AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja Trophy 2024: ಮೈಸೂರು ವಾರಿಯರ್ಸ್​ಗೆ ಶಿವಮೊಗ್ಗ ಲಯನ್ಸ್ ಸವಾಲು

Mysore Warriors vs Shivamogga Lions: ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ (KSCA) ಆಯೋಜಿಸುತ್ತಿರುವ ಮಹಾರಾಜ ಟ್ರೋಫಿಯ ಇಂದಿನ ಪಂದ್ಯದಲ್ಲಿ ಕರುಣ್ ನಾಯರ್ ನಾಯಕತ್ವದ ಮೈಸೂರು ವಾರಿಯರ್ಸ್ ತಂಡವು ನಿಹಾಲ್ ಉಳ್ಳಾಲ್ ನೇತೃತ್ವದ ಶಿವಮೊಗ್ಗ ಲಯನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ಗೆದ್ದರೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಲಿದೆ.

Maharaja Trophy 2024: ಮೈಸೂರು ವಾರಿಯರ್ಸ್​ಗೆ ಶಿವಮೊಗ್ಗ ಲಯನ್ಸ್ ಸವಾಲು
Mysore Warriors vs Shivamogga Lions
ಝಾಹಿರ್ ಯೂಸುಫ್
|

Updated on: Aug 22, 2024 | 10:19 AM

Share

ಮಹಾರಾಜ ಟ್ರೋಫಿ ಟಿ20 ಟೂರ್ನಿಯ 15ನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ಮತ್ತು ಶಿವಮೊಗ್ಗ ಲಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಶಿವಮೊಗ್ಗ ಲಯನ್ಸ್ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಈವರೆಗೆ ಆಡಿದ 5 ಪಂದ್ಯಗಳಲ್ಲೂ ಶಿವಮೊಗ್ಗ ತಂಡ ಸೋಲನುಭವಿಸಿದೆ. ಹೀಗಾಗಿ ಇಂದಿನ ಪಂದ್ಯದ ಮೂಲಕ ಗೆಲುವಿನ ಖಾತೆ ತೆರೆಯುವ ಇರಾದೆಯಲ್ಲಿದೆ ನಿಹಾಲ್ ಉಳ್ಳಾಲ್ ನೇತೃತ್ವದ ಶಿವಮೊಗ್ಗ ಪಡೆ.

ಮತ್ತೊಂದೆಡೆ ಭರ್ಜರಿ ಪ್ರದರ್ಶನದೊಂದಿಗೆ ಮಿಂಚುತ್ತಿರುವ ಮೈಸೂರು ವಾರಿಯರ್ಸ್ ತಂಡವು 5 ಪಂದ್ಯಗಳಲ್ಲಿ 3 ಗೆಲುವು ದಾಖಲಿಸಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಒಂದು ವೇಳೆ ಇಂದಿನ ಮ್ಯಾಚ್​ನಲ್ಲಿ ಮೈಸೂರು ವಾರಿಯರ್ಸ್ ಗೆದ್ದರೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಲಿದೆ. ಹೀಗಾಗಿ ಕರುಣ್ ನಾಯರ್ ಪಡೆಯಿಂದ ಇಂದು ಸಹ ಉತ್ತಮ ಪ್ರದರ್ಶನವನ್ನು ನಿರೀಕ್ಷಿಸಬಹುದು.

ಎಷ್ಟು ಗಂಟೆಗೆ ಪಂದ್ಯ ಶುರು?

ಮೈಸೂರು ವಾರಿಯರ್ಸ್ ಹಾಗೂ ಶಿವಮೊಗ್ಗ ಲಯನ್ಸ್ ನಡುವಣ ಪಂದ್ಯವು ಮಧ್ಯಾಹ್ನ 3 ಗಂಟೆಯಿಂದ ಶುರುವಾಗಲಿದೆ. ಏಕೆಂದರೆ ಇಂದು ಎರಡು ಪಂದ್ಯಗಳಿದ್ದು, ಮೊದಲ ಪಂದ್ಯದಲ್ಲಿ ಮೈಸೂರು-ಶಿವಮೊಗ್ಗ ಮುಖಾಮುಖಿಯಾದರೆ, ಸಂಜೆ 7 ಗಂಟೆಯಿಂದ ಆರಂಭವಾಗಲಿರುವ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಮಂಗಳೂರು ಡ್ರಾಗನ್ಸ್ ತಂಡಗಳು ಸೆಣಸಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಮಹಾರಾಜ ಟ್ರೋಫಿ 2024ರ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ಕನ್ನಡ ಚಾನೆಲ್​ನಲ್ಲಿ ನೇರ ಪ್ರಸಾರವಾಗಲಿದೆ. ಹಾಗೆಯೇ ಫ್ಯಾನ್ ಕೋಡ್ ಆ್ಯಪ್​ನಲ್ಲೂ ಈ ಪಂದ್ಯಗಳನ್ನು ವೀಕ್ಷಿಸಬಹುದು.

ಉಭಯ ತಂಡಗಳು:

ಶಿವಮೊಗ್ಗ ಲಯನ್ಸ್ ತಂಡ: ಬಿ. ಮೋಹಿತ್, ನಿಹಾಲ್ ಉಳ್ಳಾಲ್ (ನಾಯಕ), ರೋಹಿತ್ ಕೆ, ಹಾರ್ದಿಕ್ ರಾಜ್, ಧ್ರುವ ಪ್ರಭಾಕರ್, ಅಭಿನವ್ ಮನೋಹರ್, ಎಸ್ ಶಿವರಾಜ್, ಅವಿನಾಶ್ ಡಿ, ಆದಿತ್ಯ ಮಣಿ, ಪ್ರದೀಪ್ ಟಿ, ವಾಸುಕಿ ಕೌಶಿಕ್, ಎಚ್ ಎಸ್ ಶರತ್, ಭರತ್ ಧುರಿ, ಆನಂದ್ ದೊಡ್ಡಮನಿ , ರಾಜವೀರ್ ವಾಧ್ವಾ, ರೋಹನ್ ನವೀನ್, ಡಿ ಅಶೋಕ್, ಧೀರಜ್ ಮೋಹನ್, ಆದಿತ್ಯ ವಿಶ್ವ ಕರ್ಮ.

ಇದನ್ನೂ ಓದಿ: IPL 2025: ಧೋನಿ RCB ತಂಡದ ನಾಯಕರಾಗಿದ್ದರೆ 3 ಟ್ರೋಫಿ ಗೆದ್ದಿರುತ್ತಿತ್ತು..!

ಮೈಸೂರು ವಾರಿಯರ್ಸ್ ತಂಡ: ಕೋದಂಡ ಅಜಿತ್ ಕಾರ್ತಿಕ್, ಎಸ್‌ಯು ಕಾರ್ತಿಕ್, ಕರುಣ್ ನಾಯರ್ (ನಾಯಕ), ಸಮಿತ್ ದ್ರಾವಿಡ್, ಸುಮಿತ್ ಕುಮಾರ್, ಮನೋಜ್ ಭಾಂಡಗೆ, ಹರ್ಷಿಲ್ ಧರ್ಮಾನಿ, ಜಗದೀಶ ಸುಚಿತ್, ಕೃಷ್ಣಪ್ಪ ಗೌತಮ್, ವಿದ್ಯಾಧರ್ ಪಾಟೀಲ್, ಧನುಷ್ ಗೌಡ, ದೀಪಕ್ ದೇವಾಡಿಗ, ಸ್ಮಯನ್ ಶ್ರೀವಾಸ್ತವ, ಇಜೆ ಜಾಸ್ಪರ್, ಗೌತಮ್ ಮಿಶ್ರಾ, ಕಿಶನ್ ಬೇಡರೆ, ಮುರಳೀಧರ ವೆಂಕಟೇಶ್, ಪ್ರಸಿದ್ಧ್ ಕೃಷ್ಣ, ಸರ್ಫರಾಝ್ ಅಶ್ರಫ್.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ