AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Eliminator: LSG vs RCB ಪಂದ್ಯಕ್ಕೆ ವರುಣನ ಅಡ್ಡಿ: ಹೀಗೆ ನಡೆಯಲಿದೆ ಮ್ಯಾಚ್

LSG vs RCB Playoffs Eliminator, IPL 2022: ಆರ್​ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯದ ವೇಳೆ ಮಳೆ ಬಂದು, ಅಂತಿಮವಾಗಿ ಸೂಪರ್ ಓವರ್​ ಕೂಡ ಆಡಲು ಸಾಧ್ಯವಾಗದಿದ್ದರೆ, ಪಾಯಿಂಟ್ಸ್​ ಟೇಬಲ್​ನಲ್ಲಿ ಮೇಲಿರುವ ತಂಡ ಮುಂದಿನ ಹಂತಕ್ಕೇರಲಿದೆ.

IPL 2022 Eliminator: LSG vs RCB ಪಂದ್ಯಕ್ಕೆ ವರುಣನ ಅಡ್ಡಿ: ಹೀಗೆ ನಡೆಯಲಿದೆ ಮ್ಯಾಚ್
lsg vs rcb
TV9 Web
| Updated By: ಝಾಹಿರ್ ಯೂಸುಫ್|

Updated on:May 25, 2022 | 7:34 PM

Share

IPL 2022: ಐಪಿಎಲ್​ ಸೀಸನ್ 15 ರ ಎಲಿಮಿನೇಟರ್ ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದೆ. ಕೊಲ್ಕತ್ತಾ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಬೇಕಿರುವ ಆರ್​ಸಿಬಿ-ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯವು ತುಂತುರು ಮಳೆಯ ಕಾರಣ ವಿಳಂಬವಾಗಿದೆ. ಟಾಸ್ ವೇಳೆ ತುಂತುರು ಮಳೆ ಬರಲಾಂಭಿಸಿದ್ದು, ಹೀಗಾಗಿ ಟಾಸ್ ಪ್ರಕ್ರಿಯೆಯನ್ನು ಮುಂದೂಡಲಾಗಿದೆ. ಇತ್ತ ಪಿಚ್​ ಸೇರಿದಂತೆ ಮೈದಾನದ ಭಾಗವನ್ನು ಕವರ್​ ಮಾಡಲಾಗಿದ್ದು, ಉತ್ತಮ ಗಾಳಿ ಬೀಸುತ್ತಿರುವ ಕಾರಣ ಪಂದ್ಯದ ವೇಳೆ ಮಳೆ ಬರಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇನ್ನು ಮಳೆ ಬಂದರೂ ಪಂದ್ಯವನ್ನು ಮುಂದುವರೆಸಲು ಈಗಾಗಲೇ ಬಿಸಿಸಿಐ ವಿಶೇಷ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಅದರಂತೆ ಎಲಿಮಿನೇಟರ್ ಹಾಗೂ 2ನೇ ಕ್ವಾಲಿಫೈಯರ್ ಪಂದ್ಯಗಳಿಗೆ ಮೀಸಲು ದಿನದಾಟ ನೀಡಲಾಗುವುದಿಲ್ಲ. ಬದಲಾಗಿ ಆಯಾ ದಿನವೇ ಪಂದ್ಯದ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ. ಇದಕ್ಕಾಗಿ ಹೆಚ್ಚುವರಿ ಸಮಯವಕಾಶ ನೀಡಲಾಗಿದೆ.

ಬಿಸಿಸಿಐ ಪ್ರಕಟಿಸಿರುವ ಹೊಸ ಮಾರ್ಗಸೂಚಿ ಹೀಗಿದೆ:

ಇದನ್ನೂ ಓದಿ
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು
Image
Virat Kohli: ಕೊಹ್ಲಿ ಕಡೆಯಿಂದ ರಶೀದ್ ಖಾನ್​​ಗೆ ಸ್ಪೆಷಲ್ ಗಿಫ್ಟ್​: ಸೇಫ್ ಆಗಿ ಇಟ್ಟಿರಿ ಎಂದ ಸೌತ್ ಆಫ್ರಿಕಾ ಕ್ರಿಕೆಟಿಗ
Image
KL Rahul: ಐಪಿಎಲ್​ನಲ್ಲಿ ರಾಹುಲ್ ಅಬ್ಬರ: ಸತತ 5ನೇ ಬಾರಿ ಕೆಎಲ್ ಕಿಂಗ್
Image
IPL 2022: ಬುಮ್ರಾ ದಾಖಲೆ ಮುರಿದ ಉಮ್ರಾನ್ ಮಲಿಕ್
  1. – ಪ್ಲೇಆಫ್​ ಹಂತದ ಕ್ವಾಲಿಫೈಯರ್ ಮತ್ತು ಎಲಿಮಿನೇಟರ್​ ಪಂದ್ಯಗಳ ವೇಳೆ ಮಳೆ ಬಂದರೆ ಹೆಚ್ಚುವರಿ 2 ಗಂಟೆಗಳ ಸಮಯವಕಾಶ ನೀಡಲಾಗುತ್ತದೆ. ಅಂದರೆ ಪಂದ್ಯವು ಮಳೆಯಿಂದ ವಿಳಂಬವಾದರೆ, ಮಳೆ ನಿಂತ ಬಳಿಕ ಪಂದ್ಯವನ್ನು ಶುರು ಮಾಡಲಾಗುತ್ತದೆ. ಅಲ್ಲದೆ ಓವರ್ ಕಡಿತಗೊಳಿಸುವುದಿಲ್ಲ.
  2. ಇನ್ನು ಮಳೆ ನಿಲ್ಲುವುದು ಮತ್ತಷ್ಟು ತಡವಾದರೆ ಓವರ್​ ಕಡಿತಗೊಳಿಸದೇ ರಾತ್ರಿ 9.40 ಕ್ಕೆ ಪಂದ್ಯವನ್ನು ಆಯೋಜಿಸಲಾಗುತ್ತದೆ.
  3. – ಈ ವೇಳೆಯೂ ಮಳೆಯಿಂದ ಅಡಚಣೆ ಉಂಟಾದರೆ 5 ಓವರ್​ಗಳ ಪಂದ್ಯಗಳನ್ನು ಆಡಿಸಲಾಗುತ್ತದೆ. ಅಂದರೆ ಒಂದು ತಂಡಕ್ಕೆ 5 ಓವರ್​ಗಳ ಇನಿಂಗ್ಸ್​ ಇರಲಿದೆ. ಈ ಪಂದ್ಯವನ್ನು ಆಯೋಜಿಸಲು ರಾತ್ರಿ 11.56 ಕ್ಕೆ ಸಮಯ ನಿಗದಿ ಮಾಡಲಾಗಿದೆ.
  4. – 5 ಓವರ್​ಗಳ ಪಂದ್ಯ ನಡೆಸಲು ನಿರ್ಧರಿಸಿದರೆ ಟೈಮ್ ಔಟ್ ಇರುವುದಿಲ್ಲ. ಹಾಗೆಯೇ ರಾತ್ರಿ 12.50 ರೊಳಗೆ ಪಂದ್ಯ ಮುಗಿಯಬೇಕು ಎಂದು ತಿಳಿಸಲಾಗಿದೆ.
  5. – ರಾತ್ರಿ 12.50 ರೊಳಗೆ ಪಂದ್ಯ ಮುಗಿಸಲು ಸಾಧ್ಯವಾಗದ ಪರಿಸ್ಥಿತಿಯಿದ್ದರೆ, ಸೂಪರ್ ಓವರ್ ಆಡಿಸಲಾಗುತ್ತದೆ.
  6. – ಇನ್ನು ಸೂಪರ್ ಓವರ್ ಕೂಡ ಆಡುವಂತಹ ಪರಿಸ್ಥಿತಿ ಇರದಿದ್ದರೆ, ಆ ಪಂದ್ಯವನ್ನು ರದ್ದು ಮಾಡಲಾಗುತ್ತದೆ. ಅಲ್ಲದೆ ಇಲ್ಲಿ ಪಾಯಿಂಟ್ಸ್​ ಟೇಬಲ್​ ಲೆಕ್ಕಚಾರ ಬರಲಿದೆ. ಅಂದರೆ ಲೀಗ್ ಹಂತದಲ್ಲಿ ಅತೀ ಹೆಚ್ಚು ಪಾಯಿಂಟ್ಸ್​ ಪಡೆದಿರುವ ತಂಡವು ಕ್ವಾಲಿಫೈಯರ್ ಆಗಲಿದೆ.

ಉದಾಹರಣೆಗೆ: ಆರ್​ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯದ ವೇಳೆ ಮಳೆ ಬಂದು, ಅಂತಿಮವಾಗಿ ಸೂಪರ್ ಓವರ್​ ಕೂಡ ಆಡಲು ಸಾಧ್ಯವಾಗದಿದ್ದರೆ, ಪಾಯಿಂಟ್ಸ್​ ಟೇಬಲ್​ನಲ್ಲಿ ಮೇಲಿರುವ ತಂಡ ಮುಂದಿನ ಹಂತಕ್ಕೇರಲಿದೆ. ಅಂದರೆ ಇಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಪಾಯಿಂಟ್ಸ್​ ಟೇಬಲ್​ನಲ್ಲಿ 3ನೇ ಸ್ಥಾನದಲ್ಲಿದೆ. ಹಾಗೆಯೇ ಆರ್​ಸಿಬಿ 4ನೇ ಸ್ಥಾನದಲ್ಲಿದೆ. ಇಲ್ಲಿ ಆರ್​ಸಿಬಿಗಿಂತ ಹೆಚ್ಚಿನ ಪಾಯಿಂಟ್ಸ್​ (18) ಲಕ್ನೋ ತಂಡಕ್ಕಿದ್ದು, ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್​ 2ನೇ ಕ್ವಾಲಿಫೈಯರ್​ಗೆ ಏರಲಿದೆ. ಹಾಗೆಯೇ ಆರ್​ಸಿಬಿ ತಂಡವು ಪಂದ್ಯವಾಡದೆ ಐಪಿಎಲ್​ನಿಂದ ಹೊರಬೀಳಲಿದೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:31 pm, Wed, 25 May 22

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್