AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPL 2023: ಭರ್ಜರಿ ಜಯದೊಂದಿಗೆ ಫೈನಲ್​ಗೆ ಪ್ರವೇಶಿಸಿದ ದಂಬುಲ್ಲಾ ಔರ

Lanka Premier League 2023: ಈ ಗೆಲುವಿನೊಂದಿಗೆ ದುಂಬುಲ್ಲಾ ಔರ ತಂಡ ಲಂಕಾ ಪ್ರೀಮಿಯರ್ ಲೀಗ್​ನ ಫೈನಲ್​ಗೆ ಎಂಟ್ರಿ ಕೊಟ್ಟಿದೆ. ಇನ್ನು ಸೋತಿರುವ ಗಾಲೆ ಟೈಟಾನ್ಸ್ ತಂಡವು ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ತಂಡದೊಡನೆ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ.

LPL 2023: ಭರ್ಜರಿ ಜಯದೊಂದಿಗೆ ಫೈನಲ್​ಗೆ ಪ್ರವೇಶಿಸಿದ ದಂಬುಲ್ಲಾ ಔರ
Dambulla Aura
TV9 Web
| Edited By: |

Updated on: Aug 17, 2023 | 7:23 PM

Share

ಶ್ರೀಲಂಕಾದಲ್ಲಿ ನಡೆಯುತ್ತಿರುವ ಲಂಕಾ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ದಂಬುಲ್ಲಾ ಔರ ತಂಡ ಭರ್ಜರಿ ಜಯ ಸಾಧಿಸಿದೆ. ಗಾಲೆ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ 6 ವಿಕೆಟ್​ಗಳ ಗೆಲುವು ದಾಖಲಿಸಿದ ದಂಬುಲ್ಲಾ ಔರ ತಂಡ ಫೈನಲ್​ಗೆ ಪ್ರವೇಶಿಸಿದೆ.

ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ದಂಬುಲ್ಲಾ ಔರ ತಂಡದ ನಾಯಕ ಕುಸಾಲ್ ಮೆಂಡಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗಾಲೆ ಟೈಟಾನ್ಸ್ ತಂಡ ಉತ್ತಮ ಆರಂಭ ಪಡೆದಿರಲಿಲ್ಲ.

ಆರಂಭಿಕ ಆಟಗಾರ ಭಾನುಕ ರಾಜಪಕ್ಸೆ ಮೊದಲ ಓವರ್​ನಲ್ಲೇ ಶೂನ್ಯಕ್ಕೆ ಔಟಾಗಿದ್ದರು. ಇದಾಗ್ಯೂ ಮತ್ತೋರ್ವ ಆರಂಭಿಕ ಆಟಗಾರ ಲಸಿತ್ ಕ್ರೂಸ್ಪುಲ್ಲೆ ಅತ್ಯುತ್ತಮ ಇನಿಂಗ್ಸ್ ಆಡಿದರು. 61 ಎಸೆತಗಳನ್ನು ಎದುರಿಸಿದ ಲಸಿತ್ 7 ಫೋರ್​ಗಳೊಂದಿಗೆ 80 ರನ್ ಬಾರಿಸಿದರು.

ಆದರೆ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಅತ್ತ ಕರಾರುವಾಕ್ ದಾಳಿ ಸಂಘಟಿಸಿದ ಹೇಡನ್ ಕೆರ್ 3 ವಿಕೆಟ್ ಕಬಳಿಸಿದರು. ಪರಿಣಾಮ 20 ಓವರ್​ಗಳಲ್ಲಿ ಗಾಲೆ ಟೈಟಾನ್ಸ್​ ತಂಡವು 146 ರನ್​ಗಳಿಸಿ ಆಲೌಟ್ ಆಯಿತು.

147 ರನ್​ಗಳ ಸುಲಭ ಗುರಿ ಪಡೆದ ದಂಬುಲ್ಲಾ ಔರ ತಂಡಕ್ಕೆ ಅವಿಷ್ಕ ಫರ್ನಾಂಡೊ (24) ಹಾಗೂ ಕುಸಾಲ್ ಮೆಂಡಿಸ್ (49) ಉತ್ತಮ ಆರಂಭ ಒದಗಿಸಿದ್ದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಕುಸಾಲ್ ಪೆರೆರಾ ಭರ್ಜರಿ ಬ್ಯಾಟಿಂಗ್ ನಡೆಸಿದರು.

39 ಎಸೆತಗಳನ್ನು ಎದುರಿಸಿದ ಕುಸಾಲ್ ಪೆರೆರಾ 3 ಭರ್ಜರಿ ಸಿಕ್ಸ್ 4 ಫೋರ್​ಗಳೊಂದಿಗೆ 53 ರನ್​ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ 19.4 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು ದಂಬುಲ್ಲಾ ಔರ ತಂಡವು ಗುರಿ ಮುಟ್ಟಿತು.

ಈ ಗೆಲುವಿನೊಂದಿಗೆ ದುಂಬುಲ್ಲಾ ಔರ ತಂಡ ಲಂಕಾ ಪ್ರೀಮಿಯರ್ ಲೀಗ್​ನ ಫೈನಲ್​ಗೆ ಎಂಟ್ರಿ ಕೊಟ್ಟಿದೆ. ಇನ್ನು ಸೋತಿರುವ ಗಾಲೆ ಟೈಟಾನ್ಸ್ ತಂಡವು ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ತಂಡದೊಡನೆ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ.

ದಂಬುಲ್ಲಾ ಔರ ಪ್ಲೇಯಿಂಗ್ 11: ಅವಿಷ್ಕಾ ಫೆರ್ನಾಂಡೋ , ಕುಸಾಲ್ ಮೆಂಡಿಸ್ (ನಾಯಕ) , ಸದೀರ ಸಮರವಿಕ್ರಮ , ಕುಸಾಲ್ ಪೆರೇರಾ , ಧನಂಜಯ ಡಿ ಸಿಲ್ವಾ , ಅಲೆಕ್ಸ್ ರಾಸ್ , ಹೇಡನ್ ಕೆರ್ , ದುಶನ್ ಹೇಮಂತ , ಹಸನ್ ಅಲಿ , ಬಿನೂರ ಫರ್ನಾಂಡೋ , ನೂರ್ ಅಹ್ಮದ್.

ಇದನ್ನೂ ಓದಿ: IPL 2024: ಮತ್ತೆ ಬದಲಾಗಲಿದೆಯಾ RCB ತಂಡದ ನಾಯಕತ್ವ..?

ಗಾಲೆ ಟೈಟಾನ್ಸ್ ಪ್ಲೇಯಿಂಗ್ 11: ಲಸಿತ್ ಕ್ರೂಸ್ಪುಲ್ಲೆ , ಲಿಟ್ಟನ್ ದಾಸ್ (ವಿಕೆಟ್ ಕೀಪರ್) , ಭಾನುಕಾ ರಾಜಪಕ್ಸೆ , ಶಕೀಬ್ ಅಲ್ ಹಸನ್ , ನಜಿಬುಲ್ಲಾ ಝದ್ರಾನ್ , ದಾಸುನ್ ಶನಕ (ನಾಯಕ) , ಲಹಿರು ಸಮರಕೋನ್ , ಸೀಕ್ಕುಗೆ ಪ್ರಸನ್ನ , ಕಸುನ್ ರಜಿತ , ಲಹಿರು ಕುಮಾರ , ತಬ್ರೈಝ್ ಶಮ್ಸಿ.

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!