AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾಚ್ ಫಿಕ್ಸಿಂಗ್ ಆರೋಪ: ಐಎಎಸ್ ಅಧಿಕಾರಿ ವಿರುದ್ಧ ಧೋನಿ ಸಲ್ಲಿಸಿದ ಅರ್ಜಿ ವಿಚಾರಣೆ

MS Dhoni: 2 ವರ್ಷಗಳ ನಿಷೇಧದ ಬಳಿಕ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಭರ್ಜರಿ ಕಂಬ್ಯಾಕ್ ಮಾಡಿತ್ತು.

ಮ್ಯಾಚ್ ಫಿಕ್ಸಿಂಗ್ ಆರೋಪ: ಐಎಎಸ್ ಅಧಿಕಾರಿ ವಿರುದ್ಧ ಧೋನಿ ಸಲ್ಲಿಸಿದ ಅರ್ಜಿ ವಿಚಾರಣೆ
MS Dhoni
TV9 Web
| Edited By: |

Updated on:Jun 13, 2023 | 10:56 PM

Share

ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ವಿರುದ್ಧ ಸ್ಪಾಟ್ ಫಿಕ್ಸಿಂಗ್ ಆರೋಪ ಮಾಡಿದ್ದ ಐಪಿಎಸ್ ಅಧಿಕಾರಿ ಸಂಪತ್ ಕುಮಾರ್ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗಂಭೀರ ಆರೋಪ ಮಾಡಿದ್ದ ಐಎಎಸ್ ಅಧಿಕಾರಿ ವಿರುದ್ಧ ಧೋನಿ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಈ ಪ್ರಕರಣದ ವಿಚಾರಣೆಯನ್ನು ನಡೆಸಲು ಮದ್ರಾಸ್ ಹೈಕೋರ್ಟ್ ನಿರ್ಧರಿಸಿದೆ. ಐಪಿಎಸ್ ಅಧಿಕಾರಿ ಸಂಪತ್ ಕುಮಾರ್ ವಿರುದ್ಧ ಧೋನಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ಹೇಳಿದೆ. ಅದರಂತೆ ನ್ಯಾಯಾಲಯವು ಜೂನ್ 15 ರಂದು ಪ್ರಕರಣದ ವಿಚಾರಣೆ ಆರಂಭವಾಗಲಿದೆ.

ಏನಿದು ಪ್ರಕರಣ:

2013ರಲ್ಲಿ ಐಎಎಸ್ ಅಧಿಕಾರಿ ಸಂಪತ್ ಕುಮಾರ್ ಅವರು ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಹಗರಣದ ತನಿಖೆ ನಡೆಸುತ್ತಿದ್ದರು. ಆ ವೇಳೆ ಧೋನಿ ವಿರುದ್ಧ ಹೇಳಿಕೆ ನೀಡಿದಲ್ಲದೆ, ಮ್ಯಾಚ್ ಫಿಕ್ಸಿಂಗ್ ಆರೋಪವನ್ನೂ ಮಾಡಿದ್ದರು. ಅಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2016 ಮತ್ತು 2017 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ ರಾಯಲ್ಸ್‌ ತಂಡಗಳನ್ನು ಐಪಿಎಲ್​ನಿಂದ ನಿಷೇಧಿಸಲಾಗಿತ್ತು. ಆದರೆ ಈ ಪ್ರಕರಣದಲ್ಲಿ ತನ್ನದೇನು ಪಾತ್ರವಿಲ್ಲ ಎಂಬ ವಾದವನ್ನು ಧೋನಿ ಮುಂದಿಟ್ಟಿದ್ದಾರೆ.

100 ಕೋಟಿ ರೂ. ಮಾನನಷ್ಟ ಮೊಕದ್ದಮೆ:

ಈ ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ತಾನು ಇಲ್ಲದಿದ್ದರೂ, ಗಂಭೀರ ಆರೋಪ ಮಾಡಿದ್ದ ಐಎಎಸ್ ಅಧಿಕಾರಿ ಸಂಪತ್ ಕುಮಾರ್ ವಿರುದ್ಧ 2014 ರಲ್ಲಿ ಮಹೇಂದ್ರ ಸಿಂಗ್ ಧೋನಿ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದರು. ಇದೀಗ ಈ ಸಂಬಂಧ ವಿಚಾರಣೆ ನಡೆಸಲು ತಮಿಳುನಾಡು ಹೈಕೋರ್ಟ್ ಮುಂದಾಗಿದೆ.

ಸಿಎಸ್​ಕೆ ಭರ್ಜರಿ ಕಂಬ್ಯಾಕ್:

2 ವರ್ಷಗಳ ನಿಷೇಧದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಭರ್ಜರಿ ಕಂಬ್ಯಾಕ್ ಮಾಡಿತ್ತು. 2018 ರಲ್ಲಿ ಮತ್ತೆ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಸಿಎಸ್​ಕೆ ತಂಡವು, ಆ ಬಳಿಕ 2021 ರಲ್ಲಿ ಹಾಗೂ 2023 ರಲ್ಲಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.

Published On - 10:55 pm, Tue, 13 June 23

Follow Us
Web contact
Web contact

TV9 Kannada

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್