AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 9 ಭರ್ಜರಿ ಸಿಕ್ಸ್​: ಅಭಿನವ್ ಅಬ್ಬರಕ್ಕೆ ತತ್ತರಿಸಿದ ಎದುರಾಳಿ ಪಡೆ

Maharaja Trophy 2024: ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಅಭಿನವ್ ಮನೋಹರ್ ಸಿಡಿಲಬ್ಬರ ಮುಂದುವರೆದಿದೆ. ಈಗಾಗಲೇ ಆಡಿದ 8 ಪಂದ್ಯಗಳಲ್ಲಿ ಅಭಿನವ್ ಒಟ್ಟು 5 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಈ ಬಾರಿಯ ಟೂರ್ನಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಬರೋಬ್ಬರಿ 9 ಭರ್ಜರಿ ಸಿಕ್ಸ್​: ಅಭಿನವ್ ಅಬ್ಬರಕ್ಕೆ ತತ್ತರಿಸಿದ ಎದುರಾಳಿ ಪಡೆ
Abhinav Manohar
ಝಾಹಿರ್ ಯೂಸುಫ್
|

Updated on: Aug 28, 2024 | 8:54 AM

Share

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮಹಾರಾಜ ಟ್ರೋಫಿ ಟಿ20 ಟೂರ್ನಿಯ 25ನೇ ಪಂದ್ಯದಲ್ಲಿ ಶಿವಮೊಗ್ಗ ಲಯನ್ಸ್ ತಂಡವು ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನ ರೂವಾರಿ ಸ್ಪೋಟಕ ದಾಂಡಿಗ ಅಭಿನವ್ ಮನೋಹರ್. ಈ ಪಂದ್ಯದಲ್ಲಿ ಟಾಸ್ ಗೆದ್ದ ಶಿವಮೊಗ್ಗ ಲಯನ್ಸ್ ತಂಡದ ನಾಯಕ ನಿಹಾಲ್ ಉಲ್ಲಾಳ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಗುಲ್ಬರ್ಗ ಮಿಸ್ಟಿಕ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಲವ್​ನೀತ್ ಸಿಸೋಡಿಯಾ (0) ವಿ ಕೌಶಿಕ್ ಎಸೆತದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಇದಾಗ್ಯೂ ನಾಯಕ ದೇವದತ್ ಪಡಿಕ್ಕಲ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಅಲ್ಲದೆ 35 ಎಸೆತಗಳಲ್ಲಿ 50 ರನ್ ಬಾರಿಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ಆ ಬಳಿಕ ಬಂದ ಸ್ಮರಣ್ 30 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 63 ರನ್​ ಸಿಡಿಸಿದರೆ, ವಿಜಯಕುಮಾರ್ ವೈಶಾಕ್ 21 ಎಸೆತಗಳಲ್ಲಿ 1 ಸಿಕ್ಸ್, 5 ಫೋರ್​ಗಳೊಂದಿಗೆ 38 ರನ್​ಗಳ ಕೊಡುಗೆ ನೀಡಿದರು. ಇನ್ನು ಪ್ರವೀಣ್ ದುಬೆ 12 ಎಸೆತಗಳಲ್ಲಿ 24 ರನ್ ಬಾರಿಸಿದರು. ಈ ಮೂಲಕ ಗುಲ್ಬರ್ಗ ಮಿಸ್ಟಿಕ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 206 ರನ್​ ಕಲೆಹಾಕಿತು.

ಕಠಿಣ ಗುರಿ-ಭರ್ಜರಿ ಚೇಸಿಂಗ್:

207 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಶಿವಮೊಗ್ಗ ಲಯನ್ಸ್ ದೀರಜ್ ಮೋಹನ್ (18) ಹಾಗೂ ನಿಹಾಲ್ ಉಲ್ಲಾಳ್ (32) ಉತ್ತಮ ಆರಂಭ ಒದಗಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಭರತ್ ಕೇವಲ 14 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

ಈ ಹಂತದಲ್ಲಿ ಕಣಕ್ಕಿಳಿದಿದ್ದ ಅಭಿನವ್ ಮನೋಹರ್ ಅಕ್ಷರಶಃ ಅಬ್ಬರಿಸಲಾರಂಭಿಸಿದರು. ಗುಲ್ಬರ್ಗ ಮಿಸ್ಟಿಕ್ಸ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ಅಭಿನವ್ ಸಿಕ್ಸ್​ಗಳ ಸುರಿಮಳೆಗೈದರು.

ಮೈದಾನದ ಮೂಲೆ ಮೂಲೆಗೂ ಸಿಕ್ಸ್​ಗಳನ್ನು ಸಿಡಿಸಿದ ಅಭಿನವ್ ಕೇವಲ 34 ಎಸೆತಗಳಲ್ಲಿ 2 ಫೋರ್ ಹಾಗೂ 9 ಸಿಕ್ಸರ್​ಗಳೊಂದಿಗೆ ಅಜೇಯ 76 ರನ್​ ಚಚ್ಚಿದರು. ಅಭಿನವ್​ಗೆ ಉತ್ತಮ ಸಾಥ್ ನೀಡಿದ ರೋಹನ್ ನವೀನ್ 14 ಎಸೆತಗಳಲ್ಲಿ 3 ಸಿಕ್ಸ್​​ನೊಂದಿಗೆ 36 ರನ್ ಬಾರಿಸಿದರು.

ಅಭಿನವ್ ಮನೋಹರ್ ಹಾಗೂ ರೋಹನ್ ನವೀನ್ ಅವರ ಈ ಸ್ಪೋಟಕ ಇನಿಂಗ್ಸ್​ಗಳ ನೆರವಿನೊಂದಿಗೆ ಶಿವಮೊಗ್ಗ ಲಯನ್ಸ್ ತಂಡವು 19.1 ಓವರ್​ಗಳಲ್ಲಿ 207 ರನ್​ಗಳ ಗುರಿ ಮುಟ್ಟಿತು. ಈ ಮೂಲಕ ಶಿವಮೊಗ್ಗ ಲಯನ್ಸ್ ತಂಡವು 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಗುಲ್ಬರ್ಗ ಮಿಸ್ಟಿಕ್ಸ್ ಪ್ಲೇಯಿಂಗ್ 11: ಲವ್​ನೀತ್ ಸಿಸೋಡಿಯಾ (ವಿಕೆಟ್ ಕೀಪರ್) , ದೇವದತ್ ಪಡಿಕ್ಕಲ್ (ನಾಯಕ) , ಸೌರಭ್ ಮುತ್ತೂರ್ , ಸ್ಮರಣ್ ಆರ್ , ಪ್ರವೀಣ್ ದುಬೆ , ರಿತೇಶ್ ಭಟ್ಕಳ್ , ಪೃಥ್ವಿರಾಜ್ ಶೇಖಾವತ್ , ವಿಜಯ್ ಕುಮಾರ್ ವೈಶಾಕ್ , ಅಭಿಷೇಕ್ ಪ್ರಭಾಕರ್ , ಆದಿತ್ಯ ನಾಯರ್ , ಪರಂತ್ ಯಶೋವರ್ಧನ್.

ಇದನ್ನೂ ಓದಿ: Dinesh Karthik: ಹೊಸ ತಂಡದ ಪರ ಕಣಕ್ಕಿಳಿಯಲಿದ್ದಾರೆ RCB ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್

ಶಿವಮೊಗ್ಗ ಲಯನ್ಸ್ ಪ್ಲೇಯಿಂಗ್ 11: ನಿಹಾಲ್ ಉಳ್ಳಾಲ್ (ನಾಯಕ) , ಭರತ್ ಧುರಿ , ಅಭಿನವ್ ಮನೋಹರ್, ರೋಹನ್ ನವೀನ್, ಎಸ್ ಶಿವರಾಜ್ , ಹಾರ್ದಿಕ್ ರಾಜ್ , ಧೀರಜ್ ಮೋಹನ್ , ಅವಿನಾಶ್ ಡಿ , ವಾಸುಕಿ ಕೌಶಿಕ್ , ಎಚ್ ಎಸ್ ಶರತ್ , ಆನಂದ್ ದೊಡ್ಡಮನಿ

Follow Us
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ