Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ರೋಚಕ ಪಂದ್ಯದಲ್ಲಿ ಮುಂಬೈ ಮಣಿಸಿದ ಲಕ್ನೋ; ಟೂರ್ನಿಯಲ್ಲಿ 2ನೇ ಜಯ

LSG Triumphs Over MI in IPL 2025: ಲಕ್ನೋ ಸೂಪರ್ ಜೈಂಟ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಐಪಿಎಲ್ 2025 ರ ಪಂದ್ಯದಲ್ಲಿ 12 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಮಿಚೆಲ್ ಮಾರ್ಷ್ ಮತ್ತು ಆಯುಷ್ ಬಡೋನಿಯವರ ಅರ್ಧಶತಕಗಳೊಂದಿಗೆ ಲಕ್ನೋ 204 ರನ್‌ಗಳ ಗುರಿಯನ್ನು ನಿಗದಿಪಡಿಸಿತು. ಸೂರ್ಯಕುಮಾರ್ ಯಾದವ್ ಅವರ ಅರ್ಧಶತಕದ ಹೊರತಾಗಿಯೂ ಮುಂಬೈ 191 ರನ್‌ಗಳಿಗೆ ಸೀಮಿತವಾಯಿತು. ಲಕ್ನೋದ ಬೌಲರ್‌ಗಳು ಅಂತಿಮ ಓವರ್‌ಗಳಲ್ಲಿ ಅದ್ಭುತ ಪ್ರದರ್ಶನ ನೀಡಿದರು.

IPL 2025: ರೋಚಕ ಪಂದ್ಯದಲ್ಲಿ ಮುಂಬೈ ಮಣಿಸಿದ ಲಕ್ನೋ; ಟೂರ್ನಿಯಲ್ಲಿ 2ನೇ ಜಯ
Lsg Vs Mi
Follow us
ಪೃಥ್ವಿಶಂಕರ
|

Updated on:Apr 04, 2025 | 11:56 PM

ಲಕ್ನೋ ಸೂಪರ್ ಜೈಂಟ್ಸ್ ತಂಡ ಐಪಿಎಲ್ 2025 (IPL 2025) ರಲ್ಲಿ ತನ್ನ ಎರಡನೇ ಗೆಲುವು ದಾಖಲಿಸಿದೆ. ತನ್ನ ತವರು ನೆಲವಾದ ಏಕಾನಾ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 12 ರನ್‌ಗಳಿಂದ ಸೋಲಿಸುವಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ (MI vs LSG) ಯಶಸ್ವಿಯಾಗಿದೆ. ಲಕ್ನೋದ ಈ ಗೆಲುವಿನಲ್ಲಿ ಬೌಲರ್​ಗಳ ಪಾತ್ರ ಅಪಾರವಾಗಿತ್ತು. ಅದರಲ್ಲೂ ಕೊನೆಯ 3 ಓವರ್​ಗಳಲ್ಲಿ ಲಕ್ನೋ ಬೌಲರ್​ಗಳು ಮುಂಬೈ ಬ್ಯಾಟರ್​ಗಳಿಗೆ ಯಾವುದೇ ಬಿಗ್ ಶಾಟ್ ಹೊಡೆಯುವ ಅವಕಾಶ ಕೊಡಲಿಲ್ಲ. ಇದರಿಂದ ಒತ್ತಡಕ್ಕೆ ಸಿಲುಕಿದ ಮುಂಬೈ ಬ್ಯಾಟರ್​​ಗಳು ತಂಡಕ್ಕೆ ಗೆಲುವು ತಂದುಕೊಡುವಲ್ಲಿ ವಿಫಲರಾದರು. ಅಂತಿಮವಾಗಿ ಮುಂಬೈ, ಲಕ್ನೋ ನೀಡಿದ 204 ರನ್‌ಗಳ ಗುರಿಗೆ ಪ್ರತಿಯಾಗಿ 191 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

ಮಾರ್ಷ್​- ಮಾರ್ಕ್ರಾಮ್ ಅರ್ಧಶತಕ

ಏಪ್ರಿಲ್ 4, ಶುಕ್ರವಾರ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಪರ ಆರಂಭಿಕ ಆಟಗಾರ ಮಿಚೆಲ್ ಮಾರ್ಷ್ ಸ್ಫೋಟಕ ಇನ್ನಿಂಗ್ಸ್ ಆಡಿದರು. ಕೇವಲ 27 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಮಾರ್ಷ್, 31 ಎಸೆತಗಳಲ್ಲಿ 60 ರನ್ ಗಳಿಸಿ ಔಟಾದರು. ಮತ್ತೊಬ್ಬ ಆರಂಭಿಕ ಐಡೆನ್ ಮಾರ್ಕ್ರಾಮ್ ಕೂಡ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ಈ ಸೀಸನ್​ನ ಮೊದಲ ಅರ್ಧಶತಕ ಬಾರಿಸಿದರು. ಆದಾಗ್ಯೂ, ಈ ಬಾರಿ ನಿಕೋಲಸ್ ಪೂರನ್ ಬಿಗ್ ಇನ್ನಿಂಗ್ಸ್ ಆಡುವಲ್ಲಿ ವಿಫಲರಾದರೆ, ನಾಯಕ ಪಂತ್​ಗೆ ಸತತ ನಾಲ್ಕನೇ ಪಂದ್ಯದಲ್ಲೂ ಮಿಂಚಲು ಸಾಧ್ಯವಾಗಲಿಲ್ಲ.

5 ವಿಕೆಟ್ ಪಡೆದ ಹಾರ್ದಿಕ್

ಆರಂಭಿಕ ಆಟಗಾರರ ನಂತರ, ಆಯುಷ್ ಬಡೋನಿ ಮಧ್ಯಮ ಕ್ರಮಾಂಕದಲ್ಲಿ ಸಣ್ಣ ಆದರೆ ಬಿರುಗಾಳಿಯ ಇನ್ನಿಂಗ್ಸ್ ಆಡಿದರು. ಡೇವಿಡ್ ಮಿಲ್ಲರ್ ಕೊನೆಯ ಓವರ್‌ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿ ತಂಡವನ್ನು 200 ರನ್‌ಗಳ ಗಡಿ ದಾಟಿಸಿದರು. ಮುಂಬೈ ಪರ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ 4 ಓವರ್‌ಗಳಲ್ಲಿ 36 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಬಳಿಸಿದರು. ಹಾರ್ದಿಕ್ ತಮ್ಮ ಟಿ20 ವೃತ್ತಿಜೀವನದಲ್ಲಿ ಮೊದಲ ಬಾರಿಗೆ 5 ವಿಕೆಟ್‌ಗಳನ್ನು ಕಬಳಿಸಿದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಮೊದಲ ನಾಯಕ ಎಂಬ ದಾಖಲೆ ಬರೆದರು.

ಇದನ್ನೂ ಓದಿ
Image
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
Image
ಪ್ಲೇಯಿಂಗ್ 11 ಜೊತೆಗೆ ಇಂಪ್ಯಾಕ್ಟ್ ಪ್ಲೇಯರ್ ಪಟ್ಟಿಯಲ್ಲೂ ರೋಹಿತ್ ಹೆಸರಿಲ್ಲ
Image
ಲಕ್ನೋ ವಿರುದ್ಧ ಸೋತ ಮುಂಬೈ
Image
ಪಂಜಾಬ್​ಗೆ ಸತತ 2ನೇ ಜಯ; ತವರಿನಲ್ಲಿ ಸೋತ ಲಕ್ನೋ

ಮುಂಬೈಗೆ ಕಳಪೆ ಆರಂಭ

200 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ ಮುಂಬೈನ ಹೊಸ ಆರಂಭಿಕ ಜೋಡಿ ಉತ್ತಮ ಆರಂಭ ಒದಗಿಸಿಕೊಡುವಲ್ಲಿ ವಿಫಲವಾಯಿತು. ಮೊಣಕಾಲಿನ ಗಾಯದಿಂದಾಗಿ ರೋಹಿತ್ ಶರ್ಮಾ ಈ ಪಂದ್ಯದಿಂದ ಹೊರಗುಳಿದಿದ್ದರು. ಅಂತಹ ಪರಿಸ್ಥಿತಿಯಲ್ಲಿ, ಅವರ ಸ್ಥಾನದಲ್ಲಿ ಬಂದ ವಿಲ್ ಜ್ಯಾಕ್ಸ್‌ ಮತ್ತೊಮ್ಮೆ ಬಿಗ್ ಇನ್ನಿಂಗ್ಸ್ ಆಡುವಲ್ಲಿ ವಿಫಲರಾದರು. ತಂಡದ ಆರಂಭಿಕರಿಬ್ಬರೂ ಕೇವಲ 17 ರನ್‌ಗಳಿಗೆ ಪೆವಿಲಿಯನ್‌ ಸೇರಿಕೊಂಡರು. ಇಲ್ಲಿಂದ ನಮನ್ ಧೀರ್ ಹಾಗೂ ಸೂರ್ಯಕುಮಾರ್ ಯಾದವ್ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ನಮನ್ ಕೇವಲ 24 ಎಸೆತಗಳಲ್ಲಿ 46 ರನ್ ಗಳಿಸಿ ಔಟಾದರೆ, ಸೂರ್ಯಕುಮಾರ್ ಯಾದವ್ ಏಕಾಂಗಿ ಹೋರಾಟ ಮುಂದುವರೆಸಿದರು.

IPL 2025: ಸಿಎಸ್​ಕೆ ತಂಡಕ್ಕೆ ಎಂಎಸ್ ಧೋನಿ ನಾಯಕ..! ಫ್ರಾಂಚೈಸಿಯ ಅಚ್ಚರಿಯ ನಿರ್ಧಾರ

ಸೂರ್ಯ ಅರ್ಧಶತಕ ವ್ಯರ್ಥ

ಅಂತಿಮವಾಗಿ ಫಾರ್ಮ್‌ಗೆ ಮರಳಿದ ಸೂರ್ಯಕುಮಾರ್ ತಿಂಗಳುಗಳ ನಂತರ ಟಿ20 ಕ್ರಿಕೆಟ್‌ನಲ್ಲಿ ತಮ್ಮ ಮೊದಲ ಅರ್ಧಶತಕವನ್ನು ಗಳಿಸಿದರು. ಆದಾಗ್ಯೂ, ಮತ್ತೊಂದೆಡೆ, ತಿಲಕ್ ವರ್ಮಾ ಹೋರಾಟ ಮುಂದುವರೆಸಿದರು, ಇದು ಮುಂಬೈ ಸ್ಕೋರ್ ಬೋರ್ಡ್​ ಮೇಲೆ ಪರಿಣಾಮ ಬೀರಿತು. 17 ನೇ ಓವರ್‌ನ ಮೊದಲ ಎಸೆತದಲ್ಲಿ ಸೂರ್ಯ ಅವರ ವಿಕೆಟ್ ಪಡೆಯುವ ಮೂಲಕ ಆವೇಶ್ ಖಾನ್ ಮುಂಬೈಗೆ ದೊಡ್ಡ ಹೊಡೆತ ನೀಡಿದರು. ನಾಯಕ ಹಾರ್ದಿಕ್ ಬಂದ ತಕ್ಷಣ ಕೆಲವು ದೊಡ್ಡ ಹೊಡೆತಗಳನ್ನು ಬಾರಿಸುವ ಮೂಲಕ ಭರವಸೆಯನ್ನು ಜೀವಂತವಾಗಿರಿಸಿಕೊಂಡರು.

ಕೊನೆಯ 2 ಓವರ್‌ಗಳಲ್ಲಿ ಮುಂಬೈ ತಂಡಕ್ಕೆ 29 ರನ್‌ಗಳು ಬೇಕಾಗಿದ್ದವು ಆದರೆ ಶಾರ್ದೂಲ್ ಠಾಕೂರ್ ಕೇವಲ 7 ರನ್‌ಗಳನ್ನು ನೀಡುವ ಮೂಲಕ ಗುರಿಯನ್ನು ಕಷ್ಟಕರವಾಗಿಸಿದರು. ಈ ಸಮಯದಲ್ಲಿ ತಿಲಕ್ ವರ್ಮಾ ರಿಟೈರ್ಡ್​ ಹರ್ಟ್​ ಆಗಿ ಪೆವಿಲಿಯನ್ ಸೇರಿಕೊಂಡರು. ಕೊನೆಯ ಓವರ್‌ನಲ್ಲಿ 22 ರನ್‌ಗಳು ಬೇಕಾಗಿದ್ದವು. ಆವೇಶ್ ಖಾನ್ ಎಸೆದ ಮೊದಲ ಎಸೆತದಲ್ಲಿ ಹಾರ್ದಿಕ್ ಸಿಕ್ಸರ್ ಬಾರಿಸಿದರು, ಆದರೆ ಮುಂದಿನ 5 ಎಸೆತಗಳಲ್ಲಿ ಕೇವಲ 3 ರನ್‌ಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು. ಅಂತಿಮವಾಗಿ ಮುಂಬೈ ತಂಡ 5 ವಿಕೆಟ್ ಕಳೆದುಕೊಂಡು 191 ರನ್ ಗಳಿಸಲಷ್ಟೇ ಶಕ್ತವಾಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:53 pm, Fri, 4 April 25

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ