25 ಸಿಕ್ಸ್, 23 ಫೋರ್: ಸ್ಪೋಟಕ ತ್ರಿಶತಕ ಸಿಡಿಸಿದ ಕನ್ನಡಿಗ

Macneil Noronha: ಮ್ಯಾಕ್ನೀಲ್ ನೊರೊನ್ಹ ಕರ್ನಾಟಕದ ಭರವಸೆಯ ಯುವ ಆಲ್​ರೌಂಡರ್. ಈಗಾಗಲೇ ಮಹಾರಾಜ ಟ್ರೋಫಿಯಲ್ಲಿ ಕಣಕ್ಕಿಳಿದಿರುವ ಯುವ ದಾಂಡಿಗ ಇದೀಗ ಸಿಕೆ ನಾಯ್ದು ಟೂರ್ನಿಯಲ್ಲಿ ಭರ್ಜರಿ ತ್ರಿಶತಕ ಸಿಡಿಸುವ ಮೂಲಕ ಸದ್ದು ಮಾಡಿದ್ದಾರೆ.

25 ಸಿಕ್ಸ್, 23 ಫೋರ್: ಸ್ಪೋಟಕ ತ್ರಿಶತಕ ಸಿಡಿಸಿದ ಕನ್ನಡಿಗ
Macneil Noronha
Follow us
|

Updated on: Oct 22, 2024 | 2:34 PM

ಕರ್ನಲ್ ಸಿಕೆ ನಾಯ್ಡು ಟ್ರೋಫಿ 2024ರ ಪಂದ್ಯದಲ್ಲಿ ಕರ್ನಾಟಕ ಪರ ಯುವ ದಾಂಡಿಗ ಮ್ಯಾಕ್ನೀಲ್ ನೊರೊನ್ಹ ತ್ರಿಶತಕ ಬಾರಿಸಿ ಅಬ್ಬರಿಸಿದ್ದಾರೆ. ಅದು ಸಹ 25 ಸಿಕ್ಸ್ ಹಾಗೂ 23 ಫೋರ್​ಗಳನ್ನು ಬಾರಿಸುವ ಮೂಲಕ ಎಂಬುದು ವಿಶೇಷ. ಅಗರ್ತಲಾದಲ್ಲಿ ನಡೆದ ಈ ಪಂದ್ಯದಲ್ಲಿ ಕರ್ನಾಟಕ ಹಾಗೂ ತ್ರಿಪುರಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ಪರ ಮ್ಯಾಕ್ನೀಲ್ ನೊರೊನ್ಹ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಮ್ಯಾಕ್ನೀಲ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್-ಫೋರ್​ಗಳ ಸುರಿಮಳೆಗೈದರು. ಪರಿಣಾಮ ಕೇವಲ 335 ಎಸೆತಗಳಲ್ಲಿ ತ್ರಿಶತಕ ಮೂಡಿಬಂತು. ಈ ತ್ರಿಪಲ್ ಸೆಂಚುರಿಯೊಂದಿಗೆ ಅಬ್ಬರ ಮುಂದುವರೆಸಿದ ಮ್ಯಾಕ್ನೀಲ್ ನೊರೊನ್ಹ 348 ಎಸೆತಗಳಲ್ಲಿ 25 ಸಿಕ್ಸ್ ಹಾಗೂ 23 ಫೋರ್​ಗಳೊಂದಿಗೆ 345 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಇನ್ನು ಮ್ಯಾಕ್ನೀಲ್​ಗೆ ಉತ್ತಮ ಸಾಥ್ ನೀಡಿದ ಪ್ರಕಾರ್ ಚತುರ್ವೇದಿ 147 ಎಸೆತಗಳಲ್ಲಿ 13 ಬೌಂಡರಿ ಮತ್ತು ಒಂದು ಸಿಕ್ಸರ್ ಸೇರಿದಂತೆ 91 ರನ್ ಗಳಿಸಿದರು. ಈ ಮೂಲಕ ಕರ್ನಾಟಕ ಅಂಡರ್ 23 ತಂಡವು ಮೊದಲ ಇನಿಂಗ್ಸ್​ನಲ್ಲಿ 580/5 ರನ್ ಕಲೆಹಾಕಿ ಡಿಕ್ಲೇರ್ ಘೋಷಿಸಿತು.

ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ತ್ರಿಪುರಾ ತಂಡವು ಕೇವಲ 104 ರನ್​ಗಳಿಗೆ ಆಲೌಟ್ ಆಯಿತು. ಕರ್ನಾಟಕ ಪರ ಯುವ ಬೌಲರ್ ಸಶಿಕುಮಾರ್ 7 ವಿಕೆಟ್ ಕಬಳಿಸಿ ಮಿಂಚಿದರು.

ಯಾರು ಈ ನೊರೊನ್ಹ?

ಮ್ಯಾಕ್ನೀಲ್ ನೊರೊನ್ಹ ಕರ್ನಾಟಕದ ಭರವಸೆಯ ಯುವ ಆಲ್​ರೌಂಡರ್. ಈಗಾಗಲೇ ಮಹಾರಾಜ ಟ್ರೋಫಿಯಲ್ಲಿ ಕಣಕ್ಕಿಳಿದಿರುವ ಯುವ ದಾಂಡಿಗ ಇದೀಗ ಸಿಕೆ ನಾಯ್ದು ಟೂರ್ನಿಯಲ್ಲಿ ಭರ್ಜರಿ ತ್ರಿಶತಕ ಸಿಡಿಸುವ ಮೂಲಕ ಸದ್ದು ಮಾಡಿದ್ದಾರೆ. ಅಲ್ಲದೆ ಬಿರುಸಿನ ಬ್ಯಾಟಿಂಗ್​ಗೆ ಹೆಸರುವಾಸಿಯಾಗಿರುವ ಯುವ ದಾಂಡಿಗ ಮುಂಬರುವ ದಿನಗಳಲ್ಲಿ ಐಪಿಎಲ್​ನಲ್ಲಿ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ: RCB ಉಳಿಸಿಕೊಂಡ ಆರು ಆಟಗಾರರು ಯಾರೆಲ್ಲಾ ಗೊತ್ತಾ?

ಏನಿದು ಸಿಕೆ ನಾಯ್ದು ಟ್ರೋಫಿ?

ಕರ್ನಲ್ ಸಿಕೆ ನಾಯ್ದು ಭಾರತ ಟೆಸ್ಟ್ ತಂಡದ ಮೊದಲ ನಾಯಕ. ಅವರ ಹೆಸರಿನಲ್ಲಿ ಬಿಸಿಸಿಐ ಅಂಡರ್​-23 ಟೂರ್ನಿಯನ್ನು ಆಯೋಜಿಸುತ್ತಿದೆ. ಈ ಟೂರ್ನಿಯಲ್ಲಿ ವಿವಿಧ ರಾಜ್ಯ ಮತ್ತು ಪ್ರಾದೇಶಿಕ ಕ್ರಿಕೆಟ್ ಸಂಸ್ಥೆಗಳನ್ನು ಪ್ರತಿನಿಧಿಸುವ ಕ್ರಿಕೆಟ್ ತಂಡಗಳು ಪಾಲ್ಗೊಳ್ಳುತ್ತವೆ.

ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು