AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja Trophy 2024: ಮೈಸೂರಿಗೆ ಸುಲಭ ಜಯ; ಸೇಮಿಸ್​ನಿಂದ ಹೊರಬಿದ್ದ ಶಿವಮೊಗ್ಗ

Maharaja Trophy 2024: ಮಹಾರಾಜ ಟ್ರೋಫಿಯ 27ನೇ ಪಂದ್ಯದಲ್ಲಿ ಮಂಗಳೂರು ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದ ಮೈಸೂರು ವಾರಿಯರ್ಸ್​ ತಂಡ ಸೆಮಿಫೈನಲ್​ಗೆ ತನ್ನ ತಂಡವನ್ನು ಖಚಿತಪಡಿಸಿಕೊಂಡಿದೆ. ಇತ್ತ ಮೈಸೂರಿನ ಗೆಲುವಿನೊಂದಿಗೆ ಶಿವಮೊಗ್ಗ ಲಯನ್ಸ್ ತಂಡದ ಸೇಮಿಸ್ ಹಾದಿ ಅಧಿಕೃತವಾಗಿ ಮುಚ್ಚಿದೆ.

Maharaja Trophy 2024: ಮೈಸೂರಿಗೆ ಸುಲಭ ಜಯ; ಸೇಮಿಸ್​ನಿಂದ ಹೊರಬಿದ್ದ ಶಿವಮೊಗ್ಗ
ಮೈಸೂರು ವಾರಿಯರ್ಸ್​
ಪೃಥ್ವಿಶಂಕರ
|

Updated on:Aug 28, 2024 | 7:23 PM

Share

ಮಹಾರಾಜ ಟ್ರೋಫಿಯ 27ನೇ ಪಂದ್ಯದಲ್ಲಿ ಮಂಗಳೂರು ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದ ಮೈಸೂರು ವಾರಿಯರ್ಸ್​ ತಂಡ ಸೆಮಿಫೈನಲ್​ಗೆ ತನ್ನ ತಂಡವನ್ನು ಖಚಿತಪಡಿಸಿಕೊಂಡಿದೆ. ಇತ್ತ ಮೈಸೂರಿನ ಗೆಲುವಿನೊಂದಿಗೆ ಶಿವಮೊಗ್ಗ ಲಯನ್ಸ್ ತಂಡದ ಸೇಮಿಸ್ ಹಾದಿ ಅಧಿಕೃತವಾಗಿ ಮುಚ್ಚಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮಂಗಳೂರು ಡ್ರ್ಯಾಗನ್ಸ್ ತಂಡ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 178 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಮೈಸೂರು ವಾರಿಯರ್ಸ್​ ತಂಡ ಇನ್ನು 8 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಮುಟ್ಟಿತು.

178 ರನ್​ ಟಾರ್ಗೆಟ್ ನೀಡಿದ ಮಂಗಳೂರು

ಪಂದ್ಯದಲ್ಲಿ ಟಾಸ್ ಗೆದ್ದ ಮೈಸೂರು ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಮಂಗಳೂರು ತಂಡಕ್ಕೆ ಮೊದಲ ವಿಕೆಟ್​ಗೆ 22 ರನ್​ಗಳ ಜೊತೆಯಾಟ ಸಿಕ್ಕಿತು. ಆರಂಭಿಕ ರೋಹನ್ ಪಟೇಲ್ 12 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರೆ ನಾಯಕ ನಿಖಿನ್ ಜೋಶ್ ಕೂಡ 14 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು. ಆದರೆ ಆ ಬಳಿಕ ಜೊತೆಯಾದ ಆರಂಭಿಕ ತುಶಾರ್ ಹಾಗೂ ಸಿದ್ಧಾರ್ಥ್ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಈ ವೇಳೆ ತುಶಾರ್ 26 ಎಸೆತಗಳಲ್ಲಿ 43 ರನ್​ಗಳ ಇನ್ನಿಂಗ್ಸ್ ಆಡಿ ವಿಕೆಟ್ ಒಪ್ಪಿಸಿದರೆ, ಸಿದ್ಧಾರ್ಥ್ ಮಾತ್ರ 36 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಕೆಳಕ್ರಮಾಂಕದಲ್ಲಿ ಲೋಚನ್ 15 ಎಸೆತಗಳಲ್ಲಿ 25 ರನ್ ಹಾಗೂ ದರ್ಶನ್ 8 ಎಸೆತಗಳಲ್ಲಿ 18 ರನ್ ಬಾರಿಸಿ ತಂಡವನ್ನು 178 ರನ್​ಗಳಿಗೆ ಕೊಂಡೊಯ್ದರು.​

ಕರುಣ್- ಕಾರ್ತಿಕ್ ಜೊತೆಯಾಟ

ಈ ಗುರಿ ಬೆನ್ನಟ್ಟಿದ ಮೈಸೂರು ತಂಡಕ್ಕೆ ಆರಂಭಿಕರು 42 ರನ್​ಗಳ ಜೊತೆಯಾಟ ನೀಡಿದರು. ಇದರಲ್ಲಿ ಕಾರ್ತಿಕ್ ಅವರದ್ಧೇ ಭಾಗಶಃ ಪಾಲಿತ್ತು. ಆದಾಗ್ಯೂ ಮತ್ತೊಬ್ಬ ಆರಂಭಿಕ ಕಾರ್ತಿಕ್ 14 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರು. ನಂತರ ಬಂದ ನಾಯಕ ಕರುಣ್ ನಾಯರ್ ಎಂದಿನಂತೆ ತಮ್ಮ ಅಧ್ಭುತ ಫಾರ್ಮ್​ ಮುಂದುವರೆಸಿದರು. ಈ ಇಬ್ಬರು ಜೊತೆಯಾಗಿ ತಂಡವನ್ನು ಗೆಲುವಿನ ಸನಿಹಕ್ಕೆ ತಂದರು. ಈ ವೇಳೆ ಆರಂಭಿಕ ಕಾರ್ತಿಕ್ 52 ಎಸೆತಗಳಲ್ಲಿ 7 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 69 ರನ್ ಬಾರಿಸಿ ಔಟಾದರು.

ಆದಾಗ್ಯೂ ನಾಯಕನ ಇನ್ನಿಂಗ್ಸ್ ಮುಂದುವರೆಸಿದ ಕರುಣ್, ಮನೋಜ್ ಜೊತೆಗೂಡಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಈ ವೇಳೆ ಕರುಣ್ 31 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 64 ರನ್ ಬಾರಿಸಿ ಔಟಾದರೆ, ಮನೋಜ್ ಭಾಂಡಿಗೆ 6 ಎಸೆತಗಳಲ್ಲಿ 10 ರನ್, ಸುಚಿತ್ 3 ಎಸೆತಗಳಲ್ಲಿ 9 ರನ್ ಬಾರಿಸಿ ಅಜೇಯರಾಗಿ ಉಳಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:53 pm, Wed, 28 August 24

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ