AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಆರ್​ಸಿಬಿಗೆ ಸಂಕಷ್ಟ: LSG vs RCB ಪಂದ್ಯದ ವೇಳೆ ಮಳೆಯಾಗುವ ಸಾಧ್ಯತೆ

LSG vs RCB: ಆರ್​ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯದ ವೇಳೆ ಮಳೆ ಬಂದು, ಅಂತಿಮವಾಗಿ ಸೂಪರ್ ಓವರ್​ ಕೂಡ ಆಡಲು ಸಾಧ್ಯವಾಗದಿದ್ದರೆ, ಪಾಯಿಂಟ್ಸ್​ ಟೇಬಲ್​ನಲ್ಲಿ ಮೇಲಿರುವ ತಂಡ ಮುಂದಿನ ಹಂತಕ್ಕೇರಲಿದೆ.

IPL 2022: ಆರ್​ಸಿಬಿಗೆ ಸಂಕಷ್ಟ: LSG vs RCB ಪಂದ್ಯದ ವೇಳೆ ಮಳೆಯಾಗುವ ಸಾಧ್ಯತೆ
RCB
TV9 Web
| Edited By: |

Updated on: May 24, 2022 | 6:24 PM

Share

IPL 2022: ಐಪಿಎಲ್​ ಸೀಸನ್ 15 ಪ್ಲೇಆಫ್ ಪಂದ್ಯಗಳಿಗೆ ಮಳೆಯ ಭೀತಿ ಎದುರಾಗಿದೆ. ಪ್ಲೇಆಫ್ ಹಂತದ ಮೊದಲ ಕ್ವಾಲಿಫೈಯರ್ ಹಾಗೂ ಎಲಿಮಿನೇಟರ್ ಪಂದ್ಯಗಳು ಕೊಲ್ಕತ್ತಾ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿದೆ. ಆದರೆ ಅತ್ತ ಈಡನ್ ಗಾರ್ಡನ್ಸ್​ ಮೈದಾನದ ಸುತ್ತು ಮುತ್ತ ಮೋಡ ಮುಸುಕಿದ ವಾತಾವರಣ ಕಂಡು ಬಂದಿದೆ. ಇದಾಗ್ಯೂ ಈ ಪಂದ್ಯದ ವೇಳೆ ಮಳೆ ಬರುವ ಸಾಧ್ಯತೆ ಕಡಿಮೆ ಎಂದು ಹವಾಮಾನ ಇಲಾಖೆಯ ವರದಿಗಳು ಹೇಳಿವೆ. ಒಂದು ವೇಳೆ ಮಳೆ ಬಂದರೂ ಪಂದ್ಯವನ್ನು ಪೂರ್ಣಗೊಳಿಸಲು ಸಮಯವಕಾಶ ದೊರೆಯಲಿದೆ. ಆದರೆ ನಾಳೆ ಕೊಲ್ಕತ್ತಾದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.

ಅಂದರೆ ಆರ್​ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್​ ನಡುವಣ ಪಂದ್ಯವು ವರುಣನ ಅವಕೃಪೆಗೆ ಒಳಗಾಗುವ ಸಾಧ್ಯತೆ ಹೆಚ್ಚು. ವೆದರ್​.ಕಾಮ್ ವರದಿ ಪ್ರಕಾರ ನಾಳೆ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 8 ಗಂಟೆಯವರೆಗೂ ಮಳೆಯಾಗುವ ಸಾಧ್ಯತೆಯಿದೆ. ಒಂದು ವೇಳೆ ನಿರಂತರ ಮಳೆಯಾದರೆ ಅದು ಆರ್​ಸಿಬಿ ಪಾಲಿಗೆ ಕಂಟಕವಾಗಲಿದೆ.

ಏಕೆಂದರೆ ಪ್ಲೇಆಫ್​ ಹಂತದ ಪಂದ್ಯಗಳಿಗೆ ಬಿಸಿಸಿಐ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಇದರಲ್ಲಿ ಮೊದಲ ಮೂರು ಪಂದ್ಯಗಳಿಗೆ, ಅಂದರೆ ಮೊದಲ ಕ್ವಾಲಿಫೈಯರ್, ಎಲಿಮಿನೇಟರ್ ಹಾಗೂ 2ನೇ ಕ್ವಾಲಿಫೈಯರ್ ಪಂದ್ಯಗಳಿಗೆ ಮೀಸಲು ದಿನದಾಟ ನೀಡಲಾಗಿಲ್ಲ. ಬದಲಾಗಿ ಆಯಾ ದಿನವೇ ಪಂದ್ಯದ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ. ಇದಕ್ಕಾಗಿ ಹೆಚ್ಚುವರಿ ಸಮಯವಕಾಶ ನೀಡಲಾಗಿದೆ.

ಬಿಸಿಸಿಐ ಪ್ರಕಟಿಸಿರುವ ಹೊಸ ಮಾರ್ಗಸೂಚಿ ಹೀಗಿದೆ: – ಪ್ಲೇಆಫ್​ ಹಂತದ ಮೊದಲ ಮೂರು ಪಂದ್ಯಗಳಿಗೆ ಹೆಚ್ಚುವರಿ 2 ಗಂಟೆಗಳ ಸಮಯವಕಾಶ. ಅಂದರೆ ಮೊದಲ 3 ಪಂದ್ಯಗಳು ಮಳೆಯಿಂದ ವಿಳಂಬವಾದರೆ ಓವರ್​ ಕಡಿತಗೊಳಿಸದೇ ರಾತ್ರಿ 9.40 ಕ್ಕೆ ಪಂದ್ಯವನ್ನು ಆಯೋಜಿಸಲಾಗುತ್ತದೆ.

– ಈ ವೇಳೆಯೂ ಮಳೆಯಿಂದ ಅಡಚಣೆ ಉಂಟಾದರೆ 5 ಓವರ್​ಗಳ ಪಂದ್ಯಗಳನ್ನು ಆಡಿಸಲಾಗುತ್ತದೆ. ಅಂದರೆ ಒಂದು ತಂಡಕ್ಕೆ 5 ಓವರ್​ಗಳ ಇನಿಂಗ್ಸ್​ ಇರಲಿದೆ. ಈ ಪಂದ್ಯವನ್ನು ಆಯೋಜಿಸಲು ರಾತ್ರಿ 11.56 ರವರೆಗೆ ಸಮಯ ನಿಗದಿ ಮಾಡಲಾಗಿದೆ.

– 5 ಓವರ್​ಗಳ ಪಂದ್ಯ ನಡೆಸಲು ನಿರ್ಧರಿಸಿದರೆ ಟೈಮ್ ಔಟ್ ಇರುವುದಿಲ್ಲ. ಹಾಗೆಯೇ ರಾತ್ರಿ 12.50 ರೊಳಗೆ ಪಂದ್ಯ ಮುಗಿಯಬೇಕು ಎಂದು ತಿಳಿಸಲಾಗಿದೆ.

– ರಾತ್ರಿ 12.50 ರೊಳಗೆ ಪಂದ್ಯ ಮುಗಿಸಲು ಸಾಧ್ಯವಾಗದ ಪರಿಸ್ಥಿತಿಯಿದ್ದರೆ, ಸೂಪರ್ ಓವರ್ ಆಡಿಸಲಾಗುತ್ತದೆ.

– ಇನ್ನು ಸೂಪರ್ ಓವರ್ ಕೂಡ ಆಡುವಂತಹ ಪರಿಸ್ಥಿತಿ ಇರದಿದ್ದರೆ, ಆ ಪಂದ್ಯವನ್ನು ರದ್ದು ಮಾಡಲಾಗುತ್ತದೆ. ಅಲ್ಲದೆ ಇಲ್ಲಿ ಪಾಯಿಂಟ್ಸ್​ ಟೇಬಲ್​ ಲೆಕ್ಕಚಾರ ಬರಲಿದೆ. ಅಂದರೆ ಲೀಗ್ ಹಂತದಲ್ಲಿ ಅತೀ ಹೆಚ್ಚು ಪಾಯಿಂಟ್ಸ್​ ಪಡೆದಿರುವ ತಂಡವು ಕ್ವಾಲಿಫೈಯರ್ ಆಗಲಿದೆ.

ಉದಾಹರಣೆಗೆ: ಆರ್​ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯದ ವೇಳೆ ಮಳೆ ಬಂದು, ಅಂತಿಮವಾಗಿ ಸೂಪರ್ ಓವರ್​ ಕೂಡ ಆಡಲು ಸಾಧ್ಯವಾಗದಿದ್ದರೆ, ಪಾಯಿಂಟ್ಸ್​ ಟೇಬಲ್​ನಲ್ಲಿ ಮೇಲಿರುವ ತಂಡ ಮುಂದಿನ ಹಂತಕ್ಕೇರಲಿದೆ. ಅಂದರೆ ಇಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಪಾಯಿಂಟ್ಸ್​ ಟೇಬಲ್​ನಲ್ಲಿ 3ನೇ ಸ್ಥಾನದಲ್ಲಿದೆ. ಹಾಗೆಯೇ ಆರ್​ಸಿಬಿ 4ನೇ ಸ್ಥಾನದಲ್ಲಿದೆ. ಇಲ್ಲಿ ಆರ್​ಸಿಬಿಗಿಂತ ಹೆಚ್ಚಿನ ಪಾಯಿಂಟ್ಸ್​ (18) ಲಕ್ನೋ ತಂಡಕ್ಕಿದ್ದು, ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್​ 2ನೇ ಕ್ವಾಲಿಫೈಯರ್​ಗೆ ಏರಲಿದೆ. ಹಾಗೆಯೇ ಆರ್​ಸಿಬಿ ತಂಡವು ಪಂದ್ಯವಾಡದೆ ಐಪಿಎಲ್​ನಿಂದ ಹೊರಬೀಳಲಿದೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು