AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ಸಿಕ್ಸ್, 19 ಫೋರ್​: ಕುಸಾಲ್ ಸಿಡಿಲಬ್ಬರಕ್ಕೆ ಬೌಲರ್​ಗಳು ತತ್ತರ

13ನೇ ಓವರ್​ ವೇಳೆ ಕ್ರೀಸ್​ಗೆ ಆಗಮಿಸಿದ ಕುಸಾಲ್ ಮೆಂಡಿಸ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ತಲುಪಿಸಿದ ಲಂಕಾ ಬ್ಯಾಟರ್ ಅಫ್ಘಾನ್ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಕುಸಾಲ್ ಮೆಂಡಿಸ್ ಬ್ಯಾಟ್​ನಿಂದ ಕೇವಲ 59 ಎಸೆತಗಳಲ್ಲಿ ಶತಕ ಮೂಡಿಬಂತು.

9 ಸಿಕ್ಸ್, 19 ಫೋರ್​: ಕುಸಾಲ್ ಸಿಡಿಲಬ್ಬರಕ್ಕೆ ಬೌಲರ್​ಗಳು ತತ್ತರ
Kusal Mendis
TV9 Web
| Edited By: |

Updated on: Oct 03, 2023 | 6:51 PM

Share

ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಶ್ರೀಲಂಕಾದ ಕುಸಾಲ್ ಮೆಂಡಿಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ಲಂಕಾ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು.

ಅದರಂತೆ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ಪಾತುಮ್ ನಿಸ್ಸಂಕಾ (30) ಹಾಗೂ ದಿಮುತ್ ಕರುಣರತ್ನೆ (8) ಬೇಗನೆ ವಿಕೆಟ್ ಒಪ್ಪಿಸಿದ್ದರು. ಆದರೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕುಸಾಲ್ ಮೆಂಡಿಸ್ ಅದ್ಭುತ ಇನಿಂಗ್ಸ್ ಕಟ್ಟಿದರು.

ಮೆಂಡಿಸ್ ಮಿಂಚಿಂಗ್:

13ನೇ ಓವರ್​ ವೇಳೆ ಕ್ರೀಸ್​ಗೆ ಆಗಮಿಸಿದ ಕುಸಾಲ್ ಮೆಂಡಿಸ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ತಲುಪಿಸಿದ ಲಂಕಾ ಬ್ಯಾಟರ್ ಅಫ್ಘಾನ್ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಕುಸಾಲ್ ಮೆಂಡಿಸ್ ಬ್ಯಾಟ್​ನಿಂದ ಕೇವಲ 59 ಎಸೆತಗಳಲ್ಲಿ ಶತಕ ಮೂಡಿಬಂತು.

ಶತಕದ ಬಳಿಕ ಆಕ್ರಮಣಕಾರಿ ಬ್ಯಾಟಿಂಗ್ ಮುಂದುವರೆಸಿದ ಕುಸಾಲ್ ಮೆಂಡಿಸ್ 87 ಎಸೆತಗಳಲ್ಲಿ 19 ಫೋರ್​ ಹಾಗೂ 9 ಸಿಕ್ಸ್​ಗಳೊಂದಿಗೆ 158 ರನ್ ಬಾರಿಸಿದರು. ಆ ಬಳಿಕ ರಿಟೈರ್ಡ್​ ಆಗಿ ನಿರ್ಗಮಿಸಿದರು.

ಕುಸಾಲ್ ಮೆಂಡಿಸ್ ನಿರ್ಗಮನದ ಬಳಿಕ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಅಫ್ಘಾನ್ ಬೌಲರ್​ಗಳು ಶ್ರೀಲಂಕಾ ತಂಡವನ್ನು 46.2 ಓವರ್​ಗಳಲ್ಲಿ 294 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾದರು.

ಅಫ್ಘಾನಿಸ್ತಾನ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂ ಝದ್ರಾನ್, ರಿಯಾಜ್ ಹಸನ್, ರಹಮತ್ ಷಾ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ಅಜ್ಮತುಲ್ಲಾ ಒಮರ್​ಝೈ, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನೂರ್ ಅಹ್ಮದ್, ಫಝಲ್ಹಕ್ ಫಾರೂಖಿ, ಅಬ್ದುಲ್ ರಹಮಾನ್, ನವೀನ್ ಉಲ್ ಹಕ್.

ಇದನ್ನೂ ಓದಿ: ICC ODI World Cup 2023 Jerseys: 10 ತಂಡಗಳ ಹೊಸ ಜೆರ್ಸಿ ಅನಾವರಣ

ಶ್ರೀಲಂಕಾ ತಂಡ: ದಸುನ್ ಶಾನಕ (ನಾಯಕ), ಕುಸಾಲ್ ಮೆಂಡಿಸ್ (ಉಪನಾಯಕ), ಪಾತುಮ್ ನಿಸ್ಸಾಂಕ, ಕುಸಾಲ್ ಪೆರೆರಾ (ವಿಕೆಟ್ ಕೀಪರ್), ದಿಮುತ್ ಕರುಣಾರತ್ನೆ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ಸದೀರ ಸಮರವಿಕ್ರಮ (ವಿಕೆಟ್ ಕೀಪರ್), ದುಶನ್ ಹೇಮಂತ, ಮಹೀಶ್ ತೀಕ್ಷಣ , ದುನಿತ್ ವೆಲ್ಲಲಾಗೆ, ಕಸುನ್ ರಜಿತ, ದಿಲ್ಶನ್ ಮಧುಶಂಕ, ಮತೀಶ ಪತಿರಾಣ, ಲಹಿರು ಕುಮಾರ.

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ