AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja Trophy 2024: ಹುಬ್ಬಳ್ಳಿ ವಿರುದ್ಧ ಸೋತು ಸೆಮೀಸ್​ ರೇಸ್​ನಿಂದ ಹೊರಬಿದ್ದ ಮಂಗಳೂರು

Maharaja Trophy 2024: ಮಹಾರಾಜ ಟ್ರೋಫಿಯಲ್ಲಿ ಇಂದು ನಡೆದ 23ನೇ ಪಂದ್ಯದಲ್ಲಿ ಮಂಗಳೂರು ಡ್ರ್ಯಾಗನ್ಸ್ ತಂಡವನ್ನು ಹುಬ್ಬಳ್ಳಿ ಟೈಗರ್ಸ್​ ತಂಡ 42 ರನ್​ಗಳಿಂದ ಮಣಿಸಿದೆ. ಈ ಗೆಲುವಿನೊಂದಿಗೆ ಹುಬ್ಬಳ್ಳಿ ತಂಡ ಸೆಮಿಫೈನಲ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದರೆ, ಇತ್ತ ಮಂಗಳೂರು ಡ್ರ್ಯಾಗನ್ಸ್ ಮೊದಲ ತಂಡವಾಗಿ ಸೆಮಿಫೈನಲ್‌ ರೇಸ್​ನಿಂದ ಹೊರಬಿದ್ದಿದೆ.

Maharaja Trophy 2024: ಹುಬ್ಬಳ್ಳಿ ವಿರುದ್ಧ ಸೋತು ಸೆಮೀಸ್​ ರೇಸ್​ನಿಂದ ಹೊರಬಿದ್ದ ಮಂಗಳೂರು
ಮಂಗಳೂರು ಡ್ರ್ಯಾಗನ್ಸ್
ಪೃಥ್ವಿಶಂಕರ
|

Updated on:Aug 26, 2024 | 7:35 PM

Share

ಮಹಾರಾಜ ಟ್ರೋಫಿಯಲ್ಲಿ ಇಂದು ನಡೆದ 23ನೇ ಪಂದ್ಯದಲ್ಲಿ ಮಂಗಳೂರು ಡ್ರ್ಯಾಗನ್ಸ್ ತಂಡವನ್ನು ಹುಬ್ಬಳ್ಳಿ ಟೈಗರ್ಸ್​ ತಂಡ 42 ರನ್​ಗಳಿಂದ ಮಣಿಸಿದೆ. ಈ ಗೆಲುವಿನೊಂದಿಗೆ ಹುಬ್ಬಳ್ಳಿ ತಂಡ ಸೆಮಿಫೈನಲ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದರೆ, ಇತ್ತ ಮಂಗಳೂರು ಡ್ರ್ಯಾಗನ್ಸ್ ಮೊದಲ ತಂಡವಾಗಿ ಸೆಮಿಫೈನಲ್‌ ರೇಸ್​ನಿಂದ ಹೊರಬಿದ್ದಿದೆ. ಇದರೊಂದಿಗೆ ಸತತ ಮೂರನೇ ಆವೃತ್ತಿಯಲ್ಲೂ ಮಂಗಳೂರು ತಂಡ ಲೀಗ್​ ಸುತ್ತಿನಲ್ಲೇ ತನ್ನ ಪ್ರಯಾಣ ಅಂತ್ಯಗೊಳಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹುಬ್ಬಳ್ಳಿ ತಂಡ ಬರೋಬ್ಬರಿ 209 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಮಂಗಳೂರು ತಂಡ 19.2 ಓವರ್​ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 167 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

ಶ್ರೀಜಿತ್ ಮತ್ತು ಅನೀಶ್ವರ್ ಜೊತೆಯಾಟ

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಹುಬ್ಬಳ್ಳಿ ತಂಡಕ್ಕೆ ಕಳಪೆ ಆರಂಭ ಸಿಕ್ಕಿತು. ಆರಂಭಿಕ ಮೊಹಮ್ಮದ್ ತಾಹ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರೆ, ಮತ್ತೊಬ್ಬ ಆರಂಭಿಕ ಕಾರ್ತಿಕೇಯ 9 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರು. ಆದರೆ ಆ ಬಳಿಕ ಜೊತೆಯಾದ ಶ್ರೀಜಿತ್ ಮತ್ತು ಅನೀಶ್ವರ್ ಗೌತಮ್ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದರು. ಈ ಇಬ್ಬರು ಮೂರನೇ ವಿಕೆಟ್​ಗೆ 150 ರನ್​ಗಳ ಜೊತೆಯಾಟ ನಡೆಸಿದರು. ಈ ವೇಳೆ ಶ್ರೀಜಿತ್ 44 ಎಸೆತಗಳಲ್ಲಿ 7 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 77 ರನ್​ ಬಾರಿಸಿ ಔಟಾದರೆ, ಅನೀಶ್ವರ್ ಗೌತಮ್ 58 ಎಸೆತಗಳಲ್ಲಿ 8 ಬೌಂಡರಿ ಹಾಗೂ 5 ಸಿಕ್ಸರ್​ಗಳ ಸಹಿತ 95 ರನ್​ಗಳ ಸ್ಫೋಟಕ ಬ್ಯಾಟಿಂಗ್ ಮಾಡಿದರು. ಆದರೆ ಕೇವಲ 5 ರನ್​ಗಳಿಂದ ಶತಕ ವಂಚಿತರಾದರು. ನಾಯಕ ಮನೀಶ್ ಪಾಂಡೆ ಕೂಡ ಅಜೇಯ 24 ರನ್​ಗಳ ಕಾಣಿಕೆ ನೀಡಿದರು. ಹೀಗಾಗಿ ತಂಡ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 209 ರನ್ ಕಲೆಹಾಕಿತು.

ಮತ್ತೆ ಬ್ಯಾಟಿಂಗ್ ವೈಫಲ್ಯ

ಈ ಗುರಿ ಬೆನ್ನಟ್ಟಿದ ಮಂಗಳೂರು ತಂಡಕ್ಕೆ ಮತ್ತೊಮ್ಮೆ ಆರಂಭಿಕರು ಕೈಕೊಟ್ಟರು. ಇಡೀ ಆವೃತ್ತಿಯಲ್ಲಿ ಆರಂಭಿಕರಿಂದ ಒಂದೇ ಒಂದು ಹೇಳಿಕೊಳ್ಳುವಂತಹ ಜೊತೆಯಾಟ ಬರಲಿಲ್ಲ. ತಂಡದ ಕಳಪೆ ಪ್ರದರ್ಶನಕ್ಕೆ ಇದು ಒಂದು ಕಾರಣ. ಈ ಪಂದ್ಯದಲ್ಲಿ 16 ರನ್​ಗಳಿಗೆ ಮೊದಲ ವಿಕೆಟ್ ಪತನವಾದರೆ, 33 ರನ್​ಗಳಿಗೆ 2ನೇ ವಿಕೆಟ್ ಪತನವಾಯಿತು. ತಂಡದ ಪರ ಆರಂಭಿಕ ರೋಹನ್ 25 ರನ್ ಬಾರಿಸಿ ರನೌಟ್​ಗೆ ಬಲಿಯಾದರು.

ಮಧ್ಯಮ ಕ್ರಮಾಂಕದಲ್ಲಿ ಕೃಷ್ಣಮೂರ್ತಿ ಸಿದ್ಧಾರ್ಥ್ 30 ರನ್, ಲೋಚನ್ ಗೌಡ 35 ರನ್ ಹಾಗೂ ಶ್ರೇಯಸ್ ಗೋಪಾಲ್ 38 ರನ್​ಗಳ ಹೋರಾಟದ ಇನ್ನಿಂಗ್ಸ್ ಆಡಿದರು. ಈ ಮೂವರು ಆಡುವವರೆಗೂ ತಂಡ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಈ ಮೂರು ವಿಕೆಟ್ ಪತನದ ಬಳಿಕ ಮತ್ತೆ ತಂಡದ ಪೆವಿಲಿಯನ್ ಪರೇಡ್ ಆರಂಭವಾಯಿತು. ತಂಡದ ಬಾಲಂಗೋಚಿಗಳು ಒಂದಂಕಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರು. ಅಂತಿಮವಾಗಿ ತಂಡ 19.2 ಓವರ್​ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 167 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:04 pm, Mon, 26 August 24

Follow Us
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್: