AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಹ್ಲಿಯಿಂದ ನಾಯಕತ್ವ ಕಿತ್ತುಕೊಂಡಿದ್ದು ಬಿಸಿಸಿಐ ಮಾಡಿದ ಅತೀ ದೊಡ್ಡ ತಪ್ಪು!

ಭಾರತೀಯ ಕ್ರಿಕೆಟ್‌ ಇತಿಹಾಸದಲ್ಲಿ ವಿರಾಟ್ ಕೊಹ್ಲಿ ಯುಗ ಸುವರ್ಣಾಕ್ಷರಗಳಲ್ಲಿ ಬರೆದಿಡುವಂಥದ್ದು. ಅದರಲ್ಲೂ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅವರು ಭಾರತ ತಂಡವನ್ನು ಮುನ್ನಡೆಸಿದ ರೀತಿ ವಿಶ್ವ ಕ್ರಿಕೆಟ್​ ಅನ್ನೇ ಬೆರಗಾಗುವಂತೆ ಮಾಡಿತ್ತು. ಆದರೆ, 2022ರಲ್ಲಿ ಕೊಹ್ಲಿ ದಿಢೀರನೆ ಟೆಸ್ಟ್ ನಾಯಕತ್ವ ತ್ಯಜಿಸಿದ ನಿರ್ಧಾರ ಇಂದಿಗೂ ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ಮನದಲ್ಲಿ ಆಳವಾದ ನಿರಾಸೆ ಮೂಡಿಸಿದೆ. ಇದೀಗ ಇದೇ ವಿಷಯದ ಕುರಿತು ಮದನ್ ಲಾಲ್ ಮನಬಿಚ್ಚಿ ಮಾತನಾಡಿದ್ದಾರೆ.

ಕೊಹ್ಲಿಯಿಂದ ನಾಯಕತ್ವ ಕಿತ್ತುಕೊಂಡಿದ್ದು ಬಿಸಿಸಿಐ ಮಾಡಿದ ಅತೀ ದೊಡ್ಡ ತಪ್ಪು!
Virat Kohli Image Credit source: GettyImages
ಝಾಹಿರ್ ಯೂಸುಫ್
|

Updated on: Jul 23, 2026 | 9:24 AM

Share

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಟೆಸ್ಟ್ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ವಿರಾಟ್ ಕೊಹ್ಲಿ, 2022ರಲ್ಲಿ ತಮ್ಮ ನಾಯಕತ್ವಕ್ಕೆ ದಿಢೀರ್ ರಾಜೀನಾಮೆ ನೀಡಿದ್ದು ಇಂದಿಗೂ ಕ್ರಿಕೆಟ್ ವಲಯದಲ್ಲಿ ಚರ್ಚೆಯ ವಿಷಯವಾಗಿದೆ. ಇದೀಗ 1983ರ ವಿಶ್ವಕಪ್ ವಿಜೇತ ತಂಡದ ಮಾಜಿ ಆಟಗಾರ ಮದನ್ ಲಾಲ್ ಈ ಕುರಿತು ಸ್ಪೋಟಕ ಹೇಳಿಕೆ ನೀಡಿದ್ದು, ಕೊಹ್ಲಿ ನಾಯಕತ್ವ ಬಿಡುವಂತೆ ಮಾಡಿದ್ದು ಬಿಸಿಸಿಐ ಮತ್ತು ಅಂದಿನ ಆಯ್ಕೆ ಸಮಿತಿ ಮಾಡಿದ ಅತ್ಯಂತ ದೊಡ್ಡ ತಪ್ಪು ಎಂದು ಕಿಡಿಕಾರಿದ್ದಾರೆ.

ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮದನ್ ಲಾಲ್, ಅಂದಿನ ಕ್ರಿಕೆಟ್ ಮಂಡಳಿಯ ನಿರ್ಧಾರಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ಅಂದು ಆಯ್ಕೆಗಾರರು ಮತ್ತು ಕೊಹ್ಲಿ ನಡುವೆ ಸರಿಯಾದ ಸಂವಹನ ಇರಲಿಲ್ಲ. ಇದು ತಂಡದಲ್ಲಿ ಗೊಂದಲ ಸೃಷ್ಟಿಸಿತು.

ಕೊಹ್ಲಿ ಟೆಸ್ಟ್ ತಂಡವನ್ನು ಮುನ್ನಡೆಸಲು ಇನ್ನೂ ಕನಿಷ್ಠ 2 ರಿಂದ 3 ವರ್ಷಗಳ ಕಾಲ ಸಮರ್ಥರಾಗಿದ್ದರು. ಅವರನ್ನು ನಾಯಕತ್ವದಲ್ಲೇ ಮುಂದುವರಿಯುವಂತೆ ಮಂಡಳಿ ಒಪ್ಪಿಸಬೇಕಿತ್ತು ಎಂದಿದ್ದಾರೆ.

ವಿರಾಟ್ ಕೊಹ್ಲಿ ಅವರಂತಹ ಅಗ್ರ ಕ್ರಮಾಂಕದ ಆಟಗಾರ ಇಷ್ಟು ಬೇಗ ನಾಯಕತ್ವದಿಂದ ಕೆಳಗಿಳಿದಿದ್ದು ಭಾರತೀಯ ಟೆಸ್ಟ್‌ ಕ್ರಿಕೆಟ್‌ಗೆ ತುಂಬಲಾರದ ನಷ್ಟ ಎಂದು ಲಾಲ್ ಬೇಸರ ವ್ಯಕ್ತಪಡಿಸಿದ್ದಾರೆ.

ಖಡಕ್ ಕ್ಯಾಪ್ಟನ್ ಕೊಹ್ಲಿ:

ವಿರಾಟ್ ಕೊಹ್ಲಿ ನಾಯಕತ್ವದ ಶೈಲಿಯನ್ನು ಶ್ಲಾಘಿಸಿದ ಮದನ್ ಲಾಲ್, ಭಾರತೀಯ ಟೆಸ್ಟ್ ಕ್ರಿಕೆಟ್‌ಗೆ ಆಕ್ರಮಣಕಾರಿ ಗುಣವನ್ನು ತಂದಿದ್ದೇ ಕೊಹ್ಲಿ ಎಂದು ನೆನಪಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ಸೌತ್ ಆಫ್ರಿಕಾದಂತಹ ಕಠಿಣ ವಿದೇಶಿ ಪಿಚ್‌ಗಳ ಮೇಲೆ ಎದುರಾಳಿಗಳ ಕಣ್ಣಲ್ಲಿ ಕಣ್ಣಿಟ್ಟು ಹೋರಾಡುವ ಮತ್ತು ಪಂದ್ಯಗಳನ್ನು ಗೆಲ್ಲುವ ಹೊಸ ಆಟದ ಸಂಸ್ಕೃತಿಯನ್ನು ಅವರು ತಂಡದಲ್ಲಿ ಬಿತ್ತಿದ್ದರು ಎಂದು ಕೊಂಡಾಡಿದ್ದಾರೆ.

ಇದಾಗ್ಯೂ ಆಯ್ಕೆ ಸಮಿತಿ ಅವರನ್ನು ಬೇಗನೆ ನಾಯಕತ್ವದಿಂದ ಕೆಳಗಿಳಿಸಿದ್ದು ಅಪಕ್ವದ ನಿರ್ಧಾರ. ಕೊಹ್ಲಿ ಟೆಸ್ಟ್ ತಂಡವನ್ನು ಮುನ್ನಡೆಸಲು ಇನ್ನೂ ಕನಿಷ್ಠ 2 ರಿಂದ 3 ವರ್ಷಗಳ ಕಾಲ ಸಮರ್ಥರಾಗಿದ್ದರು. ಹೀಗಾಗಿ ಅವರನ್ನೇ ನಾಯಕತ್ವದಲ್ಲೇ ಮುಂದುವರಿಯುವಂತೆ ಬಿಸಿಸಿಐ ಮನವೊಲಿಸಬೇಕಿತ್ತು. ಆದರೆ ಬಿಸಿಸಿಐ ಆಗಲಿ, ಆಯ್ಕೆ ಸಮಿತಿ ಆಗಲಿ ಅಂತಹ ಯಾವುದೇ ಪ್ರಯತ್ನ ಮಾಡಲಿಲ್ಲ ಎಂದು ಮದನ್ ಲಾಲ್ ಬೇಸರ ವ್ಯಕ್ತಪಡಿಸಿದ್ದಾರೆ.

ರಾಜೀನಾಮೆಯ ಹಿನ್ನೆಲೆ:

ಜನವರಿ 2022ರಲ್ಲಿ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಸೋಲಿನ ಬೆನ್ನಲ್ಲೇ ವಿರಾಟ್ ಕೊಹ್ಲಿ ತಮ್ಮ ನಾಯಕತ್ವ ತ್ಯಜಿಸಿದ್ದರು. ಇದಕ್ಕೆ ಮುಖ್ಯ ಕಾರಣ ಬಿಸಿಸಿಐ ಪದಾಧಿಕಾರಿಗಳ ಜೊತೆಗಿನ ಶೀತಲ ಸಮರ.

ಇದನ್ನೂ ಓದಿ: ಕಾಮನ್‌ವೆಲ್ತ್ ಗೇಮ್ಸ್ 2026: ಕಣದಲ್ಲಿರುವ 126 ಭಾರತೀಯರ ಪಟ್ಟಿ ಇಲ್ಲಿದೆ

ಕೊಹ್ಲಿ ಟಿ20 ನಾಯಕತ್ವದಿಂದ ಸ್ವಯಂಪ್ರೇರಿತರಾಗಿ ಕೆಳಗಿಳಿದ ಬೆನ್ನಲ್ಲೇ, ಅವರನ್ನು ಏಕದಿನ  ತಂಡದ ನಾಯಕತ್ವದಿಂದಲೂ ಬಿಸಿಸಿಐ ಬಲವಂತವಾಗಿ ಕೆಳಗಿಳಿಸಿತ್ತು. ಇದರಿಂದ ಮನನೊಂದು ವಿರಾಟ್ ಕೊಹ್ಲಿ ಟೆಸ್ಟ್ ತಂಡದ ನಾಯಕತ್ವವನ್ನು ತ್ಯಜಿಸಿದ್ದರು. ಆದರೆ ಅಂದು ಕೊಹ್ಲಿಯನ್ನು ಮನವೊಲಿಸಿ ನಾಯಕತ್ವದಲ್ಲೇ ಮುಂದುವರೆಸಬೇಕಿತ್ತು ಎಂದು ಮದನ್ ಲಾಲ್ ಬಲವಾಗಿ ಪ್ರತಿಪಾದಿಸಿದ್ದಾರೆ.

Follow Us
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ