AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja Trophy 2024: ಮೈಸೂರಿಗೆ ಸುಲಭ ಜಯ; ಸೇಮಿಸ್​ನಿಂದ ಹೊರಬಿದ್ದ ಶಿವಮೊಗ್ಗ

Maharaja Trophy 2024: ಮಹಾರಾಜ ಟ್ರೋಫಿಯ 27ನೇ ಪಂದ್ಯದಲ್ಲಿ ಮಂಗಳೂರು ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದ ಮೈಸೂರು ವಾರಿಯರ್ಸ್​ ತಂಡ ಸೆಮಿಫೈನಲ್​ಗೆ ತನ್ನ ತಂಡವನ್ನು ಖಚಿತಪಡಿಸಿಕೊಂಡಿದೆ. ಇತ್ತ ಮೈಸೂರಿನ ಗೆಲುವಿನೊಂದಿಗೆ ಶಿವಮೊಗ್ಗ ಲಯನ್ಸ್ ತಂಡದ ಸೇಮಿಸ್ ಹಾದಿ ಅಧಿಕೃತವಾಗಿ ಮುಚ್ಚಿದೆ.

Maharaja Trophy 2024: ಮೈಸೂರಿಗೆ ಸುಲಭ ಜಯ; ಸೇಮಿಸ್​ನಿಂದ ಹೊರಬಿದ್ದ ಶಿವಮೊಗ್ಗ
ಮೈಸೂರು ವಾರಿಯರ್ಸ್​
ಪೃಥ್ವಿಶಂಕರ
|

Updated on:Aug 28, 2024 | 7:23 PM

Share

ಮಹಾರಾಜ ಟ್ರೋಫಿಯ 27ನೇ ಪಂದ್ಯದಲ್ಲಿ ಮಂಗಳೂರು ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದ ಮೈಸೂರು ವಾರಿಯರ್ಸ್​ ತಂಡ ಸೆಮಿಫೈನಲ್​ಗೆ ತನ್ನ ತಂಡವನ್ನು ಖಚಿತಪಡಿಸಿಕೊಂಡಿದೆ. ಇತ್ತ ಮೈಸೂರಿನ ಗೆಲುವಿನೊಂದಿಗೆ ಶಿವಮೊಗ್ಗ ಲಯನ್ಸ್ ತಂಡದ ಸೇಮಿಸ್ ಹಾದಿ ಅಧಿಕೃತವಾಗಿ ಮುಚ್ಚಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮಂಗಳೂರು ಡ್ರ್ಯಾಗನ್ಸ್ ತಂಡ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 178 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಮೈಸೂರು ವಾರಿಯರ್ಸ್​ ತಂಡ ಇನ್ನು 8 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಮುಟ್ಟಿತು.

178 ರನ್​ ಟಾರ್ಗೆಟ್ ನೀಡಿದ ಮಂಗಳೂರು

ಪಂದ್ಯದಲ್ಲಿ ಟಾಸ್ ಗೆದ್ದ ಮೈಸೂರು ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಮಂಗಳೂರು ತಂಡಕ್ಕೆ ಮೊದಲ ವಿಕೆಟ್​ಗೆ 22 ರನ್​ಗಳ ಜೊತೆಯಾಟ ಸಿಕ್ಕಿತು. ಆರಂಭಿಕ ರೋಹನ್ ಪಟೇಲ್ 12 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರೆ ನಾಯಕ ನಿಖಿನ್ ಜೋಶ್ ಕೂಡ 14 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು. ಆದರೆ ಆ ಬಳಿಕ ಜೊತೆಯಾದ ಆರಂಭಿಕ ತುಶಾರ್ ಹಾಗೂ ಸಿದ್ಧಾರ್ಥ್ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಈ ವೇಳೆ ತುಶಾರ್ 26 ಎಸೆತಗಳಲ್ಲಿ 43 ರನ್​ಗಳ ಇನ್ನಿಂಗ್ಸ್ ಆಡಿ ವಿಕೆಟ್ ಒಪ್ಪಿಸಿದರೆ, ಸಿದ್ಧಾರ್ಥ್ ಮಾತ್ರ 36 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಕೆಳಕ್ರಮಾಂಕದಲ್ಲಿ ಲೋಚನ್ 15 ಎಸೆತಗಳಲ್ಲಿ 25 ರನ್ ಹಾಗೂ ದರ್ಶನ್ 8 ಎಸೆತಗಳಲ್ಲಿ 18 ರನ್ ಬಾರಿಸಿ ತಂಡವನ್ನು 178 ರನ್​ಗಳಿಗೆ ಕೊಂಡೊಯ್ದರು.​

ಕರುಣ್- ಕಾರ್ತಿಕ್ ಜೊತೆಯಾಟ

ಈ ಗುರಿ ಬೆನ್ನಟ್ಟಿದ ಮೈಸೂರು ತಂಡಕ್ಕೆ ಆರಂಭಿಕರು 42 ರನ್​ಗಳ ಜೊತೆಯಾಟ ನೀಡಿದರು. ಇದರಲ್ಲಿ ಕಾರ್ತಿಕ್ ಅವರದ್ಧೇ ಭಾಗಶಃ ಪಾಲಿತ್ತು. ಆದಾಗ್ಯೂ ಮತ್ತೊಬ್ಬ ಆರಂಭಿಕ ಕಾರ್ತಿಕ್ 14 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರು. ನಂತರ ಬಂದ ನಾಯಕ ಕರುಣ್ ನಾಯರ್ ಎಂದಿನಂತೆ ತಮ್ಮ ಅಧ್ಭುತ ಫಾರ್ಮ್​ ಮುಂದುವರೆಸಿದರು. ಈ ಇಬ್ಬರು ಜೊತೆಯಾಗಿ ತಂಡವನ್ನು ಗೆಲುವಿನ ಸನಿಹಕ್ಕೆ ತಂದರು. ಈ ವೇಳೆ ಆರಂಭಿಕ ಕಾರ್ತಿಕ್ 52 ಎಸೆತಗಳಲ್ಲಿ 7 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 69 ರನ್ ಬಾರಿಸಿ ಔಟಾದರು.

ಆದಾಗ್ಯೂ ನಾಯಕನ ಇನ್ನಿಂಗ್ಸ್ ಮುಂದುವರೆಸಿದ ಕರುಣ್, ಮನೋಜ್ ಜೊತೆಗೂಡಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಈ ವೇಳೆ ಕರುಣ್ 31 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 64 ರನ್ ಬಾರಿಸಿ ಔಟಾದರೆ, ಮನೋಜ್ ಭಾಂಡಿಗೆ 6 ಎಸೆತಗಳಲ್ಲಿ 10 ರನ್, ಸುಚಿತ್ 3 ಎಸೆತಗಳಲ್ಲಿ 9 ರನ್ ಬಾರಿಸಿ ಅಜೇಯರಾಗಿ ಉಳಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:53 pm, Wed, 28 August 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ