Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja Trophy 2023: ಟೈಗರ್ಸ್​ vs ವಾರಿಯರ್ಸ್​ ನಡುವೆ ಫೈನಲ್ ಫೈಟ್​

Hubli Tigers vs Mysore Warriors: ಆಗಸ್ಟ್ 29 ರಂದು (ಮಂಗಳವಾರ) ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಫೈನಲ್ ಪಂದ್ಯ ನಡೆಯಲಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಕರುಣ್ ನಾಯರ್ ನಾಯಕತ್ವದ ಮೈಸೂರು ವಾರಿಯರ್ಸ್ ತಂಡವು ಮನೀಶ್ ಪಾಂಡೆ ನೇತೃತ್ವದ ಹುಬ್ಬಳ್ಳಿ ಟೈಗರ್ಸ್ ತಂಡವನ್ನು ಎದುರಿಸಲಿದೆ.

Maharaja Trophy 2023: ಟೈಗರ್ಸ್​ vs ವಾರಿಯರ್ಸ್​ ನಡುವೆ ಫೈನಲ್ ಫೈಟ್​
Hubli Tigers vs Mysore Warriors
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 28, 2023 | 9:38 PM

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮಹಾರಾಜ ಟ್ರೋಫಿ ಟಿ20 ಟೂರ್ನಿಯು ಅಂತಿಮ ಹಂತಕ್ಕೆ ಬಂದು ನಿಂತಿದೆ. ಸೋಮವಾರ ನಡೆದ ಮೊದಲ ಸೆಮಿಫೈನಲ್​ನಲ್ಲಿ ಶಿವಮೊಗ್ಗ ಲಯನ್ಸ್ ವಿರುದ್ಧ ಜಯ ಸಾಧಿಸಿ ಹುಬ್ಬಳ್ಳಿ ಟೈಗರ್ಸ್ ಫೈನಲ್​ ಪ್ರವೇಶಿಸಿದೆ. ಇನ್ನು ಎರಡನೇ ಸೆಮಿಫೈನಲ್​ನಲ್ಲಿ ಮೈಸೂರು ವಾರಿಯರ್ಸ್ ತಂಡವು ಗುಲ್ಬರ್ಗ ಮಿಸ್ಟಿಕ್ಸ್ ತಂಡಕ್ಕೆ ಸೋಲುಣಿಸಿ ನಿರ್ಣಾಯಕ ಹಂತಕ್ಕೇರಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸೆಮಿಫೈನಲ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೇಯಸ್ ಗೋಪಾಲ್ ನಾಯಕತ್ವದ ಶಿವಮೊಗ್ಗ ಲಯನ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 149 ರನ್ ಕಲೆಹಾಕಿತು.

150 ರನ್​ಗಳ ಸುಲಭ ಗುರಿ ಬೆನ್ನತ್ತಿದ ಹುಬ್ಬಳ್ಳಿ ಟೈಗರ್ಸ್ ಪರ ಮೊಹಮ್ಮದ್ ತಾಹ (69) ಹಾಗೂ ಕೃಷ್ಣನ್ ಶ್ರೀಜಿತ್ (61) ಅರ್ಧಶತಕ ಬಾರಿಸಿ ಮಿಂಚಿದರು. ಈ ಮೂಲಕ 14 ಓವರ್​ಗಳಲ್ಲಿ ಗುರಿ ಮುಟ್ಟಿದ ಹುಬ್ಬಳ್ಳಿ ಟೈಗರ್ಸ್ 8 ವಿಕೆಟ್​ಗಳ ಜಯದೊಂದಿಗೆ ಫೈನಲ್​ಗೆ ಪ್ರವೇಶಿಸಿದೆ.

ಇನ್ನು ದ್ವಿತೀಯ ಸೆಮಿಫೈನಲ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಮೈಸೂರು ವಾರಿಯರ್ಸ್ ಪರ ನಾಯಕ ಕರುಣ್ ನಾಯರ್ ಅಕ್ಷರಶಃ ಅಬ್ಬರಿಸಿದರು. ಕೇವಲ 42 ಎಸೆತಗಳಲ್ಲಿ ಅಜೇಯ 107 ರನ್​ ಬಾರಿಸಿದ ನಾಯರ್ ತಂಡದ ಮೊತ್ತವನ್ನು 2 ವಿಕೆಟ್ ನಷ್ಟಕ್ಕೆ 248 ಕ್ಕೆ ತಂದು ನಿಲ್ಲಿಸಿದರು.

249 ರನ್​ಗಳ ಕಠಿಣ ಗುರಿ ಪಡೆದ ಗುಲ್ಬರ್ಗ ಮಿಸ್ಟಿಕ್ಸ್​ ತಂಡವು ಉತ್ತಮ ಪ್ರದರ್ಶನ ನೀಡಿದರೂ ಗೆಲುವು ದಕ್ಕಿಸಿಕೊಳ್ಳಲಾಗಲಿಲ್ಲ. ಅಂತಿಮವಾಗಿ 212 ರನ್​ಗಳಿಸಿ 36 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ ಮೈಸೂರು ವಾರಿಯರ್ಸ್ ತಂಡವು ಫೈನಲ್​ ಪ್ರವೇಶಿಸಿದೆ.

ಫೈನಲ್ ಫೈಟ್ ಯಾವಾಗ?

ಆಗಸ್ಟ್ 29 ರಂದು (ಮಂಗಳವಾರ) ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಫೈನಲ್ ಪಂದ್ಯ ನಡೆಯಲಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಕರುಣ್ ನಾಯರ್ ನಾಯಕತ್ವದ ಮೈಸೂರು ವಾರಿಯರ್ಸ್ ತಂಡವು ಮನೀಶ್ ಪಾಂಡೆ ನೇತೃತ್ವದ ಹುಬ್ಬಳ್ಳಿ ಟೈಗರ್ಸ್ ತಂಡವನ್ನು ಎದುರಿಸಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಫೈನಲ್ ಪಂದ್ಯವನ್ನು ಸ್ಟಾರ್​ ಸ್ಪೋರ್ಟ್​ 2 ಹಾಗೂ ಸ್ಟಾರ್ ಸ್ಪೋರ್ಟ್ಸ್ ಕನ್ನಡ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಫ್ಯಾನ್ ಕೋಡ್ ಆ್ಯಪ್​ನಲ್ಲೂ ಲೈವ್ ಸ್ಟ್ರೀಮಿಂಗ್ ಇರಲಿದೆ.

ಹುಬ್ಬಳ್ಳಿ ಟೈಗರ್ಸ್: ಮನೀಶ್ ಪಾಂಡೆ (ನಾಯಕ),ಪ್ರವೀಣ್ ದುಬೆ, ಕೆಸಿ ಕಾರ್ಯಪ್ಪ, ಲವ್ನಿತ್ ಸಿಸೋಡಿಯಾ, ಶ್ರೀಜಿತ್ ಕೆಎಲ್, ಮೊಹಮ್ಮದ್ ತಾಹ, ವಿದ್ವತ್ ಕಾವೇರಪ್ಪ, ದರ್ಶನ್ ಎಂಬಿ, ಶಿವಂ ಎಂಬಿ, ನಾಗ ಭರತ್, ಸಂತೋಖ್ ಸಿಂಗ್, ಮನ್ವಂತ್ ಕುಮಾರ್ ಎಲ್, ಮಿತ್ರಕಾಂತ್ ಯಾದವ್, ಮಲ್ಲಿಕ್ ಸಾಬ್, ರಾಜಶೇಖರ್ ಹರಿಕಾಂತ್, ಕ್ಲೆಮೆಂಟ್ ರಾಜು.

ಇದನ್ನೂ ಓದಿ: IPL 2024: ಮತ್ತೆ ಬದಲಾಗಲಿದೆಯಾ RCB ತಂಡದ ನಾಯಕತ್ವ..?

ಮೈಸೂರು ವಾರಿಯರ್ಸ್: ಕರುಣ್ ನಾಯರ್ (ನಾಯಕ), ಜಗದೀಶ ಸುಚಿತ್, ಪ್ರಸಿದ್ಧ್ ಕೃಷ್ಣ, ಶೋಯೆಬ್ ಮ್ಯಾನೇಜರ್, ರವಿಕುಮಾರ್ ಸಮರ್ಥ್, ಕಾರ್ತಿಕ್ ಸಿಎ, ಮನೋಜ್ ಭಾಂಡಗೆ, ವೆಂಕಟೇಶ್ ಎಂ, ತುಷಾರ್ ಸಿಂಗ್, ಕುಶಾಲ್ ವಾಧ್ವಾನಿ, ಶಶಿಕುಮಾರ್ ಕೆ, ರಕ್ಷಿತ್ ಎಸ್, ಗೌತಮ್ ಮಿಶ್ರಾ, ಶ್ರೀಶ ಆಚಾರ್, ಮೋನಿಶ್ ರೆಡ್ಡಿ, ಭರತ್ ಮಣಿ, ರಾಹುಲ್ ಸಿಂಗ್ ರಾವತ್, ಭರತ್ ಧುರಿ.

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ