AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಭಾಂಗ್- ಸೂರಜ್ ಅಜೇಯ ಆಟ; ಸೋಲಿನೊಂದಿಗೆ ಟೂರ್ನಿಯಿಂದ ಹೊರಬಿದ್ದ ಶಿವಮೊಗ್ಗ

Maharaja Trophy 2024: ಮಹಾರಾಜ ಟ್ರೋಫಿಯ 28ನೇ ಪಂದ್ಯದಲ್ಲಿ ಶಿವಮೊಗ್ಗ ಲಯನ್ಸ್ ಹಾಗೂ ಬೆಂಗಳೂರು ಬ್ಲಾಸ್ಟರ್ಸ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಶಿವಮೊಗ್ಗ ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದ ಬೆಂಗಳೂರು ತಂಡ ಟೇಬಲ್ ಟಾಪರ್ ಆಗಿ ಸೆಮಿಫೈನಲ್‌ಗೇರಿದೆ. ಇತ್ತ 227 ರನ್​ಗಳ ಬೃಹತ್ ಟಾರ್ಗೆಟ್ ನೀಡಿದ ಹೊರತಾಗಿಯೂ ಸೋಲಿನೊಂದಿಗೆ ಟೂರ್ನಿಂದ ಹೊರಬಿದ್ದಿದೆ.

ಶುಭಾಂಗ್- ಸೂರಜ್ ಅಜೇಯ ಆಟ; ಸೋಲಿನೊಂದಿಗೆ ಟೂರ್ನಿಯಿಂದ ಹೊರಬಿದ್ದ  ಶಿವಮೊಗ್ಗ
ಬೆಂಗಳೂರು ಬ್ಲಾಸ್ಟರ್ಸ್
ಪೃಥ್ವಿಶಂಕರ
|

Updated on:Aug 28, 2024 | 11:08 PM

Share

ಮಹಾರಾಜ ಟ್ರೋಫಿಯ 28ನೇ ಪಂದ್ಯದಲ್ಲಿ ಶಿವಮೊಗ್ಗ ಲಯನ್ಸ್ ಹಾಗೂ ಬೆಂಗಳೂರು ಬ್ಲಾಸ್ಟರ್ಸ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಶಿವಮೊಗ್ಗ ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದ ಬೆಂಗಳೂರು ತಂಡ ಟೇಬಲ್ ಟಾಪರ್ ಆಗಿ ಸೆಮಿಫೈನಲ್‌ಗೇರಿದೆ. ಇತ್ತ 227 ರನ್​ಗಳ ಬೃಹತ್ ಟಾರ್ಗೆಟ್ ನೀಡಿದ ಹೊರತಾಗಿಯೂ ಸೋಲಿನೊಂದಿಗೆ ಟೂರ್ನಿಂದ ಹೊರಬಿದ್ದಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶಿವಮೊಗ್ಗ ತಂಡ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು ಬರೋಬ್ಬರಿ 227 ರನ್ ಕಲೆಹಾಕಿತು. ಇತ್ತ ಈ ಬೃಹತ್ ಟಾರ್ಗೆಟ್ ಬೆನ್ನಟ್ಟಿದ ಬೆಂಗಳೂರು ತಂಡ ಶುಭಾಂಗ್ ಹಾಗೂ ಸೂರಜ್ ಅವರ ಅಜೇಯ 169 ರನ್​ಗಳ ಜೊತೆಯಾಟದಿಂದಾಗಿ ಇನ್ನು 6 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಮುಟ್ಟಿತು.

ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶಿವಮೊಗ್ಗ ತಂಡಕ್ಕೆ ಮತ್ತೆ ಆರಂಭಿಕರು ಕೈಕೊಟ್ಟರು. ಹೀಗಾಗಿ ತಂಡಕ್ಕೆ ಮೊದಲ ವಿಕೆಟ್​ಗೆ 29 ರನ್​ಗಳ ಜೊತೆಯಾಟ ಸಿಕ್ಕಿತು. ನಾಯಕ ನಿಹಾಲ್ 12 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರೆ, ಮತ್ತೊಬ್ಬ ಆರಂಭಿಕ ಪ್ರಭಾಕರ್ 16 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು. 4 ಮತ್ತು 5ನೇ ವಿಕೆಟ್​ಗೆ ಜೊತೆಯಾದ ಮೋಹಿತ್ ಹಾಗೂ ಅಭಿನವ್ ಅರ್ಧಶತಕದ ಜೊತೆಯಾಟ ನಡೆಸಿದರು. ಈ ವೇಳೆ ಮೋಹಿತ್ 38 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 56 ರನ್ ಬಾರಿಸಿ ಔಟಾದರು.

ಅಭಿನವ್- ರೋಹನ್ ಸ್ಫೋಟಕ ಬ್ಯಾಟಿಂಗ್

ಆ ಬಳಿಕ ಅಭಿನವ್ ಜೊತೆಯಾದ ರೋಹನ್ ಕೂಡ ಮೈದಾನದಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದರು. ಅಭಿನವ್ ಎಂದಿನಂತೆ ಇಡೀ ಟೂರ್ನಿಯಲ್ಲಿ ಯಾವ ರೀತಿ ಅಬ್ಬರಿಸಿದ್ದರೋ ಅದೇ ರೀತಿಯ ಪ್ರದರ್ಶನವನ್ನು ಈ ಪಂದ್ಯದಲ್ಲೂ ತೋರಿದರು. ತಮ್ಮ ಇನ್ನಿಂಗ್ಸ್​ನಲ್ಲಿ ಭರ್ಜರಿ 7 ಸಿಕ್ಸರ್​ಗಳನ್ನು ಸಿಡಿಸಿದ ಅಭಿನವ್ ಈ ಆವೃತ್ತಿಯಲ್ಲಿ ಸಿಕ್ಸರ್​ಗಳ ಅರ್ಧಶತಕ ಪೂರೈಸಿದರು. ಹಾಗೆಯೇ ಒಟ್ಟಾರೆಯಾಗಿ ಈ ಆವೃತ್ತಿಯಲ್ಲಿ 500 ಕ್ಕೂ ಅಧಿಕ ರನ್ ಕಲೆಹಾಕುವ ಮೂಲಕ ಈ ಸಾಧನೆ ಮಾಡಿದ ಎರಡನೇ ಬ್ಯಾಟರ್ ಎನಿಸಿಕೊಂಡರು.

ಹಾಗೆಯೇ ಈ ಪಂದ್ಯದಲ್ಲಿ ಕೇವಲ 24 ಎಸೆತಗಳಲ್ಲಿ 59 ರನ್ ಚಚ್ಚಿದ ಅಭಿನವ್ ಆರೆಂಜ್ ಕ್ಯಾಪನ್ನು ಮತ್ತೆ ತಮ್ಮದಾಗಿಸಿಕೊಂಡರು. ಅಭಿನವ್​ಗೆ ಸಾಥ್ ನೀಡಿದ ರೋಹನ್ ಕೂಡ 21 ಎಸೆತಗಳಲ್ಲಿ 2 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 45 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಈ ಮೂವರ ಆಟದಿಂದಾಗಿ ತಂಡ 227 ರನ್​ಗಳ ಬೃಹತ್ ಮೊತ್ತ ಕಲೆಹಾಕಿತು.

ಶುಭಾಂಗ್- ಸೂರಜ್ ದಾಖಲೆಯ ಜೊತೆಯಾಟ

ಈ ಗುರಿ ಬೆನ್ನಟ್ಟಿದ ಬೆಂಗಳೂರು ತಂಡಕ್ಕೆ ಅಗ್ರಕ್ರಮಾಂಕ ಕೈಕೊಟ್ಟಿತು. ನಾಯಕ ಮಯಾಂಕ್ ಗಳಿಸಿದ 33 ರನ್ ಬಿಟ್ಟರೆ ಉಳಿದವರಿಂದ ಹೇಳಿಕೊಳ್ಳುವಂತಹ ಇನ್ನಿಂಗ್ಸ್ ಮೂಡಿಬರಲಿಲ್ಲ. ಹೀಗಾಗಿ ತಂಡದ ಸೋಲು ಖಚಿತವಾದಂತೆ ತೋರುತ್ತಿತ್ತು. ಆದರೆ ಐದು ಮತ್ತು ಆರನೇ ಕ್ರಮಾಂಕದಲ್ಲಿ ಜೊತೆಯಾದ ಶುಭಾಂಗ್ ಹಾಗೂ ಸೂರಜ್ ದಾಖಲೆಯ 169 ರನ್​ಗಳ ಅಜೇಯ ಜೊತೆಯಾಟವನ್ನಾಡಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಈ ವೇಳೆ ಶುಭಾಂಗ್ 44 ಎಸೆತಗಳಲ್ಲಿ 6 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ ಅಜೇಯ 85 ರನ್ ಬಾರಿಸಿದರೆ, ಮತ್ತೊಂದು ತುದಿಯಲ್ಲಿ ಶುಭಾಂಗ್​ಗೆ ಸಾಥ್ ನೀಡಿದ ಸೂರಜ್ ಕೂಡ 38 ಎಸೆತಗಳಲ್ಲಿ 9 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 82 ರನ್ ಬಾರಿಸಿ ತಂಡವನ್ನು ಗುರಿ ಮುಟ್ಟಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:54 pm, Wed, 28 August 24

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ