AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja Trophy 2024: ಸತತ ಐದನೇ ಪಂದ್ಯದಲ್ಲಿ ಸೋತ ಶಿವಮೊಗ್ಗ; ಪಡಿಕ್ಕಲ್ ಪಡೆಗೆ ಸುಲಭ ಜಯ

Maharaja Trophy 2024: ಮಹಾರಾಜ ಟಿ20 ಟ್ರೋಫಿಯಲ್ಲಿ ಇಂದು ನಡೆದ 13ನೇ ಪಂದ್ಯದಲ್ಲಿ ನಮ್ಮ ಶಿವಮೊಗ್ಗ ಹಾಗೂ ಗುಲ್ಬರ್ಗಾ ಮಿಸ್ಟಿಕ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಉಭಯ ಗಂಡಗಳ ನಡುವೆ ನಡೆದ ಈ ಪಂದ್ಯವನ್ನು ದೇವದತ್ ಪಡಿಕ್ಕಲ್ ನಾಯಕತ್ವದ ಗುಲ್ಬರ್ಗಾ ಮಿಸ್ಟಿಕ್ಸ್ ತಂಡ ಸುಲಭ ಜಯ ಸಾಧಿಸಿದೆ.

Maharaja Trophy 2024: ಸತತ ಐದನೇ ಪಂದ್ಯದಲ್ಲಿ ಸೋತ ಶಿವಮೊಗ್ಗ; ಪಡಿಕ್ಕಲ್ ಪಡೆಗೆ ಸುಲಭ ಜಯ
ಗುಲ್ಬರ್ಗಾ ಮಿಸ್ಟಿಕ್ಸ್
ಪೃಥ್ವಿಶಂಕರ
|

Updated on:Aug 21, 2024 | 6:39 PM

Share

ಮಹಾರಾಜ ಟಿ20 ಟ್ರೋಫಿಯಲ್ಲಿ ಇಂದು ನಡೆದ 13ನೇ ಪಂದ್ಯದಲ್ಲಿ ನಮ್ಮ ಶಿವಮೊಗ್ಗ ಹಾಗೂ ಗುಲ್ಬರ್ಗಾ ಮಿಸ್ಟಿಕ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಉಭಯ ಗಂಡಗಳ ನಡುವೆ ನಡೆದ ಈ ಪಂದ್ಯವನ್ನು ದೇವದತ್ ಪಡಿಕ್ಕಲ್ ನಾಯಕತ್ವದ ಗುಲ್ಬರ್ಗಾ ಮಿಸ್ಟಿಕ್ಸ್ ತಂಡ ಸುಲಭ ಜಯ ಸಾಧಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶಿವಮೊಗ್ಗ ತಂಡ ಪೂರ್ಣ 20 ಓವರ್​ಗಳನ್ನು ಆಡಲಾಗದೆ 18.1 ಓವರ್​ಗಳಲ್ಲಿ 126 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಗುಲ್ಬರ್ಗಾ ತಂಡ ಇನ್ನು 50 ಎಸೆತಗಳು ಬಾಕಿ ಇರುವಂತೆಯೇ 9 ವಿಕೆಟ್​ಗಳಿಂದ ಜಯದ ನಗೆಬೀರಿತು. ಇನ್ನು ಈ ಸೋಲಿನೊಂದಿಗೆ ನಮ್ಮ ಶಿವಮೊಗ್ಗ ತಂಡ ಲೀಗ್​ನಲ್ಲಿ ಸತತ ಐದನೇ ಸೋಲು ದಾಖಲಿಸಿದೆ.

ಶಿವಮೊಗ್ಗ ಪೆವಿಲಿಯನ್ ಪರೇಡ್

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಶಿವಮೊಗ್ಗ ತಂಡ ಎಂದಿನಂತೆ ಆರಂಭದಿಂದಲೂ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು. ತಂಡ 18 ರನ್​ ಕಲೆಹಾಕಿದ್ದಾಗ ಮೊದಲ ವಿಕೆಟ್ ಕಳೆದುಕೊಂಡರೆ, 20 ರನ್​ಗಳಿಗೆ 2ನೇ ವಿಕೆಟ್. 30 ರನ್​ಗಳಿಗೆ ಮೂರು ಮತ್ತು ನಾಲ್ಕನೇ ವಿಕೆಟ್​ಗಳು ಪತನಗೊಂಡವು.ಈ ವೇಳೆ ತಂಡದ ಪರ ಏಕಾಂಗಿ ಹೋರಾಟ ನಡೆಸಿದ ಅಭಿನವ್ ಮನೋಹರ್ 55 ರನ್​ಗಳ ಸ್ಫೋಟಕ ಇನ್ನಿಂಗ್ ಆಡಿದರು. ಅಭಿನವ್ 36 ಎಸೆತಗಳಲ್ಲಿ 1 ಬೌಂಡರಿ ಹಾಗೂ 5 ಸಿಕ್ಸರ್ ಸಮೇತ 55 ರನ್​ಗಳ ಕಾಣಿಕೆ ನೀಡಿದರು. ಉಳಿದಂತೆ ತಂಡದಿಂದ ಯಾರೋಬ್ಬರು ಒಂದಂಕಿ ದಾಟುವ ಸಾಹಸವನ್ನೂ ಮಾಡಲಿಲ್ಲ. ಹೀಗಾಗಿ ತಂಡ ಕೇವಲ 126 ರನ್​ಗಳಿಗೆ ಆಲೌಟ್ ಆಯಿತು.

ಗುಲ್ಬರ್ಗಾ ತಂಡಕ್ಕೆ ಸುಲಭ ಜಯ

ಈ ಗುರಿ ಬೆನ್ನಟ್ಟಿದ ಗುಲ್ಬರ್ಗಾ ತಂಡಕ್ಕೆ ಆರಂಭಿಕರಿಬ್ಬರು ಉತ್ತಮ ಆರಂಭ ಒದಗಿಸಿಕೊಟ್ಟರು. ನಾಯಕ ದೇವದತ್ ಪಡಿಕ್ಕಲ್ 24 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ಸೇರಿದಂತೆ 27 ರನ್ ಬಾರಿಸಿ ಔಟಾದರು. ಮತ್ತೊಬ್ಬ ಆರಂಭಿಕ ಲುವ್ನಿತ್ ಸಿಸೋಡಿಯಾ 35 ಎಸೆತಗಳಲ್ಲಿ 5 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ ಅಜೇಯ 62 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದರು. ಸಿಸೋಡಿಯಾಗೆ ಉತ್ತಮ ಸಾಥ್ ನೀಡಿದ ಕೆವಿ ಅವಿನಾಶ್ 14 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಅಜೇಯ 31 ರನ್ ಬಾರಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:24 pm, Wed, 21 August 24

Follow Us
ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ
ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ
ಉದ್ಘಾಟನೆಗೂ ಮುನ್ನವೇ ಸೋರುತ್ತಿದೆ ಕೊಪ್ಪಳ ರೈಲು ನಿಲ್ದಾಣ!
ಉದ್ಘಾಟನೆಗೂ ಮುನ್ನವೇ ಸೋರುತ್ತಿದೆ ಕೊಪ್ಪಳ ರೈಲು ನಿಲ್ದಾಣ!
ಆಷಾಢ ಶುಕ್ರವಾರ, ದಕ್ಷಿಣಾಯನವೂ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಷಾಢ ಶುಕ್ರವಾರ, ದಕ್ಷಿಣಾಯನವೂ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಜೆಸಿಬಿ ಜೊತೆ ಆನೆಯ ಕಾಳಗ; ಇದು ನನ್ನ ಕಾಡು ಎಂದ ಗಜರಾಜ
ಜೆಸಿಬಿ ಜೊತೆ ಆನೆಯ ಕಾಳಗ; ಇದು ನನ್ನ ಕಾಡು ಎಂದ ಗಜರಾಜ
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ