ಪಾಯಿಂಟ್ಸ್ ಟೇಬಲ್​ನಲ್ಲಿ ದಿಢೀರ್ ಐದನೇ ಸ್ಥಾನಕ್ಕೆ ಜಿಗಿದ ಲಕ್ನೋ: ಆರೆಂಜ್ ಕ್ಯಾಪ್ ಕೊಹ್ಲಿ ಬಳಿ ಭದ್ರ

IPL 2024 Points Table: ಐಪಿಎಲ್ 2024 ರಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ವಿರುದ್ಧ ಲಕ್ನೋ ಸೂಪರ್ ಜೇಂಟ್ಸ್ ತಂಡ 21 ರನ್​​ಗಳ ಭರ್ಜರಿ ಜಯ ಸಾಧಿಸಿತು. ಇಂದು ಡಬಲ್ ಹೆಡರ್ ಪಂದ್ಯಗಳು ನಡೆಯಲಿವೆ. ಇದೀಗ ಐಪಿಎಲ್ 2024 ಪಾಯಿಂಟ್ಸ್ ಟೇಬಲ್ ಹೇಗಿದೆ ನೋಡೋಣ.

ಪಾಯಿಂಟ್ಸ್ ಟೇಬಲ್​ನಲ್ಲಿ ದಿಢೀರ್ ಐದನೇ ಸ್ಥಾನಕ್ಕೆ ಜಿಗಿದ ಲಕ್ನೋ: ಆರೆಂಜ್ ಕ್ಯಾಪ್ ಕೊಹ್ಲಿ ಬಳಿ ಭದ್ರ
IPL 2024 Points Table
Follow us
|

Updated on: Mar 31, 2024 | 6:59 AM

ಇಂಡಿಯನ್ ಪ್ರೀಮಿಯರ್ ಲೀಗ್ 2024 (IPL 2024) ಟೂರ್ನಿ ಆರಂಭವಾಗಿ ಒಂದು ವಾರ ಕಳೆದಿದ್ದು, ಈವರೆಗೆ ಒಟ್ಟು ಹನ್ನೊಂದು ಪಂದ್ಯಗಳು ನಡೆದಿವೆ. ಶನಿವಾರ ಲಕ್ನೋದ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ವಿರುದ್ಧ ಲಕ್ನೋ ಸೂಪರ್ ಜೇಂಟ್ಸ್ ತಂಡ 21 ರನ್​​ಗಳ ಭರ್ಜರಿ ಜಯ ಸಾಧಿಸಿತು. ಇಂದು ಐಪಿಎಲ್​ನಲ್ಲಿ ಎರಡು ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯದಲ್ಲಿ ಗುಜರಾತ್-ಹೈದರಾಬಾದ್ ಹಾಗೂ ಎರಡನೇ ಪಂದ್ಯದಲ್ಲಿ ಡೆಲ್ಲಿ-ಸಿಎಸ್​ಕೆ ಮುಖಾಮುಖಿ ಆಗಲಿವೆ. ಇದೀಗ ಐಪಿಎಲ್ 2024 ಪಾಯಿಂಟ್ಸ್ ಟೇಬಲ್ ಹೇಗಿದೆ ನೋಡೋಣ.

  1. ರುತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಗ್ರಸ್ಥಾನದಲ್ಲಿ ಭದ್ರವಾಗಿದೆ. ಇವರು ಆಡಿರುವ ಎರಡು ಪಂದ್ಯಗಳ ಪೈಕಿ ಎರಡರಲ್ಲೂ ಜಯ ಸಾಧಿಸಿ ನಾಲ್ಕು ಅಂಕ ಪಡೆದು +1.979 ರನ್​ರೇಟ್ ಹೊಂದಿದೆ.
  2. ಆರ್​ಸಿಬಿ ವಿರುದ್ಧ ಗೆದ್ದು ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಎರಡನೇ ಸ್ಥಾನಕ್ಕೆ ಜಿಗಿದಿದೆ. ಇವರು ಆಡಿದ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿ 4 ಪಾಯಿಂಟ್ಸ್ ಪಡೆದಿದೆ. ಇವರ ನೆಟ್​ ರನ್​ರೇಟ್ +1.047 ಆಗಿದೆ.
  3. ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಪಾಯಿಂಟ್ಸ್ ಟೇಬಲ್​ನಲ್ಲಿ ಮೂರನೇ ಸ್ಥಾನದಲ್ಲಿದೆ. ಆಡಿದ ಎರಡೂ ಪಂದ್ಯದಲ್ಲಿ ಜಯ ಸಾಧಿಸಿ ನಾಲ್ಕು ಅಂಕ ಪಡೆದು +0.800 ರನ್​ರೇಟ್ ಹೊಂದಿದೆ.
  4. ಇನ್ನು ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಸನ್​ರೈಸರ್ಸ್ ಹೈದರಾಬಾದ್ ತಂಡ ಆಡಿದ ಎರಡು ಪಂದ್ಯಗಳಲ್ಲಿ ಒಂದು ಸೋಲು- ಒಂದು ಜಯ ಕಂಡು 2 ಪಾಯಿಂಟ್ಸ್ ಪಡೆದು ನಾಲ್ಕನೇ ಸ್ಥಾನಕ್ಕೇರಿದೆ. ಇವರ ನೆಟ್​ ರನ್​ರೇಟ್ +0.675 ಆಗಿದೆ.
  5. ಕೆಎಲ್ ರಾಹುಲ್ ನಾಯಕತ್ವದ ಲಖನೌ ಸೂಪರ್ ಜೇಂಟ್ಸ್ ತಂಡ ಐದನೇ ಸ್ಥಾನಕ್ಕೆ ಜಿಗಿದಿದೆ. ಆಡಿದ ಎರಡು ಪಂದ್ಯಗಳಲ್ಲಿ ತಕಾ ಒಂದು ಜಯ-ಸೋಲು ಕಂಡು 2 ಅಂಕ ಪಡೆದುಕೊಂಡಿದೆ. ಇವರ ನೆಟ್​ ರನ್​ರೇಟ್ +0.025 ಆಗಿದೆ.
  6. ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ಆಡಿದ ಮೂರು ಪಂದ್ಯದಲ್ಲಿ ಒಂದು ಜಯ, ಎರಡು ಸೋಲು ಕಂಡು 2 ಪಾಯಿಂಟ್ಸ್ ಪಡೆದು ಆರನೇ ಸ್ಥಾನದಲ್ಲಿದೆ. ಇವರ ನೆಟ್​ ರನ್​ರೇಟ್ +0.337 ಆಗಿದೆ.
  7. ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಏಳನೇ ಸ್ಥಾನದಲ್ಲೇ ಉಳಿದಿದೆ. ಆಡಿದ 3 ಪಂದ್ಯದಲ್ಲಿ ಎರಡು ಸೋಲು, ಒಂದು ಜಯ ಕಂಡು 2 ಅಂಕ ಪಡೆದು ಕೊಂಡಿದೆ. ಇವರ ನೆಟ್​ ರನ್​ರೇಟ್ -0.711 ಆಗಿದೆ.
  8. ಶುಭ್​ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಆಡಿದ ಎರಡು ಪಂದ್ಯಗಳ ಪೈಕಿ ಒಂದರಲ್ಲಿ ಜಯ-ಮತ್ತೊಂದರಲ್ಲಿ ಸೋಲು ಕಂಡು 2 ಪಾಯಿಂಟ್ಸ್ ಪಡೆದು ಎಂಟನೇ ಸ್ಥಾನದಲ್ಲಿದೆ. ಇವರ ನೆಟ್​ ರನ್​ರೇಟ್ -1.425 ಆಗಿದೆ.
  9. ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿದ ಎರಡೂ ಪಂದ್ಯಗಳಲ್ಲಿ ಸೋಲು ಕಂಡು ಯಾವುದೇ ಪಾಯಿಂಟ್ಸ್ ಪಡೆಯದೆ ಒಂಬತ್ತನೇ ಸ್ಥಾನದಲ್ಲಿದೆ. ಇವರ ನೆಟ್​ ರನ್​ರೇಟ್ -0.528 ಆಗಿದೆ.
  10. ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಆಡಿದ ಎರಡೂ ಪಂದ್ಯದಲ್ಲಿ ಸೋಲು ಕಂಡು ಯಾವುದೇ ಪಾಯಿಂಟ್ಸ್ ಪಡೆಯದೆ ಹತ್ತನೇ ಸ್ಥಾನದಲ್ಲಿದೆ. ಇವರ ನೆಟ್​ ರನ್​ರೇಟ್ -0.925 ಆಗಿದೆ.

ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ, ಆರ್​ಸಿಬಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಇವರು ಆಡಿರುವ ಮೂರು ಪಂದ್ಯಗಳಲ್ಲಿ ಒಟ್ಟು 181 ರನ್ ಗಳಿಸಿದ್ದಾರೆ. ಹೈದರಾಬಾದ್ ತಂಡದ ಹೆನ್ರಿಚ್ ಕ್ಲಾಸೆನ್ ಎರಡನೇ ಸ್ಥಾನದಲ್ಲಿದ್ದಾರೆ. ಇವರು ಆಡಿರುವ ಎರಡು ಪಂದ್ಯಗಳಲ್ಲಿ 143 ರನ್ ಕಲೆಹಾಕಿದ್ದಾರೆ. ಪಂಜಾಬ್ ತಂಡದ ನಾಯಕ ಶಿಖರ್ ಧವನ್ ಮೂರನೇ ಸ್ಥಾನಕ್ಕೆ ಜಿಗಿದಿದ್ದು, ಇವರು ಆಡಿರುವ ಮೂರು ಪಂದ್ಯಗಳಿಂದ 137 ರನ್ ಸಿಡಿಸಿದ್ದಾರೆ.

ಪರ್ಪಲ್-ಕ್ಯಾಪ್ ಪಟ್ಟಿಯಲ್ಲಿ, ಸಿಎಸ್​ಕೆ ತಂಡದ ಮುಸ್ತಫಿಜುರ್ ರೆಹಮಾನ್ ಒಟ್ಟು 6 ವಿಕೆಟ್ ಪಡೆದು ಅಗ್ರ ಸ್ಥಾನವನ್ನು ಕಾಪಾಡಿಕೊಂಡಿದ್ದಾರೆ. ಅವರ ಹಿಂದೆ ಕೋಲ್ಕತ್ತಾ ತಂಡದ ಹರ್ಷಿತ್ ರಾಣ ಇದ್ದು, ಇವರು ಆಡಿರುವ ಎರಡು ಪಂದ್ಯಗಳಿಂದ 5 ವಿಕೆಟ್ ಪಡೆದಿದ್ದಾರೆ. ಪಂಜಾಬ್ ತಂಡದ ಕಗಿಸೊ ರಬಾಡ ಮೂರನೇ ಸ್ಥಾನದಲ್ಲಿದ್ದು, ಇವರು 4 ವಿಕೆಟ್ ಕಿತ್ತಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ