ನು ಸಿಂಹಳೀಯರು ಬೆನ್ನಟ್ಟಿ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ 2-1 ಮುನ್ನಡೆ ಪಡೆದುಕೊಂಡಿತು. ಟಿ20 ಸರಣಿಯಲ್ಲಿ 1-2 ಅಂತರದಿಂದ ಸೋತ ಶ್ರೀಲಂಕಾಕ್ಕೆ ಈ ಏಕದಿನ ಸರಣಿ ಪ್ರತಿಷ್ಠೆಯ ಕದನವಾಗಿದೆ. ಹೀಗಾಗಿ ತವರಿನಲ್ಲಿ ಗೆಲ್ಲಲೇ ಬೇಕಾದ ಒತ್ತಡದಲ್ಲಿದ್ದಾರೆ. ಅದರಂತೆ ತೃತೀಯ ಏಕದಿನದಲ್ಲಿ ಲಂಕಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ಗೆಲುವು ಕಂಡಿದೆ. ಈ ಪಂದ್ಯದಲ್ಲಿ ವಿಶೇಷ ಪ್ರಸಂಗವೊಂದು ನಡೆಯಿತು. ಆಸ್ಟ್ರೇಲಿಯಾ ತಂಡ ಬ್ಯಾಟಿಂಗ್ ಮಾಡುತ್ತಿರುವಾಗ ಅಂಪೈರ್ (Umpire) ಕ್ಯಾಚ್ ಹಿಡಿಲು ಮುಂದಾದ ಘಟನೆ ಜರುಗಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆಸೀಸ್ ವಿಕೆಟ್ ಕೀಪರ್ ಬ್ಯಾಟರ್ ಅಲೆಕ್ಸ್ ಕ್ಯಾರಿ ಸ್ಕ್ವೇರ್​​​ಲೆಗ್​ನಲ್ಲಿ ಚೆಂಡನ್ನು ಅಟ್ಟಲು ಯತ್ನಿಸಿದರು. ಆದರೆ, ಸರಿಯಾಗಿ ಟೈಮ್ ಆಗದ ಕಾರಣ ಚೆಂಡು ಮೇಲಕ್ಕೋಯಿತು. ಈ ಸಂದರ್ಭ ಸ್ಕ್ವೇರ್​​​ಲೆಗ್​ನಲ್ಲಿ ನಿಂತಿದ್ದ ಅಂಪೈರ್ ಕುಮಾರ್ ಧರ್ಮಸೇನ ಚೆಂಡನ್ನು ಹಿಡಿಯಲೆಂದು ಕೈ ಮುಂದೆ ತಂದರು. ಇನ್ನೇನು ಕ್ಯಾಚ್ ಹಿಡಿಯಬೇಕು ಎನ್ನುವಷ್ಟರಲ್ಲಿ ಧರ್ಮಸೇನ ಕೈ ಹಿಂದೆ ಸರಿಸಿ ಬಿಟ್ಟರು. ಧರ್ಮಸೇನ 90ರ ದಶಕದಲ್ಲಿ ಶ್ರೀಲಂಕಾ ತಂಡದ ಪರ ಆಡದ್ದರು. ಕ್ರಿಕೆಟ್ ಆಸ್ಟ್ರೇಲಿಯಾ ಇವರು ಕ್ಯಾಚ್ ಹಿಡಿಯಲು ಪ್ರಯತ್ನಿಸುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದು ಸಖತ್ ವೈರಲ್ ಆಗುತ್ತಿದೆ.

ಇದನ್ನೂ ಓದಿ
Image
IND vs SA: ಇದೇನ ಸಭ್ಯತೆ? ಸೆಲ್ಫಿ ಕೇಳಿದ ಗ್ರೌಂಡ್ಸ್‌ಮನ್ ಜೊತೆ ರುತುರಾಜ್ ಅನುಚಿತ ವರ್ತನೆ..! ವಿಡಿಯೋ ನೋಡಿ
Image
IND vs SA 5th T20I: ಭಾರತ-ಸೌತ್ ಆಫ್ರಿಕಾ ಪಂದ್ಯ ರದ್ದು
Image
Rishabh Pant: ನಾಯಕನಾಗಿ ಅತ್ಯಂತ ಕೆಟ್ಟ ದಾಖಲೆ ಬರೆದ ರಿಷಭ್ ಪಂತ್
Image
Rishabh Pant: ವಿರಾಟ್ ಕೊಹ್ಲಿಯನ್ನು ರಿಷಭ್ ಪಂತ್ ಹಿಂದಿಕ್ಕಲಿದ್ದಾರೆ ಎಂದ ನೆಟ್ಟಿಗರು

IND vs SA: ದಿನೇಶ್ ಕಾರ್ತಿಕ್​ಗೆ ಸಿಗಲಿಲ್ಲ ಸರಣಿಶ್ರೇಷ್ಠ ಪ್ರಶಸ್ತಿ: ಹಾಗಾದ್ರೆ ಯಾವ ಆಟಗಾರನಿಗೆ ಸಿಕ್ಕಿತು?

ಆಸ್ಟ್ರೇಲಿಯಾ ಪರ ಆರಂಭಿಕರಾಗಿ ಕಣಕ್ಕಿಳಿದ ಡೇವಿಡ್‌ ವಾರ್ನರ್‌(9), ನಂತರ ಬಂದ ಮಿಚೆಲ್‌ ಮಾರ್ಷ್‌(10) ಬೇಗನೆ ಪೆವಿಲಿಯನ್ ಸೇರಿಕೊಂಡರು. ಮಾರ್ನಸ್ ಲಾಬುಶೇನ್ (20) ಕೂಡ ಬೇಗನೆ ನಿರ್ಗಮಿಸಿದರು. ಒಂದೆಡೆ ವಿಕೆಟ್‌ ಬೀಳುತ್ತಿದ್ದರು ಜವಾಬ್ದಾರಿಯ ಆಟವಾಡಿದ ನಾಯಕ ಆರನ್‌ ಫಿಂಚ್‌ 62 ರನ್‌ (85 ಬಾಲ್‌, 4 ಬೌಂಡರಿ, 1 ಸಿಕ್ಸ್‌) ಸಿಡಿಸಿ ಮಿಂಚಿದರು. ನಂತರ ಮಧ್ಯಮ ಕ್ರಮಾಂಕದಲ್ಲಿ ಜೊತೆಯಾದ ಅಲೆಕ್ಸ್‌ ಕ್ಯಾರಿ (49) ಹಾಗೂ ಟ್ರಾವಿಸ್‌ ಹೆಡ್‌ 70* ರನ್‌(65 ಬಾಲ್‌, 3 ಬೌಂಡರಿ, 3 ಸಿಕ್ಸ್‌) ಉತ್ತಮ ಆಟವಾಡಿ 5ನೇ ವಿಕೆಟ್‌ಗೆ 72 ರನ್‌ಗಳ ಕಾಣಿಕೆ ನೀಡಿದರು. ಕೆಳ ಕ್ರಮಾಂಕದಲ್ಲಿ ಬಂದ ಗ್ಲೆನ್‌ ಮ್ಯಾಕ್ಸ್‌ವೆಲ್‌(33) ಬಿರುಸಿನ ಬ್ಯಾಟಿಂಗ್‌ ಪ್ರದರ್ಶಿಸಿದರು. ಆಸ್ಟ್ರೇಲಿಯಾ 291 ರನ್ ಗಳಿಸಿತು.

ಸವಾಲು ಟಾರ್ಗೆಟ್ ಬೆನ್ನತ್ತಿದ ಶ್ರೀಲಂಕಾ ಸಾಧಾರಣ ಆರಂಭ ಕಂಡಿತು. ಡಿಕ್ವೆಲ್ಲಾ 25 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಂತರ ಜೊತೆಯಾದ ಪತುಮ್ ನಿಸ್ಸಂಕಾ 137 ರನ್ (147 ಬಾಲ್, 11 ಬೌಂಡರಿ, 2 ಸಿಕ್ಸ್) ಹಾಗೂ ಕುಸಲ್ ಮೆಂಡಿಸ್ 87 ರನ್ (85 ಬಾಲ್, 8 ಬೌಂಡರಿ) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆಸೀಸ್ ಬೌಲಿಂಗ್ ದಾಳಿಯನ್ನ ಸಮರ್ಥವಾಗಿ ಎದುರಿಸಿದ ಈ ಜೋಡಿ 2ನೇ ವಿಕೆಟ್​ಗೆ 170 ರನ್ ಜೊತೆಯಾಟದಿಂದ ತಂಡದ ಗೆಲುವಿನ ಹಾದಿ ಸುಗಮಗೊಳಿಸಿದರು. ಮೆಂಡಿಸ್ 85 ರನ್ ಗಳಿಸಿದ್ದ ವೇಳೆ ಗಾಯಗೊಂಡು ಹೊರನಡೆದರು. ಧನಂಜಯ 25 ರನ್ ಕಲೆಹಾಕಿದರೆ, ಅಸಲಂಕ (13*) 48.3 ಓವರ್​​ನಲ್ಲೇ ತಂಡವನ್ನ ಗೆಲುವಿನ ದಡಸೇರಿಸಿದರು.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ