AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja Trophy 2024: ಸ್ಮರಣ್ ಅರ್ಧಶತಕ; ಮೈಸೂರು ವಿರುದ್ಧ ಗೆದ್ದ ಗುಲ್ಬರ್ಗಾ

Maharaja Trophy 2024: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಾರಾಜ ಟ್ರೋಫಿ 19ನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್​ ತಂಡವನ್ನು ಗುಲ್ಬರ್ಗಾ ಮಿಸ್ಟಿಕ್ಸ್ ತಂಡ 5 ವಿಕೆಟ್​ಗಳಿಂದ ಮಣಿಸಿದೆ.

Maharaja Trophy 2024: ಸ್ಮರಣ್ ಅರ್ಧಶತಕ; ಮೈಸೂರು ವಿರುದ್ಧ ಗೆದ್ದ ಗುಲ್ಬರ್ಗಾ
ಗುಲ್ಬರ್ಗಾ ಮಿಸ್ಟಿಕ್ಸ್
ಪೃಥ್ವಿಶಂಕರ
|

Updated on:Aug 24, 2024 | 6:38 PM

Share

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಾರಾಜ ಟ್ರೋಫಿ 19ನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್​ ತಂಡವನ್ನು ಗುಲ್ಬರ್ಗಾ ಮಿಸ್ಟಿಕ್ಸ್ ತಂಡ 5 ವಿಕೆಟ್​ಗಳಿಂದ ಮಣಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮೈಸೂರು ತಂಡ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 154 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಗುಲ್ಬರ್ಗಾ ತಂಡ 5 ವಿಕೆಟ್​ ಕಳೆದುಕೊಂಡು ಇನ್ನು 7 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಮುಟ್ಟಿತು. ಇದರೊಂದಿಗೆ ಉಭಯ ತಂಡಗಳು ಇದುವರೆಗೆ ಟೂರ್ನಿಯಲ್ಲಿ ತಲಾ 7 ಪಂದ್ಯಗಳನ್ನು ಆಡಿದ್ದು, ಗುಲ್ಬರ್ಗಾ ತಂಡ 4 ಪಂದ್ಯದಲ್ಲಿ ಗೆಲುವು ಹಾಗೂ 2 ಪಂದ್ಯದಲ್ಲಿ ಸೋಲಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದರೆ, ಮೈಸೂರು ತಂಡ 4 ಗೆಲುವು ಹಾಗೂ 3 ಸೋಲಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಾರಿದೆ.

ಮನೋಜ್- ಸುಚಿತ್ ಜೊತೆಯಾಟ

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮೈಸೂರು ತಂಡಕ್ಕೆ ಮೊದಲ ವಿಕೆಟ್​ಗೆ 23 ರನ್​ಗಳ ಜೊತೆಯಾಟ ಸಿಕ್ಕಿತು. ಆರಂಭಿಕ ಜಾಸ್ಪರ್ ಎರ್ವಿನ್ರಾಜ್ ಜೋಯಲ್ 2ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ನಂತರ ಬಂದ ನಾಯಕ ಕರುಣ್ ನಾಯರ್ ಮೊದಲ ಎಸೆತದಲ್ಲೇ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಉತ್ತಮ ಆರಂಭದ ಹೊರತಾಗಿಯೂ ಸಮಿತ್ ದ್ರಾವಿಡ್ ಕೇವಲ 12 ರನ್​ಗಳಿಗೆ ವಿಕೆಟ್ ಒಪ್ಪಿಸಬೇಕಾಯಿತು. ಎಂದಿನಂತೆ ಕೊನೆಯಲ್ಲಿ ಮೈಸೂರು ತಂಡಕ್ಕೆ ನೆರವಾದ ಜಗದೀಶ್ ಸುಚಿತ್ ಹಾಗೂ ಮನೋಜ್ ಭಾಂಡಗೆ ತಂಡವನ್ನು 150 ರ ಗಡಿದಾಟಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಸುಚಿತ್ 22 ಎಸೆತಗಳಲ್ಲಿ 25 ರನ್ ಬಾರಿಸಿದರೆ, ಮನೋಜ್ 14 ಎಸೆತಗಳಲ್ಲಿ 4 ಸಿಕ್ಸರ್ ಸಹಿತ 38 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು.

ಮತ್ತೊಂದು ಗೆಲುವಿನ ಇನ್ನಿಂಗ್ಸ್ ಆಡಿದ ಸ್ಮರಣ್

154 ರನ್​ಗಳ ಗುರಿ ಬೆನ್ನಟ್ಟಿದ ಗುಲ್ಬರ್ಗಾ ತಂಡಕ್ಕೆ ಆರಂಭಿಕರಿಬ್ಬರು ಉತ್ತಮ ಆರಂಭ ಒದಿಸಿಕೊಟ್ಟರು. ಲವ್ನಿತ್ 23 ರನ್ ಬಾರಿಸಿ ಔಟಾದರೆ, ನಾಯಕ ದೇವದತ್ ಪಡಿಕ್ಕಲ್ 24 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು. ಮೊದಲ ವಿಕೆಟ್​ಗೆ ಈ ಇಬ್ಬರು 41 ರನ್​ಗಳ ಜೊತೆಯಾಟ ನೀಡಿದರು. ಎಂದಿನಂತೆ 4ನೇ ಕ್ರಮಾಂಕದಲ್ಲಿ ಬಂದ ಸ್ಮರಣ್ 36 ಎಸೆತಗಳಲ್ಲಿ 4 ಸಿಕ್ಸರ್ ಸಹಿತ 52 ರನ್ ಬಾರಿಸಿ ಕೊನೆಯಲ್ಲಿ ವಿಕೆಟ್ ಒಪ್ಪಿಸಿದರು. ಸ್ಮರಣ್​ಗೆ ಸಾಥ್ ನೀಡಿದ ರಿತೇಶ್ 22 ರನ್​ಗಳ ಕಾಣಿಕೆ ನೀಡಿದರು. ಇವರ ಜೊತೆಗೆ ಪ್ರವೀಣ್ 17 ರನ್​ ಬಾರಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:27 pm, Sat, 24 August 24

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್