AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Leicestershire vs India: ಟೀಮ್ ಇಂಡಿಯಾದ ಅಭ್ಯಾಸ ಪಂದ್ಯದ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ

Leicestershire vs India: ಟಾಸ್ ಗೆದ್ದಿರುವ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಹಾಗೆಯೇ ಟೀಮ್ ಇಂಡಿಯಾ ವಿರುದ್ದ ಜಸ್​ಪ್ರೀತ್ ಬುಮ್ರಾ ಮತ್ತು ಪ್ರಸಿದ್ಧ್ ಕೃಷ್ಣ ಬೌಲಿಂಗ್ ಅನ್ನು ಕೂಡ ಆರಂಭಿಸಿದ್ದಾರೆ.

Leicestershire vs India: ಟೀಮ್ ಇಂಡಿಯಾದ ಅಭ್ಯಾಸ ಪಂದ್ಯದ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ
Leicestershire vs India
TV9 Web
| Edited By: |

Updated on:Jun 23, 2022 | 4:54 PM

Share

ಭಾರತ-ಇಂಗ್ಲೆಂಡ್ (India vs England) ನಡುವಣ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಅಭ್ಯಾಸ ಪಂದ್ಯವನ್ನು ಆಡುತ್ತಿದೆ. ಲೀಸೆಸ್ಟರ್ಷೈರ್ (Leicestershire vs India) ತಂಡ ವಿರುದ್ಧ ಟೀಮ್ ಇಂಡಿಯಾ ವಾರ್ಮ್​ ಅಪ್ ಮ್ಯಾಚ್ ಶುರುವಾಗಿದ್ದು, ಈ ಪಂದ್ಯವು ನಾಲ್ಕು ದಿನಗಳ ಕಾಲ ನಡೆಯಲಿದೆ. ವಿಶೇಷ ಎಂದರೆ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಕೆಲ ಸ್ಟಾರ್ ಆಟಗಾರರು ಎದುರಾಳಿ ತಂಡದ ಪರ ಕಣಕ್ಕಿಳಿದಿದ್ದಾರೆ. ಈ ಮೂಲಕ ಸಂಪೂರ್ಣ ಬಳಗ ಅಭ್ಯಾಸದಲ್ಲಿ ತೊಡಗಿಸಿಕೊಂಡಿದೆ. ಅದರಂತೆ ಲೀಸೆಸ್ಟರ್ಷೈರ್ ತಂಡದಲ್ಲಿ ಟೀಮ್ ಇಂಡಿಯಾದ ಚೇತೇಶ್ವರ್ ಪೂಜಾರ, ಜಸ್​ಪ್ರೀತ್ ಬುಮ್ರಾ, ರಿಷಭ್ ಪಂತ್ ಮತ್ತು ಪ್ರಸಿದ್ಧ್ ಕೃಷ್ಣ ಕಾಣಿಸಿಕೊಂಡಿದ್ದಾರೆ.

ಇದೀಗ ಪಂದ್ಯವು ಶುರುವಾಗಿದ್ದು, ಟಾಸ್ ಗೆದ್ದಿರುವ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಹಾಗೆಯೇ ಟೀಮ್ ಇಂಡಿಯಾ ವಿರುದ್ದ ಜಸ್​ಪ್ರೀತ್ ಬುಮ್ರಾ ಮತ್ತು ಪ್ರಸಿದ್ಧ್ ಕೃಷ್ಣ ಬೌಲಿಂಗ್ ಅನ್ನು ಕೂಡ ಆರಂಭಿಸಿದ್ದಾರೆ. ಇದು ಅಭ್ಯಾಸ ಪಂದ್ಯವಾಗಿರುವ ಈ ಮ್ಯಾಚ್​ನ ನೇರ ಪ್ರಸಾರ ಯಾವುದೇ ಟಿವಿ ಚಾನೆಲ್​ನಲ್ಲಿ ಇರುವುದಿಲ್ಲ. ಬದಲಾಗಿ ಫಾಕ್ಸ್​ ಟಿವಿ ಯೂಟ್ಯೂಬ್​ ಚಾನೆಲ್​ನಲ್ಲಿ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು.

ಟೀಮ್ ಇಂಡಿಯಾ-ಲೀಸೆಸ್ಟರ್ಷೈರ್ ಅಭ್ಯಾಸ ಪಂದ್ಯದ ನೇರ ಪ್ರಸಾರ:

ಲೀಸೆಸ್ಟರ್ಷೈರ್ ಪ್ಲೇಯಿಂಗ್​ 11: ಸ್ಯಾಮ್ಯುಯೆಲ್ ಇವಾನ್ಸ್ (ನಾಯಕ) , ಲೂಯಿಸ್ ಕಿಂಬರ್ , ಚೇತೇಶ್ವರ ಪೂಜಾರ , ರಿಷಭ್ ಪಂತ್ , ರೆಹಾನ್ ಅಹ್ಮದ್ , ಜೋಯ್ ಎವಿಸನ್ , ಸ್ಯಾಮ್ಯುಯೆಲ್ ಬೇಟ್ಸ್ (ವಿಕೆಟ್ ಕೀಪರ್) , ರೋಮನ್ ವಾಕರ್ , ಜಸ್ಪ್ರೀತ್ ಬುಮ್ರಾ , ಪ್ರಸಿದ್ಧ್ ಕೃಷ್ಣ , ವಿಲ್ ಡೇವಿಸ್.

ಟೀಮ್ ಇಂಡಿಯಾ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ) , ಶುಭಮನ್ ಗಿಲ್ , ಶ್ರೇಯಸ್ ಅಯ್ಯರ್ , ವಿರಾಟ್ ಕೊಹ್ಲಿ , ಹನುಮ ವಿಹಾರಿ , ಶ್ರೀಕರ್ ಭರತ್ ( ವಿಕೆಟ್ ಕೀಪರ್) , ರವೀಂದ್ರ ಜಡೇಜಾ , ಶಾರ್ದೂಲ್ ಠಾಕೂರ್ , ಮೊಹಮ್ಮದ್ ಶಮಿ , ಮೊಹಮ್ಮದ್ ಸಿರಾಜ್ , ಉಮೇಶ್ ಯಾದವ್.

ಇಂಗ್ಲೆಂಡ್ ವಿರುದ್ಧದ ಸರಣಿಯ ವೇಳಾಪಟ್ಟಿ ಹೀಗಿದೆ:

ಜುಲೈ 1 – 5: ಏಕೈಕ ಟೆಸ್ಟ್ ಪಂದ್ಯ (ಎಡ್ಜ್‌ಬಾಸ್ಟನ್) ಜುಲೈ 7: ಮೊದಲ ಟಿ20 ಪಂದ್ಯ (ಏಜಿಯಾಸ್ ಬೌಲ್) ಜುಲೈ 9: 2ನೇ ಟಿ20 ಪಂದ್ಯ (ಎಡ್ಜ್‌ಬಾಸ್ಟನ್) ಜುಲೈ 10: 3ನೇ ಟಿ20 ಪಂದ್ಯ (ಟ್ರೆಂಟ್ ಬ್ರಿಡ್ಜ್)

ಏಕದಿನ ಸರಣಿ ವೇಳಾಪಟ್ಟಿ:

ಜುಲೈ 12- ಮೊದಲ ಏಕದಿನ ಪಂದ್ಯ (ಕಿಯಾ ಓವಲ್) ಜುಲೈ 14- 2ನೇ ಏಕದಿನ ಪಂದ್ಯ (ಲಾರ್ಡ್ಸ್) ಜುಲೈ 17- 3ನೇ ಏಕದಿನ ಪಂದ್ಯ (ಮ್ಯಾಂಚೆಸ್ಟರ್)

ಭಾರತ ಟೆಸ್ಟ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಬ್ ಪಂತ್, ಕೆಎಸ್ ಭರತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ , ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಪ್ರಸಿಧ್ದ್ ಕೃಷ್ಣ.

Published On - 4:24 pm, Thu, 23 June 22

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ