AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja Trophy 2025: 4.3 ಓವರ್​ಗಳಲ್ಲಿ ಪಂದ್ಯ ಗೆದ್ದ ಬೆಂಗಳೂರಿಗೆ ಸತತ 2ನೇ ಜಯ

Maharaja Trophy 2025: ಮೈಸೂರಿನಲ್ಲಿ ನಡೆದ ಮಹಾರಾಜ ಟಿ20 ಟ್ರೋಫಿಯ 9ನೇ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡವು ಶಿವಮೊಗ್ಗ ತಂಡವನ್ನು ಸೋಲಿಸಿದೆ. ಮಳೆಯಿಂದಾಗಿ ಪಂದ್ಯವನ್ನು 6 ಓವರ್‌ಗಳಿಗೆ ಇಳಿಸಲಾಯಿತು. ಶಿವಮೊಗ್ಗ ತಂಡ 62 ರನ್ ಗಳಿಸಿದರೆ ಬೆಂಗಳೂರು ತಂಡ 9 ಎಸೆತಗಳು ಉಳಿದಿರುವಾಗಲೇ ಗುರಿ ತಲುಪಿತು. ನಿಹಾಲ್ ಉಪ್ಪಾಳ್ (31) ಶಿವಮೊಗ್ಗ ಪರ ಅತ್ಯುತ್ತಮ ಆಟವಾಡಿದರು, ಆದರೆ ಬೆಂಗಳೂರು ಪರ ಶುಭಾಂಗ್ ಹೆಗ್ಡೆ 3 ವಿಕೆಟ್ ಪಡೆದರು.

Maharaja Trophy 2025: 4.3 ಓವರ್​ಗಳಲ್ಲಿ ಪಂದ್ಯ ಗೆದ್ದ ಬೆಂಗಳೂರಿಗೆ ಸತತ 2ನೇ ಜಯ
Bengaluru Blasters
ಪೃಥ್ವಿಶಂಕರ
|

Updated on:Aug 15, 2025 | 7:37 PM

Share

ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹಾರಾಜ ಟಿ20 ಟ್ರೋಫಿಯ (Maharaja T20 Trophy) 9ನೇ ಪಂದ್ಯ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ನಮ್ಮ ಶಿವಮೊಗ್ಗ (Shivamogga vs Bengaluru Blasters) ತಂಡಗಳ ನಡುವೆ ನಡೆಯಿತು. ಮಳೆ ಪೀಡಿತ ಈ ಪಂದ್ಯವನ್ನು ತಲಾ 6 ಓವರ್​ಗಳಿಗೆ ಸೀಮಿತಗೊಳಿಸಲಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ನಮ್ಮ ಶಿವಮೊಗ್ಗ ತಂಡ 6 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 62 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಬೆಂಗಳೂರು ತಂಡ ಕೇವಲ 2 ವಿಕೆಟ್ ಕಳೆದುಕೊಂಡು ಇನ್ನು 9 ಎಸೆತಗಳು ಬಾಕಿ ಇರುವಂತೆಯೇ ಜಯದ ನಗೆ ಬೀರಿತು.

6 ಓವರ್​ಗಳಿಗೆ ಪಂದ್ಯ ಸೀಮಿತ

ಈ ಪಂದ್ಯದಲ್ಲಿ ಟಾಸ್ ಗೆದ್ದ ಬೆಂಗಳೂರು ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಶಿವಮೊಗ್ಗ ತಂಡ ಮೂರನೇ ಓವರ್​ನಲ್ಲಿ ತನ್ನ ಮೊದಲ ವಿಕೆಟ್ ಕಳೆದುಕೊಂಡಿತು. ಆರಂಭಿಕ ಗೌತಮ್ ಕೇವಲ 1 ರನ್​ಗೆ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಹಾರ್ದಿಕ್ ರಾಜ್ 3 ರನ್​ಗೆ ಸುಸ್ತಾದರೆ, ಅನುಭವಿ ಅನಿರುದ್ಧ ಜೋಶಿ ಅವರ ಆಟ ಕೂಡ 4 ರನ್​ಗೆ ಅಂತ್ಯವಾಯಿತು.

ಆದಾಗ್ಯೂ ತಂಡದ ಪರ ಏಕಾಂಗಿ ಹೋರಾಟ ನಡೆಸಿದ ನಾಯಕ ನಿಹಾಲ್ ಉಪ್ಪಾಳ್ 12 ಎಸೆತಗಳಲ್ಲಿ 3 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 31 ರನ್​ಗಳ ಇನ್ನಿಂಗ್ಸ್ ಆಡಿದರು. ಇವರನ್ನು ಹೊರತುಪಡಿಸಿ 8ನೇ ಕ್ರಮಾಂಕದಲ್ಲಿ ಬಂದ ದರ್ಶನ್ 14 ರನ್​ಗಳ ಕಾಣಿಕೆ ನೀಡಿದರು. ಇವರಿಬ್ಬರನ್ನು ಬಿಟ್ಟರೆ ಉಳಿದವರ್ಯಾರು ಎರಡಂಕಿ ಮೊತ್ತ ದಾಟಲಿಲ್ಲ. ಇತ್ತ ಬೆಂಗಳೂರು ಪರ ನಾಯಕ ಶುಭಾಂಗ್ ಹೆಗ್ಡೆ 3 ವಿಕೆಟ್ ಪಡೆದರು.

ಬೆಂಗಳೂರಿಗೆ ಸತತ 2ನೇ ಜಯ

ಈ ಗುರಿ ಬೆನ್ನಟ್ಟಿದ ಬೆಂಗಳೂರು ತಂಡ ಮೊದಲ ವಿಕೆಟ್​ಗೆ 25 ರನ್ ಕಲೆಹಾಕಿತು. ಆರಂಭಿಕ ಚೇತನ್ 16 ರನ್ ಬಾರಿಸಿ ಔಟಾದರೆ, ಮತ್ತೊಬ್ಬ ರೋಹನ್ ಪಾಟೀಲ್ ಅವರ ಇನ್ನಿಂಗ್ಸ್ ಕೂಡ 12 ರನ್​ಗಳಿಗೆ ಅಂಗತ್ಯವಾಯಿತು. ಕೊನೆಯಲ್ಲಿ ಅನುಭವಿ ಮಯಾಂಕ್ ಅಗರ್ವಾಲ್ ಹಾಗೂ ನಾಯಕ ಶುಭಾಂಗ್ ಅಜೇಯ ಇನ್ನಿಂಗ್ಸ್ ಅಡಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಇವರಿಬ್ಬರು ಕ್ರಮವಾಗಿ 18 ಮತ್ತು 14 ರನ್​ಗಳ ಇನ್ನಿಂಗ್ಸ್ ಆಡಿದರು. ಈ ಗೆಲುವಿನೊಂದಿಗೆ ಬೆಂಗಳೂರು ತಂಡ ಈ ಲೀಗ್​ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿದರೆ, ನಮ್ಮ ಶಿವಮೊಗ್ಗ ತಂಡ ಇದುವರೆಗೆ ತನ್ನ ಗೆಲುವಿನ ಖಾತೆಯನ್ನು ತೆರೆಯಲು ಕಸರತ್ತು ಪಡೆಬೇಕಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:35 pm, Fri, 15 August 25

Follow Us
ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ
ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ
ಮಾ.3 ಸಂಪೂರ್ಣ ಚಂದ್ರಗ್ರಹಣ;ಕರ್ನಾಟಕದಲ್ಲಿ ಎಷ್ಟು ನಿಮಿಷ ಗೋಚರಿಸಲಿದೆ?
ಮಾ.3 ಸಂಪೂರ್ಣ ಚಂದ್ರಗ್ರಹಣ;ಕರ್ನಾಟಕದಲ್ಲಿ ಎಷ್ಟು ನಿಮಿಷ ಗೋಚರಿಸಲಿದೆ?
ಪ್ರಯಾಣಿಕರ ಮುಂದೆಯೇ ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್
ಪ್ರಯಾಣಿಕರ ಮುಂದೆಯೇ ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್
ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು
ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು
ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?
ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?
ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ
ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ
ರಾಗಿಣಿ ಪ್ರಜ್ವಲ್ ಡ್ಯಾನ್ಸ್​​​ಗೆ ಅವರೇ ಸರಿಸಾಟಿ
ರಾಗಿಣಿ ಪ್ರಜ್ವಲ್ ಡ್ಯಾನ್ಸ್​​​ಗೆ ಅವರೇ ಸರಿಸಾಟಿ
ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ
ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?