AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja Trophy: ಬೆಂಗಳೂರು ವಿರುದ್ಧ ಗೆದ್ದ ಮಂಗಳೂರು; ಫೈನಲ್ ಎದುರಾಳಿ ಹುಬ್ಬಳ್ಳಿ

Maharaja T20 Trophy 2025: ಮಹಾರಾಜ ಟಿ20 ಟ್ರೋಫಿಯ ಫೈನಲ್ ಪಂದ್ಯದಲ್ಲಿ ಹುಬ್ಬಳ್ಳಿ ಟೈಗರ್ಸ್ ಮತ್ತು ಮಂಗಳೂರು ಡ್ಯ್ರಾಗನ್ಸ್ ತಂಡಗಳು ಮುಖಾಮುಖಿಯಾಗಲಿವೆ.ಇಂದು ನಡೆದ ಕ್ವಾಲಿಫೈಯರ್‌ 2 ರಲ್ಲಿ ಮಂಗಳೂರು ಡ್ರ್ಯಾಗನ್ಸ್, ಬೆಂಗಳೂರು ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದೆ. ಆಗಸ್ಟ್ 28ರಂದು ಹುಬ್ಬಳ್ಳಿ ಹಾಗೂ ಮಂಗಳೂರು ನಡುವೆ ಫೈನಲ್ ಪಂದ್ಯ ನಡೆಯಲಿದೆ.

Maharaja Trophy: ಬೆಂಗಳೂರು ವಿರುದ್ಧ ಗೆದ್ದ ಮಂಗಳೂರು; ಫೈನಲ್ ಎದುರಾಳಿ ಹುಬ್ಬಳ್ಳಿ
Maharaja T20 Trophy
ಪೃಥ್ವಿಶಂಕರ
|

Updated on:Aug 28, 2025 | 2:19 PM

Share

ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹಾರಾಜ ಟಿ20 ಟ್ರೋಫಿಯಲ್ಲಿ (Maharaja T20 Trophy) ಪ್ರಶಸ್ತಿಗಾಗಿ ಸೆಣಸಾಡುವ ಎರಡು ತಂಡಗಳು ಯಾವುವು ಎಂಬುದು ಖಚಿತವಾಗಿದೆ. ಆಗಸ್ಟ್ 26 ರಂದು ನಡೆದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಮಂಗಳೂರು ಡ್ರ್ಯಾಗನ್ಸ್ ತಂಡವನ್ನು ಮಣಿಸಿದ ಹುಬ್ಬಳ್ಳಿ ಟೈಗರ್ಸ್ (Hubli Tigers)​ ತಂಡ ಫೈನಲ್​ಗೇರಿತ್ತು. ಆ ಬಳಿಕ ನಡೆದಿದ್ದ ಎಲಿಮಿನೇಟರ್ ಪಂದ್ಯದಲ್ಲಿ ಬೆಂಗಳೂರು ತಂಡ ಗುಲ್ಬರ್ಗಾ ತಂಡವನ್ನು ಮಣಿಸಿತ್ತು. ಇಂದು  ನಡೆದ ಕ್ವಾಲಿಫೈಯರ್ 2 ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್​ ತಂಡವನ್ನು ಮಣಿಸಿದ ಮಂಗಳೂರು ಡ್ರ್ಯಾಗನ್ಸ್ (Mangaluru Dragons) ತಂಡ ಫೈನಲ್​ನಲ್ಲಿ ಹುಬ್ಬಳ್ಳಿ ತಂಡವನ್ನು ಎದುರಿಸಲಿದೆ. ಉಭಯ ತಂಡಗಳ ನಡುವಿನ ಫೈನಲ್ ಕಾಳಗ ಆಗಸ್ಟ್ 28 ರಂದು ಅಂದರೆ ನಾಳೆ ನಡೆಯಲಿದೆ.

152 ರನ್ ಕಲೆಹಾಕಿದ ಬೆಂಗಳೂರು

ಪ್ಲೇ ಅಫ್ ಸುತ್ತಿನಲ್ಲಿ ಸೋತಿದ್ದ ಮಂಗಳೂರು ಡ್ರ್ಯಾಗನ್ಸ್ ಹಾಗೂ ಬೆಂಗಳೂರು ಬ್ಲಾಸ್ಟರ್ಸ್ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಮಂಗಳೂರು ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಬೆಂಗಳೂರು ತಂಡ ಪೂರ್ಣ 20 ಓವರ್​ಗಳನ್ನು ಆಡಲು ಸಾಧ್ಯವಾಗದೆ 19.4 ಓವರ್‌ಗಳಲ್ಲಿ ಆಲೌಟ್ ಆಗಿ ಕೇವಲ 152 ರನ್ ಕಲೆಹಾಕಿತು. ತಂಡದ ಪರ ರೋಹನ್ ಪಾಟೀಲ್ ಬಿಟ್ಟರೆ ಮತ್ತ್ಯಾವ ಆಟಗಾರನಿಂದಲೂ ಹೇಳಿಕೊಳ್ಳುವಂತಹ ಪ್ರದರ್ಶನ ಕಂಡುಬರಲಿಲ್ಲ.

ರೋಹನ್ ಪಾಟೀಲ್ ಏಕಾಂಗಿ ಹೋರಾಟ

ರೋಹನ್ ಪಾಟೀಲ್ ಒಬ್ಬರೇ 52 ಎಸೆತಗಳಲ್ಲಿ 7 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ ಅಜೇಯ 86 ರನ್ ಕಲೆಹಾಕಿದರು. ಆದರೆ ಇವರಿಗೆ ಉಳಿದ ಬ್ಯಾಟ್ಸ್‌ಮನ್​ಗಳಿಂದ ಸಾಥ್ ಸಿಗಲಿಲ್ಲ. ಸೂರಜ್ ಅಹುಜಾ (16) ಮತ್ತು ಜ್ಞಾನೇಶ್ವರ ನವೀನ್ (10) ಮಾತ್ರ ಎರಡಂಕಿ ದಾಟಿದರು. ಉಳಿದ ಯಾವ ಬ್ಯಾಟ್ಸ್‌ಮನ್​ಗೂ ಒಂದಂಕಿ ದಾಟಲು ಸಾಧ್ಯವಾಗಲಿಲ್ಲ. ಒಂದು ವೇಳೆ ರೋಹನ್ ಕೂಡ ಕಡಿಮೆ ಮೊತ್ತಕ್ಕೆ ಔಟಾಗಿದ್ದರೆ, ತಂಡ 50 ರನ್​ಗಳ ಗಡಿ ಕೂಡ ದಾಟುತ್ತಿರಲಿಲ್ಲ. ಮಂಗಳೂರು ಪರ ಮಾರಕ ಬೌಲಿಂಗ್ ಮಾಡಿದ ನಾಯಕ ಶ್ರೇಯಸ್ ಗೋಪಾಲ್ 3 ವಿಕೆಟ್ ಪಡೆದರೆ, ಅಭಿಲಾಷ್ 2 ವಿಕೆಟ್ ಉರುಳಿಸಿದರು.

ಮಂಗಳೂರು ತಂಡಕ್ಕೆ 7 ವಿಕೆಟ್ ಜಯ

ಈ ಗುರಿ ಬೆನ್ನಟ್ಟಿದ ಮಂಗಳೂರು ತಂಡಕ್ಕೆ ಮೊದಲ ವಿಕೆಟ್​ಗೆ ಅರ್ಧಶತಕದ ಜೊತೆಯಾಟ ಸಿಕ್ಕಿತು. ಆರಂಭಿಕರಾದ ಲೋಚನ್ ಹಾಗೂ ಶರತ್ 63 ರನ್​ಗಳ ಜೊತೆಯಾಟ ನೀಡಿದರು. ಈ ವೇಳೆ ಶರತ್ 43 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಮೂರನೇ ಕ್ರಮಾಂಕದಲ್ಲಿ ಬಂದ ಪಲ್ಲವಕುಮಾರ್ ದಾಸ್ ಅವರ ಇನ್ನಿಂಗ್ಸ್ ಕೂಡ 23 ರನ್​ಗಳಿಗೆ ಅಂತ್ಯವಾಯಿತು. ಮ್ಯಾಕ್ನೀಲ್ ಹ್ಯಾಡ್ಲಿ ನೊರೊನ್ಹಾ ಕೂಡ 24 ರನ್​ ಬಾರಿಸಿ ತಂಡವನ್ನು ಗೆಲುವಿನ ಸನಿಹಕ್ಕೆ ತಂದು ವಿಕೆಟ್ ಒಪ್ಪಿಸಿದರು. ಆದರೆ ಆರಂಭದಿಂದಲೂ ತಾಳ್ಮೆಯ ಆಟವನ್ನಾಡಿದ ಲೋಚನ್ 51 ಎಸೆತಗಳಲ್ಲಿ 1 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 62 ರನ್ ಬಾರಿಸಿ ತಂಡವನ್ನು ಫೈನಲ್​ಗೆ ಕೊಂಡೊಯ್ದರು.

Published On - 11:14 pm, Wed, 27 August 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!