AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja Trophy 2024: ಅಜೇಯ ಶತಕ ಸಿಡಿಸಿ ಗುಲ್ಬರ್ಗಕ್ಕೆ ಚೊಚ್ಚಲ ಗೆಲುವು ತಂದ ಸ್ಮರಣ್

Maharaja Trophy 2024: ಬೆಂಗಳೂರಿನಲ್ಲಿ ನಡೆದ ಮಹಾರಾಜ ಟ್ರೋಫಿ 7 ನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್​ ತಂಡವನ್ನು ಗುಲ್ಬರ್ಗ ಮಿಸ್ಟಿಕ್ಸ್ ತಂಡ 3 ವಿಕೆಟ್​ಗಳಿಂದ ಮಣಿಸಿತು. ಇದರೊಂದಿಗೆ ಈ ಲೀಗ್​ನಲ್ಲಿ ಗುಲ್ಬರ್ಗ ತಂಡ ತನ್ನ ಗೆಲುವಿನ ಖಾತೆಯನ್ನು ತೆರೆಯಿತು. ಈ ಪಂದ್ಯಕ್ಕೂ ಮುನ್ನ ಎರಡು ಪಂದ್ಯಗಳನ್ನಾಡಿದ್ದ ಗುಲ್ಬರ್ಗ ತಂಡ ಆಡಿದ ಎರಡು ಪಂದ್ಯಗಳಲ್ಲೂ ಸೋತಿತ್ತು.

Maharaja Trophy 2024: ಅಜೇಯ ಶತಕ ಸಿಡಿಸಿ ಗುಲ್ಬರ್ಗಕ್ಕೆ ಚೊಚ್ಚಲ ಗೆಲುವು ತಂದ ಸ್ಮರಣ್
ಸ್ಮರಣ್ ರವಿಚಂದ್ರನ್
ಪೃಥ್ವಿಶಂಕರ
|

Updated on:Aug 18, 2024 | 8:01 PM

Share

ಬೆಂಗಳೂರಿನಲ್ಲಿ ನಡೆದ ಮಹಾರಾಜ ಟ್ರೋಫಿ 7 ನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್​ ತಂಡವನ್ನು ಗುಲ್ಬರ್ಗ ಮಿಸ್ಟಿಕ್ಸ್ ತಂಡ 3 ವಿಕೆಟ್​ಗಳಿಂದ ಮಣಿಸಿತು. ಇದರೊಂದಿಗೆ ಈ ಲೀಗ್​ನಲ್ಲಿ ಗುಲ್ಬರ್ಗ ತಂಡ ತನ್ನ ಗೆಲುವಿನ ಖಾತೆಯನ್ನು ತೆರೆಯಿತು. ಈ ಪಂದ್ಯಕ್ಕೂ ಮುನ್ನ ಎರಡು ಪಂದ್ಯಗಳನ್ನಾಡಿದ್ದ ಗುಲ್ಬರ್ಗ ತಂಡ ಆಡಿದ ಎರಡು ಪಂದ್ಯಗಳಲ್ಲೂ ಸೋತಿತ್ತು. ಒಂದು ಹಂತದಲ್ಲಿ ಈ ಪಂದ್ಯವೂ ಗುಲ್ಬರ್ಗ ಕೈಯಿಂದ ಜಾರಿತ್ತು. ಆದರೆ ತಂಡದ ಪರ ಏಕಾಂಗಿ ಹೋರಾಟ ನಡೆಸಿದ ಸ್ಮರಣ್ ರವಿಚಂದ್ರನ್ ಅಜೇಯ ಶತಕ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಇತ್ತ 196 ರನ್​ಗಳ ಬೃಹತ್ ಮೊತ್ತ ಕಲೆಹಾಕಿಯೂ ಮೈಸೂರು ವಾರಿಯರ್ಸ್​ ತಂಡ ಸತತ ಎರಡನೇ ಸೋಲು ಅನುಭವಿಸಬೇಕಾಯಿತು.

ಕರುಣ್ ಸ್ಫೋಟಕ ಅರ್ಧಶತಕ

ಪಂದ್ಯದಲ್ಲಿ ಟಾಸ್ ಗೆದ್ದ ಗುಲ್ಬರ್ಗ ಮಿಸ್ಟಿಕ್ಸ್ ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಮೈಸೂರು ವಾರಿಯರ್ಸ್​ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಬರೋಬ್ಬರಿ 198 ರನ್ ಕಲೆಹಾಕಿತು. ತಂಡದ ಪರ ನಾಯಕ ಕರುಣ್ ನಾಯರ್ ಸ್ಫೋಟಕ ಅರ್ಧಶತಕ ಸಿಡಿಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 35 ಎಸೆತಗಳನ್ನು ಎದುರಿಸಿದ ಕರುಣ್ 8 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 66 ರನ್ ಕಲೆಹಾಕಿದರು.

ಕರುಣ್​ಗೆ ಸಾಥ್ ನೀಡಿದ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ ದ್ರಾವಿಡ್ 24 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 33 ರನ್ ಬಾರಿಸಿದರು. ಇದರೊಂದಿಗೆ ಸಮಿತ್ ತಮ್ಮ ಕಳಪೆ ಫಾರ್ಮ್​ನಿಂದ ಹೊರಬರುವ ಕೆಲಸ ಮಾಡಿದರು. ವಾಸ್ತವವಾಗಿ ಸಮಿತ್ ಆಡಿದ ಮೊದಲೆರಡು ಪಂದ್ಯಗಳಲ್ಲಿ ಕೇವಲ ಒಂದಂಕಿಗೆ ಸುಸ್ತಾಗಿದ್ದರು. ಇನ್ನು ಕೆಳಕ್ರಮಾಂಕದಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ ಜಗದೀಶ್ ಸುಚಿತ್ 13 ಎಸೆತಗಳಲ್ಲಿ 2 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 40 ರನ್​ಗಳ ಕಾಣಿಕೆ ನೀಡಿದರು. ಈ ಮೂವರ ಆಟದಿಂದ ಮೈಸೂರು ತಂಡ 196 ರನ್ ಕಲೆಹಾಕಿತು.

ಗುಲ್ಬರ್ಗ ತಂಡಕ್ಕೆ ಕಳಪೆ ಆರಂಭ

ಈ ಗುರಿ ಬೆನ್ನಟ್ಟಿದ ಗುಲ್ಬರ್ಗ ತಂಡಕ್ಕೆ ಕಳಪೆ ಆರಂಭ ಸಿಕ್ಕಿತು. ಲುವ್ನಿತ್ ಸಿಸೋಡಿಯಾ 4 ರನ್​ಗಳಿಗೆ ಸುಸ್ತಾದರೆ, ನಾಯಕ ದೇವದತ್ ಪಡಿಕ್ಕಲ್ 1 ರನ್​ ಬಾರಿಸಿ ಪೆವಿಲಿಯನ್ ಸೇರಿಕೊಂಡರು. ಅನೀಶ್ ಇನ್ನಿಂಗ್ಸ್​ 24 ರನ್​ಗಳಿಗೆ ಕೊನೆಗೊಂಡಿತು. ಇಲ್ಲಿಂದ ತಂಡದ ಇನ್ನಿಂಗ್ಸ್ ಜವಬ್ದಾರಿ ಹೊತ್ತ ಸ್ಮರಣ್ ರವಿಚಂದ್ರನ್ ಏಕಾಂಗಿ ಹೋರಾಟ ನಡೆಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಸ್ಮರಣ್ ಸ್ಮರಣೀಯ ಇನ್ನಿಂಗ್ಸ್

ಸ್ಮರಣ್ ತಮ್ಮ ಇನ್ನಿಂಗ್ಸ್​ನಲ್ಲಿ 60 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 104 ರನ್ ಬಾರಿಸಿದರು. ಒಂದು ವೇಳೆ ಸ್ಮರಣ್ ಅಜೇಯ ಶತಕ ಸಿಡಿಸದಿದ್ದರೆ, ಗುಲ್ಬರ್ಗ ತಂಡಕ್ಕೆ ಈ ಪಂದ್ಯದಲ್ಲೂ ಸೋಲು ಖಚಿತವಾಗಿತ್ತು. ಆದರೆ ಕೆಳಕ್ರಮಾಂಕದಲ್ಲಿ ಪ್ರವೀಣ್ ದುಬೆ ಅವರಿಂದ 37 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಜೊತೆಗೆ ಉತ್ತಮ ಸಾಥ್ ಪಡೆದ ಸ್ಮರಣ್ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:51 pm, Sun, 18 August 24

ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು