AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್ ಮುಗಿದ ಬೆನ್ನಲ್ಲೇ ಹೊಸ ಟಿ20 ತಂಡ ಸೇರಿಕೊಂಡ ದೇವದತ್ ಪಡಿಕ್ಕಲ್

Devdutt Padikkal Joins Mysore Warriors: ಐದನೇ ಆವೃತ್ತಿಯ ಮಹಾರಾಜ ಟಿ20 ಟ್ರೋಫಿ ಜೂನ್ 20 ರಿಂದ ಜುಲೈ 12 ರವರೆಗೆ ನಡೆಯಲಿದೆ. ಇಂದಿನ ಹರಾಜಿನಲ್ಲಿ 150ಕ್ಕೂ ಹೆಚ್ಚು ಆಟಗಾರರು ಅದೃಷ್ಟ ಪರೀಕ್ಷೆಗೆ ಇಳಿದು, 6 ತಂಡಗಳು 60 ಲಕ್ಷ ರೂ. ಬಜೆಟ್‌ನೊಂದಿಗೆ ಆಟಗಾರರನ್ನು ಖರೀದಿಸಿದವು. ಐಪಿಎಲ್ ಖ್ಯಾತಿಯ ದೇವದತ್ ಪಡಿಕ್ಕಲ್ ಮೈಸೂರು ವಾರಿಯರ್ಸ್ ತಂಡಕ್ಕೆ ₹2.6 ಲಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಐಪಿಎಲ್ ಮುಗಿದ ಬೆನ್ನಲ್ಲೇ ಹೊಸ ಟಿ20 ತಂಡ ಸೇರಿಕೊಂಡ ದೇವದತ್ ಪಡಿಕ್ಕಲ್
Devdutt Padikkal
ಪೃಥ್ವಿಶಂಕರ
|

Updated on:Jun 05, 2026 | 5:21 PM

Share

ಐದನೇ ಆವೃತ್ತಿಯ ಮಹಾರಾಜ ಟಿ20 ಟ್ರೋಫಿ (Maharaja T20 Trophy) ಇದೇ ಜೂನ್ 20 ರಿಂದ ಆರಂಭವಾಗಲಿದ್ದು, ಜುಲೈ 12 ರವರೆಗೆ ನಡೆಯಲಿದೆ. ಈ ಟೂರ್ನಿಗೆ ಇಂದು ಹರಾಜು ಕೂಡ ನಡೆದಿದೆ. ಹರಾಜಿನಲ್ಲಿ ಕರ್ನಾಟಕದ ಸ್ಟಾರ್ ಆಟಗಾರರು ದೊಡ್ಡ ಮೊತ್ತಕ್ಕೆ ಹೊಸ ತಂಡಗಳನ್ನು ಸೇರಿಕೊಂಡಿದ್ದಾರೆ. ಹರಾಜಿನಲ್ಲಿ 150ಕ್ಕೂ ಹೆಚ್ಚು ಆಟಗಾರರು ಅದೃಷ್ಟ ಪರೀಕ್ಷೆಗೆ ಇಳಿದಿದ್ದು, ಎಲ್ಲಾ 6 ತಂಡಗಳು ತಲಾ 60 ಲಕ್ಷ ರೂ. ಹಣದೊಂದಿಗೆ ಆಟಗಾರರ ಖರೀದಿಗಿಳಿದಿವೆ. ಅದರಂತೆ ಐಪಿಎಲ್‌ನಲ್ಲಿ ಆರ್​ಸಿಬಿ (RCB) ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ದೇವದತ್ ಪಡಿಕ್ಕಲ್ (Devdutt Padikkal) ಇದೀಗ ಹೊಸ ತಂಡವನ್ನು ಸೇರಿಕೊಂಡಿದ್ದಾರೆ. ಹರಾಜಿನಲ್ಲಿ ಮೈಸೂರ್ ವಾರಿಯರ್ಸ್​ ಫ್ರಾಂಚೈಸಿ ಪಡಿಕ್ಕಲ್​ಗೆ 2 ಲಕ್ಷ 60 ಸಾವಿರ ನೀಡಿ ತಂಡಕ್ಕೆ ಸೇರಿಸಿಕೊಂಡಿದೆ.

ಮೈಸೂರು ತಂಡ ಸೇರಿಕೊಂಡ ಪಡಿಕ್ಕಲ್

ಮೈಸೂರ್ ವಾರಿಯರ್ಸ್​ ಫ್ರಾಂಚೈಸಿ ಪಡಿಕ್ಕಲ್​ಗೂ ಮೊದಲು ಐಪಿಎಲ್​​ನಲ್ಲಿ ಪಂಜಾಬ್ ಕಿಂಗ್ಸ್ ಪರ ಆಡಿದ್ದ ವೇಗಿ ವೈಶಾಕ್ ವಿಜಯ್​ಕುಮಾರ್ ಅವರನ್ನು 8.25 ಲಕ್ಷ ನೀಡಿ ತಂಡಕ್ಕೆ ಸೇರಿಸಿಕೊಂಡಿತು. ಈ ಮೂಲಕ ವೈಶಾಕ್ ಅತ್ಯಧಿಕ ಮೊತ್ತಕ್ಕೆ ಮೈಸೂರು ತಂಡದ ಪಾಲಾದರು. ಹಾಗೆಯೇ ಮತ್ತೊಬ್ಬ ಟೀಂ ಇಂಡಿಯಾ ವೇಗಿ ಪ್ರಸಿದ್ಧ ಕೃಷ್ಣ ಕೂಡ  2.60 ಲಕ್ಷಕ್ಕೆ ತಂಡವನ್ನು ಸೇರಿಕೊಂಡಿದ್ದಾರೆ. ಆರ್​ಸಿಬಿಯ ಮಾಜಿ ಆಟಗಾರ ಮನೋಬ್ ಬಾಂಡಗೆ ಅವರನ್ನು 10 ಲಕ್ಷಕ್ಕೆ ಖರೀದಿ ಮಾಡಿದೆ. ಸ್ಫೋಟಕ ಬ್ಯಾಟರ್ ಚೇತನ್ ಎಲ್​ ಆರ್ ಕೂಡ 11.50 ಲಕ್ಷಕ್ಕೆ ಮೈಸೂರು ತಂಡವನ್ನು ಸೇರಿಕೊಂಡಿದ್ದಾರೆ.

ಕರುಣ್​ಗೆ ಗರಿಷ್ಠ ಬೆಲೆ

ಉಳಿದಂತೆ ಸ್ಟಾರ್ ಆಟಗಾರರ ಪೈಕಿ ಕರುಣ್ ನಾಯರ್ ಬರೋಬ್ಬರಿ 18 ಲಕ್ಷಕ್ಕೆ ಮಂಗಳೂರು ತಂಡವನ್ನು ಸೇರಿಕೊಂಡರೆ, ಆಲ್​ರೌಂಡರ್ ಶ್ರೇಯಸ್ ಗೋಪಾಲ್ ಕೂಡ 10.25 ಲಕ್ಷಕ್ಕೆ ಇದೇ ತಂಡವನ್ನು ಸೇರಿಕೊಂಡಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ಪರ ಐಪಿಎಲ್​ಗೆ ಪಾದಾರ್ಪಣೆ ಮಾಡಿದ್ದ ಸ್ಮರಣ್ ರವಿಚಂದ್ರನ್ ಅವರನ್ನು 15.75 ಲಕ್ಷಕ್ಕೆ ಶಿವಮೊಗ್ಗ ಫ್ರಾಂಚೈಸಿ ಖರೀದಿ ಮಾಡಿದೆ. ಸ್ಫೋಟಕ ದಾಂಡಿಗ ಅಭಿನವ್ ಮನೋಹರ್ ಅವರನ್ನು ಹುಬ್ಬಳ್ಳಿ ಟೈಗರ್ಸ್​ 13.50 ಲಕ್ಷಕ್ಕೆ ಖರೀದಿ ಮಾಡಿದೆ. ಇದೇ ತಂಡಕ್ಕೆ ಅನುಭವಿ ಮಯಾಂಕ್ ಅಗರ್ವಾಲ್ ಕೂಡ 11.50 ಲಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಹಾರ್ದಿಕ್ ರಾಜ್ ಅವರನ್ನು ಸಹ 7.50 ಲಕ್ಷಕ್ಕೆ ಖರೀದಿ ಮಾಡಲಾಗಿದೆ. ಇವರ ಜೊತೆಗೆ ಇತರ ಯುವ ಹಾಗೂ ಅನುಭವಿ ಆಟಗಾರರು ಉತ್ತಮ ತಂಡಕ್ಕೆ ವಿವಿಧ ಫ್ರಾಂಚೈಸಿಗಳನ್ನು ಸೇರಿಕೊಂಡಿದ್ದಾರೆ.

RCB vs GT: 6,6,6,6,6,6.. 20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್

ಮೂರು ನಗರಗಳಲ್ಲಿ ಪಂದ್ಯಾವಳಿ

ಹರಾಜಿನ ನಿಯಮಗಳ ಪ್ರಕಾರ ಪ್ರತಿ ಫ್ರಾಂಚೈಸಿಯೂ ಕನಿಷ್ಠ 16 ಮತ್ತು ಗರಿಷ್ಠ 18 ಆಟಗಾರರನ್ನು ಖರೀದಿಸಬಹುದಾಗಿದೆ. ಈ ಬಾರಿಯ ಮಹಾರಾಜ ಟಿ20 ಟ್ರೋಫಿ ಕರ್ನಾಟಕದ ಮೂರು ನಗರಗಳಲ್ಲಿ ನಡೆಯಲಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ, ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದ ಜೊತೆಗೆ ಹುಬ್ಬಳ್ಳಿ ಕ್ರೀಡಾಂಗಣ ಆತಿಥ್ಯ ನೀಡುತ್ತಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:22 pm, Fri, 5 June 26

Follow Us
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ