AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್ ಜೈಂಟ್ಸ್​ ವಿರುದ್ಧ ಇಂಡಿಯಾ ಕ್ಯಾಪಿಟಲ್ಸ್​ ತಂಡಕ್ಕೆ ರೋಚಕ ಜಯ

India Capitals vs Gujarat Giants: 30 ಎಸೆತಗಳನ್ನು ಎದುರಿಸಿದ ಗೌತಮ್ ಗಂಭೀರ್ 1 ಸಿಕ್ಸ್​ ಹಾಗೂ 7 ಫೋರ್​ಗಳೊಂದಿಗೆ 51 ರನ್ ಬಾರಿಸಿದರು. ಇನ್ನು ಕೆವಿನ್ ಪೀಟರ್ಸನ್ 26 ರನ್ ಬಾರಿಸಿದರೆ, ಬೆನ್ ಡಕ್ 10 ಎಸೆತಗಳಲ್ಲಿ 30 ರನ್ ಸಿಡಿಸಿದರು. ಇನ್ನು ಅಂತಿಮ ಹಂತದಲ್ಲಿ ಭರತ್ ಚಿಪ್ಲಿ 16 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್​ ಹಾಗೂ 2 ಫೋರ್​ಗಳೊಂದಿಗೆ 35 ರನ್ ಬಾರಿಸಿದರು.

ಗುಜರಾತ್ ಜೈಂಟ್ಸ್​ ವಿರುದ್ಧ ಇಂಡಿಯಾ ಕ್ಯಾಪಿಟಲ್ಸ್​ ತಂಡಕ್ಕೆ ರೋಚಕ ಜಯ
Legends League Cricket
TV9 Web
| Edited By: |

Updated on: Dec 06, 2023 | 11:17 PM

Share

ಸೂರತ್​ನ ಲಾಲ್​ಭಾಯ್ ಸ್ಟೇಡಿಯಂನಲ್ಲಿ ನಡೆದ ಲೆಜೆಂಡ್ಸ್ ಲೀಗ್​ನ ಎಲಿಮಿನೇಟರ್ ಪಂದ್ಯದಲ್ಲಿ ಇಂಡಿಯಾ ಕ್ಯಾಪಿಟಲ್ಸ್ ತಂಡ ರೋಚಕ ಜಯ ಸಾಧಿಸಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಜೈಂಟ್ಸ್​ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಇಂಡಿಯಾ ಕ್ಯಾಪಿಟಲ್ಸ್ ತಂಡಕ್ಕೆ ನಾಯಕ ಗೌತಮ್ ಗಂಭೀರ್ ಭರ್ಜರಿ ಆರಂಭ ಒದಗಿಸಿದ್ದರು.

30 ಎಸೆತಗಳನ್ನು ಎದುರಿಸಿದ ಗೌತಮ್ ಗಂಭೀರ್ 1 ಸಿಕ್ಸ್​ ಹಾಗೂ 7 ಫೋರ್​ಗಳೊಂದಿಗೆ 51 ರನ್ ಬಾರಿಸಿದರು. ಇನ್ನು ಕೆವಿನ್ ಪೀಟರ್ಸನ್ 26 ರನ್ ಬಾರಿಸಿದರೆ, ಬೆನ್ ಡಕ್ 10 ಎಸೆತಗಳಲ್ಲಿ 30 ರನ್ ಸಿಡಿಸಿದರು. ಇನ್ನು ಅಂತಿಮ ಹಂತದಲ್ಲಿ ಭರತ್ ಚಿಪ್ಲಿ 16 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್​ ಹಾಗೂ 2 ಫೋರ್​ಗಳೊಂದಿಗೆ 35 ರನ್ ಬಾರಿಸಿದರು. ಪರಿಣಾಮ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಇಂಡಿಯಾ ಕ್ಯಾಪಿಟಲ್ಸ್​ ತಂಡ 223 ರನ್ ಬಾರಿಸಿದರು.

224 ರನ್​ಗಳ ಗುರಿಯನ್ನು ಬೆನ್ನತ್ತಿದ ಗುಜರಾತ್ ಜೈಂಟ್ಸ್ ತಂಡಕ್ಕೆ ಕ್ರಿಸ್ ಗೇಲ್​ ಸ್ಪೋಟಕ ಆರಂಭ ಒದಗಿಸಿದರು. 55 ಎಸೆತಗಳನ್ನು ಎದುರಿಸಿದ ಗೇಲ್ 4 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 84 ಬಾರಿಸಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ 33 ಎಸೆತಗಳಲ್ಲಿ ಕೆವಿನ್ ಓ ಬ್ರಿಯಾನ್ 2 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 57 ರನ್ ಸಿಡಿಸಿದರು.

ಪರಿಣಾಮ ಕೊನೆಯ ಓವರ್​ನಲ್ಲಿ ಗುಜರಾತ್ ಜೈಂಟ್ಸ್ ತಂಡಕ್ಕೆ 20 ರನ್​ಗಳು ಬೇಕಿತ್ತು. ಆದರೆ ಅಂತಿಮ ಓವರ್​ನಲ್ಲಿ ಕೇವಲ 8 ರನ್ ನೀಡುವ ಮೂಲಕ ಇಸುರು ಉದಾನ ಇಂಡಿಯಾ ಕ್ಯಾಪಿಟಲ್ಸ್ ತಂಡಕ್ಕೆ ರೋಚಕ ಜಯ ತಂದುಕೊಟ್ಟರು.

ಗುಜರಾತ್ ಜೈಂಟ್ಸ್​ ಪ್ಲೇಯಿಂಗ್ ಇಲೆವೆನ್: ಜಾಕ್ವೆಸ್ ಕಾಲಿಸ್ , ಕೆವಿನ್ ಒ ಬ್ರಿಯಾನ್ , ರಿಚರ್ಡ್ ಲೆವಿ , ಪಾರ್ಥಿವ್ ಪಟೇಲ್ (ನಾಯಕ) , ಅಭಿಷೇಕ್ ಜುಂಜುನ್ವಾಲಾ , ಸೀಕ್ಕುಗೆ ಪ್ರಸನ್ನ , ರಾಯದ್ ಎಮ್ರಿಟ್ , ಎಸ್ ಶ್ರೀಶಾಂತ್ , ಸರಬ್ಜಿತ್ ಲಡ್ಡಾ , ರಜತ್ ಭಾಟಿಯಾ , ಈಶ್ವರ್ ಚೌಧರಿ.

ಇದನ್ನೂ ಓದಿ: IND vs ENG: ಟೀಮ್ ಇಂಡಿಯಾಗೆ ಸೋಲುಣಿಸಿದ ಇಂಗ್ಲೆಂಡ್

ಇಂಡಿಯಾ ಕ್ಯಾಪಿಟಲ್ಸ್ ಪ್ಲೇಯಿಂಗ್ ಇಲೆವೆನ್: ಗೌತಮ್ ಗಂಭೀರ್ (ನಾಯಕ) , ರಿಕಾರ್ಡೊ ಪೊವೆಲ್ , ಕಿರ್ಕ್ ಎಡ್ವರ್ಡ್ಸ್ , ಬೆನ್ ಡಂಕ್ ( wk ) , ಕೆವಿನ್ ಪೀಟರ್ಸನ್ , ಆಶ್ಲೇ ನರ್ಸ್ , ಭರತ್ ಚಿಪ್ಲಿ , ರಸ್ಟಿ ಥರಾನ್ , ಇಸುರು ಉದಾನಾ , ಕೆಪಿ ಅಪ್ಪಣ್ಣ , ಈಶ್ವರ್ ಪಾಂಡೆ.

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು