AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6,6,6,6,6: ತಾಹ ತೂಫಾನ್​ಗೆ ಶಿವಮೊಗ್ಗ ಲಯನ್ಸ್ ತತ್ತರ

Maharaja Trophy 2024: ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡವು ಗೆಲುವಿನ ನಾಗಾಲೋಟ ಮುಂದುವರೆಸಿದೆ. ಮಂಗಳೂರು ಡ್ರಾಗನ್ಸ್ ವಿರುದ್ಧ 15 ರನ್​ಗಳ ಜಯ ಸಾಧಿಸಿದ್ದ ಹುಬ್ಬಳ್ಳಿ ಟೈಗರ್ಸ್ ಆ ಬಳಿಕ ಮೈಸೂರು ವಾರಿಯರ್ಸ್ ತಂಡವನ್ನು 6 ವಿಕೆಟ್​ಗಳಿಂದ ಮಣಿಸಿತ್ತು. ಇನ್ನು ಬೆಂಗಳೂರು ಬ್ಲಾಸ್ಟರ್ ವಿರುದ್ಧ 5 ವಿಕೆಟ್​ಗಳ ಜಯ ಸಾಧಿಸಿದರೆ, ಶಿವಮೊಗ್ಗ ಲಯನ್ಸ್ ತಂಡವನ್ನು 8 ವಿಕೆಟ್​ಗಳಿಂದ ಬಗ್ಗು ಬಡಿದಿದೆ.

6,6,6,6,6: ತಾಹ ತೂಫಾನ್​ಗೆ ಶಿವಮೊಗ್ಗ ಲಯನ್ಸ್ ತತ್ತರ
Mohammed Taha
ಝಾಹಿರ್ ಯೂಸುಫ್
|

Updated on: Aug 21, 2024 | 7:59 AM

Share

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮಹಾರಾಜ ಟ್ರೋಫಿ ಟಿ20 ಟೂರ್ನಿಯ 11ನೇ ಪಂದ್ಯದಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ಮಳೆಬಾಧಿತ ಈ ಪಂದ್ಯದಲ್ಲಿ ಶಿವಮೊಗ್ಗ ಲಯನ್ಸ್ ವಿರುದ್ಧ ಟಾಸ್ ಗೆದ್ದ ನಾಯಕ ಮನೀಶ್ ಪಾಂಡೆ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲ ಇನಿಂಗ್ಸ್ ಆಡಿದ ಶಿವಮೊಗ್ಗ ಲಯನ್ಸ್ ಉತ್ತಮ ಆರಂಭ ಪಡೆದಿರಲಿಲ್ಲ.

ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಹಾರ್ದಿಕ್ ರಾಜ್ 21 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 35 ರನ್ ಬಾರಿಸಿದರು. ಇನ್ನು ಶಿವರಾಜ್ 24 ರನ್​ಗಳ ಕೊಡುಗೆ ನೀಡಿದರೆ, ಅಭಿನಯ್ ಮನೋಹರ್ 17 ರನ್ ಸಿಡಿಸಿದರು. ಈ ಮೂಲಕ ಶಿವಮೊಗ್ಗ ಲಯನ್ಸ್ ತಂಡವು 17 ಓವರ್​ಗಳಲ್ಲಿ 137 ರನ್ ಕಲೆಹಾಕಿತು.

ತಾಹ ತೂಫಾನ್:

ದ್ವಿತೀಯ ಇನಿಂಗ್ಸ್ ವೇಳೆ ಮಳೆ ಬಂದಿದ್ದರಿಂದ ವಿಜೆಡಿ ನಿಯಮದ ಪ್ರಕಾರ, ಹುಬ್ಬಳ್ಳಿ ಟೈಗರ್ಸ್ ತಂಡಕ್ಕೆ 5 ಓವರ್​ಗಳಲ್ಲಿ 51 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಲು ಬಂದ ತಿಪ್ಪಾ ರೆಡ್ಡಿ 1 ರನ್​ಗಳಿಸಿ ಔಟಾದರು. ಮೊದಲ ವಿಕೆಟ್ ಸಿಗುತ್ತಿದ್ದಂತೆ ಶಿವಮೊಗ್ಗ ಲಯನ್ಸ್ ತಂಡ ಗೆಲುವಿನ ಭರವಸೆ ಹೆಚ್ಚಾಯಿತು.

ಆದರೆ ಮತ್ತೋರ್ವ ಆರಂಭಿಕ ಆಟಗಾರ ಮೊಹಮ್ಮದ್ ತಾಹ ತೂಫಾನ್ ಬ್ಯಾಟಿಂಗ್ ಪ್ರದರ್ಶಿಸಿದರು. ಶಿವಮೊಗ್ಗ ಬೌಲರ್​ಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದ ತಾಹ ಮೈದಾನದ ಮೂಲೆ ಮೂಲೆಗೂ ಸಿಕ್ಸ್​ಗಳನ್ನು ಸಿಡಿಸಿದರು. ಅಲ್ಲದೆ ಕೇವಲ 12 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 35 ರನ್​ ಚಚ್ಚಿದರು.

ಈ ಸ್ಪೋಟಕ ಬ್ಯಾಟಿಂಗ್ ಪರಿಣಾಮ ಹುಬ್ಬಳ್ಳಿ ಟೈಗರ್ಸ್ ತಂಡವು 3.2 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 51 ರನ್​ಗಳ ಗುರಿ ಮುಟ್ಟಿದೆ. ಈ ಮೂಲಕ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮನೀಶ್ ಪಾಂಡೆ ನಾಯಕತ್ವದ ಹುಬ್ಬಳ್ಳಿ ಟೈಗರ್ಸ್ ತಂಡವು 8 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದೆ.

ಶಿವಮೊಗ್ಗ ಲಯನ್ಸ್ ಪ್ಲೇಯಿಂಗ್ 11: ರೋಹಿತ್ ಕೆ , ನಿಹಾಲ್ ಉಳ್ಳಾಲ್ (ನಾಯಕ) , ಧ್ರುವ ಪ್ರಭಾಕರ್ , ಆದಿತ್ಯ ವಿಶ್ವ ಕರ್ಮ , ಅಭಿನವ್ ಮನೋಹರ್ , ಎಸ್ ಶಿವರಾಜ್ , ಹಾರ್ದಿಕ್ ರಾಜ್ , ಭರತ್ ಧುರಿ , ಆದಿತ್ಯ ಮಣಿ , ವಾಸುಕಿ ಕೌಶಿಕ್ , ಪ್ರದೀಪ್ ಟಿ.

ಇದನ್ನೂ ಓದಿ: IPL 2025: LSG ತಂಡಕ್ಕೆ ಝಹೀರ್ ಖಾನ್..?

ಹುಬ್ಬಳ್ಳಿ ಟೈಗರ್ಸ್ ಪ್ಲೇಯಿಂಗ್ 11: ಮೊಹಮ್ಮದ್ ತಾಹ, ತಿಪ್ಪಾ ರೆಡ್ಡಿ, ಕೃಷ್ಣನ್ ಶ್ರೀಜಿತ್ , ಮನೀಶ್ ಪಾಂಡೆ (ನಾಯಕ) , ಅನೀಶ್ವರ್ ಗೌತಮ್ , ಕಾರ್ತಿಕೇಯ ಕೆ ಪಿ , ಎಲ್ ಆರ್ ಕುಮಾರ್ , ನಿಶ್ಚಿತ್ ಪೈ , ಕೆ ಸಿ ಕಾರ್ಯಪ್ಪ , ವಿಧ್ವತ್ ಕಾವೇರಪ್ಪ , ಶ್ರೀಶ ಆಚಾರ್.

ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ಯಾರು? ತೇಜಸ್ವಿ ಸೂರ್ಯ ಹೇಳಿದ್ದಿಷ್ಟು
ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ಯಾರು? ತೇಜಸ್ವಿ ಸೂರ್ಯ ಹೇಳಿದ್ದಿಷ್ಟು
ಒಂದು ನಾಯಿಯಿಂದ ತಪ್ಪಿಸಿಕೊಳ್ಳಲು ಗೇಟ್ ಹಾರಿದವನಿಗೆ ಕಾದಿತ್ತು ಶಾಕ್!
ಒಂದು ನಾಯಿಯಿಂದ ತಪ್ಪಿಸಿಕೊಳ್ಳಲು ಗೇಟ್ ಹಾರಿದವನಿಗೆ ಕಾದಿತ್ತು ಶಾಕ್!
ಈ ಕಟ್ಟಡದ ಮುಂಭಾಗ ರೀಲ್ಸ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡ ರಜತ್
ಈ ಕಟ್ಟಡದ ಮುಂಭಾಗ ರೀಲ್ಸ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡ ರಜತ್
ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ;ಮೋದಿ ವಾಗ್ದಾಳಿ
ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ;ಮೋದಿ ವಾಗ್ದಾಳಿ
ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿಯ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ
ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿಯ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ
ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ
ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ