Maharaja Trophy 2022: ಏಷ್ಯಾಕಪ್​ ತಂಡದಲ್ಲಿಲ್ಲ ಸ್ಥಾನ: ಟಿ20 ಕ್ರಿಕೆಟ್​ನಲ್ಲಿ ಕನ್ನಡಿಗನ ಸಿಡಿಲಬ್ಬರ

Maharaja Trophy KSCA T20 2022: ಬೆಂಗಳೂರು ಬ್ಲಾಸ್ಟರ್ಸ್​ ಪರ ರೋನಿತ್ ಮೋರೆ 4 ವಿಕೆಟ್ ಕಬಳಿಸಿದರೆ, ಎಲ್ ಕುಮಾರ್ ಹಾಗೂ ರಿಷಿ ಬೋಪಣ್ಣ ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.

Maharaja Trophy 2022: ಏಷ್ಯಾಕಪ್​ ತಂಡದಲ್ಲಿಲ್ಲ ಸ್ಥಾನ: ಟಿ20 ಕ್ರಿಕೆಟ್​ನಲ್ಲಿ ಕನ್ನಡಿಗನ ಸಿಡಿಲಬ್ಬರ
Mayank Agarwal
Updated By: ಝಾಹಿರ್ ಯೂಸುಫ್

Updated on: Aug 09, 2022 | 2:30 PM

ಮೈಸೂರಿನ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಮೈದಾನದಲ್ಲಿ ನಡೆಯುತ್ತಿರುವ ಮಹಾರಾಜ ಟ್ರೋಫಿಯಲ್ಲಿ (Maharaja Trophy 2022) ಬೆಂಗಳೂರು ಬ್ಲಾಸ್ಟರ್ಸ್ ತಂಡದ ನಾಯಕ ಮಯಾಂಕ್ ಅಗರ್ವಾಲ್ (Mayank Agarwal )ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಲ್ಬರ್ಗಾ ಮಿಸ್ಟಿಕ್ಸ್ ತಂಡದ ನಾಯಕ ಮನೀಷ್ ಪಾಂಡೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು. ಅದರಂತೆ ಬೆಂಗಳೂರು ಬ್ಲಾಸ್ಟರ್ಸ್ ಪರ ಇನಿಂಗ್ಸ್ ಆರಂಭಿಸಿದ ಮಯಾಂಕ್ ಹಾಗೂ ಆರ್​ ಚೇತನ್ ಉತ್ತಮ ಆರಂಭ ಒದಗಿಸಿದ್ದರು.
ಮೊದಲ ವಿಕೆಟ್​ಗೆ 61 ರನ್​ಗಳ ಜೊತೆಯಾಟವಾಡುವ ಮೂಲಕ ಈ ಜೋಡಿಯು ಬೆಂಗಳೂರು ಬ್ಲಾಸ್ಟರ್ಸ್ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದ್ದರು.

ಈ ಹಂತದಲ್ಲಿ 25 ರನ್​ಗಳಿಸಿ ಚೇತನ್ ಔಟಾದರು. ಆದರೆ ಮತ್ತೊಂದೆಡೆ ನಾಯಕನ ಆಟ ಪ್ರದರ್ಶಿಸಿದ ಮಯಾಂಕ್ ಅಗರ್ವಾಲ್ ಸ್ಪೋಟಕ ಇನಿಂಗ್ಸ್ ಆಡಿದರು. ಪರಿಣಾಮ ಕೇವಲ 25 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್​ನೊಂದಿಗೆ 52 ರನ್​ ಚಚ್ಚಿದರು. ಅರ್ಧಶತಕದ ಬೆನ್ನಲ್ಲೇ ರನೌಟ್ ಆಗುವ ಮೂಲಕ ಮಯಾಂಕ್ ಕೂಡ ನಿರ್ಗಮಿಸಿದರು. ಮತ್ತೊಂದೆಡೆ ಅನೀಶ್ (44) ಹಾಗೂ ಕ್ರಾಂತಿ ಕುಮಾರ್ (22) ಅವರ ಉತ್ತಮ ಕಾಣಿಕೆಯೊಂದಿಗೆ ಬೆಂಗಳೂರು ಬ್ಲಾಸ್ಟರ್ಸ್​ ತಂಡವು ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 189 ರನ್​ ಕಲೆಹಾಕಿತು.

ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಗುಲ್ಬರ್ಗಾ ಮಿಸ್ಟಿಕ್ಸ್ ಪರ ದೇವದತ್ ಪಡಿಕ್ಕಲ್ (18), ಶ್ರೀಜಿತ್ (25) ಹಾಗೂ ಮನೋಜ್ ಭಂಡಗೆ (35) ರನ್​ಗಳಿಸಿದ್ದು ಬಿಟ್ಟರೆ ಉಳಿದವರಿಂದ ಉತ್ತಮ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 19.1 ಓವರ್​ಗಳಲ್ಲಿ ಗುಲ್ಬಾರ್ಗ ತಂಡವು 135 ರನ್​ಗಳಿಸಿ ಸರ್ವಪತನ ಕಂಡಿತು. ಇದರೊಂದಿಗೆ ಮಯಾಂಕ್ ಅಗರ್ವಾಲ್ ಪಡೆಯು 54 ರನ್​ಗಳ ಭರ್ಜರಿ ಜಯ ಸಾಧಿಸಿತು.

ಇದನ್ನೂ ಓದಿ
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಬೆಂಗಳೂರು ಬ್ಲಾಸ್ಟರ್ಸ್​ ಪರ ರೋನಿತ್ ಮೋರೆ 4 ವಿಕೆಟ್ ಕಬಳಿಸಿದರೆ, ಎಲ್ ಕುಮಾರ್ ಹಾಗೂ ರಿಷಿ ಬೋಪಣ್ಣ ತಲಾ 2 ವಿಕೆಟ್ ಕಬಳಿಸಿ ಮಿಂಚಿದರು. ಇನ್ನು ಸ್ಪೋಟಕ ಅರ್ಧಶತಕ ಸಿಡಿಸಿ ಮಿಂಚಿದ್ದ ಮಯಾಂಕ್ ಅಗರ್ವಾಲ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ವಿಶೇಷ ಎಂದರೆ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದರೂ ಮಯಾಂಕ್ ಅಗರ್ವಾಲ್ ಹಲವು ಬಾರಿ ಟೀಮ್ ಇಂಡಿಯಾ ಟಿ20 ತಂಡದಿಂದ ಅವಕಾಶ ವಂಚಿತರಾಗಿದ್ದಾರೆ. ಇದೀಗ ಏಷ್ಯಾಕಪ್ ತಂಡದ ಆಯ್ಕೆಯ ಬೆನ್ನಲ್ಲೇ ದೇಶೀಯ ಅಂಗಳದಲ್ಲಿ ಅಬ್ಬರಿಸುವ ಮೂಲಕ ಮಯಾಂಕ್ ಅಗರ್ವಾಲ್ ಎಲ್ಲರ ಗಮನ ಸೆಳೆದಿರುವುದು ವಿಶೇಷ.