AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja Trophy 2024: ಮೈಸೂರಿಗೆ ಸೋಲುಣಿಸಿ ಮತ್ತೆ ಅಗ್ರಸ್ಥಾನಕ್ಕೇರಿದ ಬೆಂಗಳೂರು

Maharaja Trophy 2024: ಮಹಾರಾಜ ಟ್ರೋಫಿಯಲ್ಲಿ ಇಂದು ನಡೆದ 21ನೇ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್​ ಹಾಗೂ ಮೈಸೂರು ವಾರಿಯರ್ಸ್​ ತಂಡಗಳು ಮುಖಾಮುಖಿಯಾಗಿದ್ದವು. ಬಲಿಷ್ಠ ತಂಡಗಳ ಈ ಮುಖಾಮುಖಿಯಲ್ಲಿ ಜಿದ್ದಾಜಿದ್ದಿನ ಹೋರಾಟವನ್ನು ನಿರೀಕ್ಷಿಸಲಾಗಿತ್ತು. ಆದರೆ ಆರಂಭದಿಂದಲೂ ಪಂದ್ಯದಲ್ಲಿ ಹಿಡಿತ ಸಾಧಿಸಿದ ಬೆಂಗಳೂರು ತಂಡ, ಮೈಸೂರು ತಂಡವನ್ನು 56 ರನ್​ಗಳಿಂದ ಮಣಿಸುವಲ್ಲಿ ಯಶಸ್ವಿಯಾಯಿತು.

Maharaja Trophy 2024: ಮೈಸೂರಿಗೆ ಸೋಲುಣಿಸಿ ಮತ್ತೆ ಅಗ್ರಸ್ಥಾನಕ್ಕೇರಿದ ಬೆಂಗಳೂರು
ಬೆಂಗಳೂರು ಬ್ಲಾಸ್ಟರ್ಸ್​
ಪೃಥ್ವಿಶಂಕರ
|

Updated on:Aug 25, 2024 | 7:25 PM

Share

ಮಹಾರಾಜ ಟ್ರೋಫಿಯಲ್ಲಿ ಇಂದು ನಡೆದ 21ನೇ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್​ ಹಾಗೂ ಮೈಸೂರು ವಾರಿಯರ್ಸ್​ ತಂಡಗಳು ಮುಖಾಮುಖಿಯಾಗಿದ್ದವು. ಬಲಿಷ್ಠ ತಂಡಗಳ ಈ ಮುಖಾಮುಖಿಯಲ್ಲಿ ಜಿದ್ದಾಜಿದ್ದಿನ ಹೋರಾಟವನ್ನು ನಿರೀಕ್ಷಿಸಲಾಗಿತ್ತು. ಆದರೆ ಆರಂಭದಿಂದಲೂ ಪಂದ್ಯದಲ್ಲಿ ಹಿಡಿತ ಸಾಧಿಸಿದ ಬೆಂಗಳೂರು ತಂಡ, ಮೈಸೂರು ತಂಡವನ್ನು 56 ರನ್​ಗಳಿಂದ ಮಣಿಸುವಲ್ಲಿ ಯಶಸ್ವಿಯಾಯಿತು. ಈ ಗೆಲುವಿನೊಂದಿಗೆ ಬೆಂಗಳೂರು ತಂಡ ಮತ್ತೆ ಅಗ್ರಸ್ಥಾನಕ್ಕೇರಿದರೆ, ಮೈಸೂರು ತಂಡ ನಾಲ್ಕನೇ ಸ್ಥಾನದಲ್ಲೇ ಉಳಿದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬೆಂಗಳೂರು ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 189 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಮೈಸೂರು ತಂಡ ಪೂರ್ಣ 20 ಓವರ್​ಗಳನ್ನು ಆಡಲಾಗದೆ 17.5 ಓವರ್​ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 133 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

ಮೊದಲು ಬ್ಯಾಟಿಂಗ್ ಮಾಡಿದ ಬೆಂಗಳೂರು ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ದೇಗಾ ನಿಶ್ಚಲ್ ಮೊದಲ ಎಸೆತದಲ್ಲೇ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ನಂತರ ಬಂದ ನಿರಂಜನ್ ಕೂಡ 3 ರನ್​​ಗಳಿಗೆ ಬ್ಯಾಟ್ ಎತ್ತಿಟ್ಟರು. ಆದರೆ ಆ ಬಳಿಕ ಆರಂಭಿಕ ಚೇತನ್ ಜೊತೆಯಾದ ರಕ್ಷಿತ್ ಅರ್ಧಶತಕದ ಜೊತೆಯಾಟ ಆಡಿದರು. ಈ ವೇಳೆ ರಕ್ಷಿತ್ ಅವರ ಇನ್ನಿಂಗ್ಸ್ 29 ರನ್​ಗಳಿಗೆ ಅಂತ್ಯವಾಯಿತು. ಐದನೇ ಕ್ರಮಾಂಕದಲ್ಲಿ ಬಂದ ಸೂರಜ್ ಕೂಡ 16 ಎಸೆತಗಳಲ್ಲಿ 32 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.

ಆದರೆ ತಂಡದ ಪರ ಆರಂಭದಿಂದಲೂ ಏಕಾಂಗಿ ಹೋರಾಟ ನಡೆಸಿದ ಎಲ್​ ಆರ್ ಶರತ್ ಸಿಡಿಲಬ್ಬರದ ಆಟ ಪ್ರದರ್ಶಿಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 53 ಎಸೆತಗಳನ್ನು ಎದುರಿಸಿದ ಶರತ್ 9 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 88 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದರು. ಈ ಮೂವರ ಆಟದಿಂದಾಗಿ ಬೆಂಗಳೂರು ತಂಡ 189 ರನ್​ಗಳ ಸ್ಪರ್ಧಾತ್ಮಕ ಮೊತ್ತ ಕಲೆಹಾಕಿತು.

ಈ ಗುರಿ ಬೆನ್ನಟ್ಟಿದ ಮೈಸೂರು ತಂಡಕ್ಕೆ ಮೊದಲ ವಿಕೆಟ್​ಗೆ 31 ರನ್​ಗಳ ಜೊತೆಯಾಟ ಸಿಕ್ಕಿತು. ಈ ವೇಳೆ ಕಾರ್ತಿಕ್ 17 ಬಾರಿಸಿ ಪೆವಿಲಿಯನ್ ಸೇರಿಕೊಂಡರೆ ಮತ್ತೊಬ್ಬ ಆರಂಭಿಕ ಕಾರ್ತಿಕ್ ಅವರ ಇನ್ನಿಂಗ್ಸ್ ಕೂಡ 26 ರನ್​ಗಳಿಗೆ ಅಂತ್ಯವಾಯಿತು. ಈ ಪಂದ್ಯದಲ್ಲೂ ದಯನೀಯವಾಗಿ ವಿಫಲರಾದ ಸಮಿತ್ ದ್ರಾವಿಡ್ 5 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರು. ತಂಡದ ಆಧಾರಸ್ತಂಭವಾದ ನಾಯಕ ಕರುಣ್ ಅವರ ಇನ್ನಿಂಗ್ಸ್ ಕೂಡ 13 ರನ್ ದಾಟಿ ಮುಂದಕ್ಕೆ ಹೋಗಲಿಲ್ಲ. ಇವರನ್ನು ಹೊರತುಪಡಿಸಿ ಹರ್ಷಿತ್ 20 ರನ್ ಬಾರಿಸಿದರೆ, ಸುಚಿತ್ 16 ರನ್ ಸುಮಿತ್ 18 ರನ್ ಕಲೆಹಾಕಲಷ್ಟೇ ಶಕ್ತರಾದರು. ಉಳಿದಂತೆ ತಂಡದ ಪರ ಯಾರಿಂದಲೂ ಗೆಲುವಿನ ಇನ್ನಿಂಗ್ಸ್ ಕಂಡುಬರಲಿಲ್ಲ. ಹೀಗಾಗಿ ತಂಡ 133 ರನ್​ಗಳಿಗೆ ಆಲೌಟ್ ಆಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:10 pm, Sun, 25 August 24

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ