AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja Trophy 2024: ಸತತ ಐದನೇ ಪಂದ್ಯದಲ್ಲಿ ಸೋತ ಶಿವಮೊಗ್ಗ; ಪಡಿಕ್ಕಲ್ ಪಡೆಗೆ ಸುಲಭ ಜಯ

Maharaja Trophy 2024: ಮಹಾರಾಜ ಟಿ20 ಟ್ರೋಫಿಯಲ್ಲಿ ಇಂದು ನಡೆದ 13ನೇ ಪಂದ್ಯದಲ್ಲಿ ನಮ್ಮ ಶಿವಮೊಗ್ಗ ಹಾಗೂ ಗುಲ್ಬರ್ಗಾ ಮಿಸ್ಟಿಕ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಉಭಯ ಗಂಡಗಳ ನಡುವೆ ನಡೆದ ಈ ಪಂದ್ಯವನ್ನು ದೇವದತ್ ಪಡಿಕ್ಕಲ್ ನಾಯಕತ್ವದ ಗುಲ್ಬರ್ಗಾ ಮಿಸ್ಟಿಕ್ಸ್ ತಂಡ ಸುಲಭ ಜಯ ಸಾಧಿಸಿದೆ.

Maharaja Trophy 2024: ಸತತ ಐದನೇ ಪಂದ್ಯದಲ್ಲಿ ಸೋತ ಶಿವಮೊಗ್ಗ; ಪಡಿಕ್ಕಲ್ ಪಡೆಗೆ ಸುಲಭ ಜಯ
ಗುಲ್ಬರ್ಗಾ ಮಿಸ್ಟಿಕ್ಸ್
ಪೃಥ್ವಿಶಂಕರ
|

Updated on:Aug 21, 2024 | 6:39 PM

Share

ಮಹಾರಾಜ ಟಿ20 ಟ್ರೋಫಿಯಲ್ಲಿ ಇಂದು ನಡೆದ 13ನೇ ಪಂದ್ಯದಲ್ಲಿ ನಮ್ಮ ಶಿವಮೊಗ್ಗ ಹಾಗೂ ಗುಲ್ಬರ್ಗಾ ಮಿಸ್ಟಿಕ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಉಭಯ ಗಂಡಗಳ ನಡುವೆ ನಡೆದ ಈ ಪಂದ್ಯವನ್ನು ದೇವದತ್ ಪಡಿಕ್ಕಲ್ ನಾಯಕತ್ವದ ಗುಲ್ಬರ್ಗಾ ಮಿಸ್ಟಿಕ್ಸ್ ತಂಡ ಸುಲಭ ಜಯ ಸಾಧಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶಿವಮೊಗ್ಗ ತಂಡ ಪೂರ್ಣ 20 ಓವರ್​ಗಳನ್ನು ಆಡಲಾಗದೆ 18.1 ಓವರ್​ಗಳಲ್ಲಿ 126 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಗುಲ್ಬರ್ಗಾ ತಂಡ ಇನ್ನು 50 ಎಸೆತಗಳು ಬಾಕಿ ಇರುವಂತೆಯೇ 9 ವಿಕೆಟ್​ಗಳಿಂದ ಜಯದ ನಗೆಬೀರಿತು. ಇನ್ನು ಈ ಸೋಲಿನೊಂದಿಗೆ ನಮ್ಮ ಶಿವಮೊಗ್ಗ ತಂಡ ಲೀಗ್​ನಲ್ಲಿ ಸತತ ಐದನೇ ಸೋಲು ದಾಖಲಿಸಿದೆ.

ಶಿವಮೊಗ್ಗ ಪೆವಿಲಿಯನ್ ಪರೇಡ್

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಶಿವಮೊಗ್ಗ ತಂಡ ಎಂದಿನಂತೆ ಆರಂಭದಿಂದಲೂ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು. ತಂಡ 18 ರನ್​ ಕಲೆಹಾಕಿದ್ದಾಗ ಮೊದಲ ವಿಕೆಟ್ ಕಳೆದುಕೊಂಡರೆ, 20 ರನ್​ಗಳಿಗೆ 2ನೇ ವಿಕೆಟ್. 30 ರನ್​ಗಳಿಗೆ ಮೂರು ಮತ್ತು ನಾಲ್ಕನೇ ವಿಕೆಟ್​ಗಳು ಪತನಗೊಂಡವು.ಈ ವೇಳೆ ತಂಡದ ಪರ ಏಕಾಂಗಿ ಹೋರಾಟ ನಡೆಸಿದ ಅಭಿನವ್ ಮನೋಹರ್ 55 ರನ್​ಗಳ ಸ್ಫೋಟಕ ಇನ್ನಿಂಗ್ ಆಡಿದರು. ಅಭಿನವ್ 36 ಎಸೆತಗಳಲ್ಲಿ 1 ಬೌಂಡರಿ ಹಾಗೂ 5 ಸಿಕ್ಸರ್ ಸಮೇತ 55 ರನ್​ಗಳ ಕಾಣಿಕೆ ನೀಡಿದರು. ಉಳಿದಂತೆ ತಂಡದಿಂದ ಯಾರೋಬ್ಬರು ಒಂದಂಕಿ ದಾಟುವ ಸಾಹಸವನ್ನೂ ಮಾಡಲಿಲ್ಲ. ಹೀಗಾಗಿ ತಂಡ ಕೇವಲ 126 ರನ್​ಗಳಿಗೆ ಆಲೌಟ್ ಆಯಿತು.

ಗುಲ್ಬರ್ಗಾ ತಂಡಕ್ಕೆ ಸುಲಭ ಜಯ

ಈ ಗುರಿ ಬೆನ್ನಟ್ಟಿದ ಗುಲ್ಬರ್ಗಾ ತಂಡಕ್ಕೆ ಆರಂಭಿಕರಿಬ್ಬರು ಉತ್ತಮ ಆರಂಭ ಒದಗಿಸಿಕೊಟ್ಟರು. ನಾಯಕ ದೇವದತ್ ಪಡಿಕ್ಕಲ್ 24 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ಸೇರಿದಂತೆ 27 ರನ್ ಬಾರಿಸಿ ಔಟಾದರು. ಮತ್ತೊಬ್ಬ ಆರಂಭಿಕ ಲುವ್ನಿತ್ ಸಿಸೋಡಿಯಾ 35 ಎಸೆತಗಳಲ್ಲಿ 5 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ ಅಜೇಯ 62 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದರು. ಸಿಸೋಡಿಯಾಗೆ ಉತ್ತಮ ಸಾಥ್ ನೀಡಿದ ಕೆವಿ ಅವಿನಾಶ್ 14 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಅಜೇಯ 31 ರನ್ ಬಾರಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:24 pm, Wed, 21 August 24

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ