AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಹ ತೂಫಾನ್​ಗೆ ತತ್ತರಿಸಿದ ಬೆಂಗಳೂರು ಬ್ಲಾಸ್ಟರ್ಸ್

Hubli Tigers vs Bengaluru Blasters: 38 ಎಸೆತಗಳನ್ನು ಎದುರಿಸಿದ ಮಯಾಂಕ್ ಅಗರ್ವಾಲ್ 6 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 68 ರನ್ ಸಿಡಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿಶ್ಚಲ್ 42 ಎಸೆತಗಳಲ್ಲಿ 54 ರನ್ ಬಾರಿಸಿದರು.

ತಾಹ ತೂಫಾನ್​ಗೆ ತತ್ತರಿಸಿದ ಬೆಂಗಳೂರು ಬ್ಲಾಸ್ಟರ್ಸ್
Mohammed Taha
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 22, 2023 | 7:15 PM

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮಹಾರಾಜ ಟ್ರೋಫಿ ಟಿ20 ಟೂರ್ನಿಯ 19ನೇ ಪಂದ್ಯದಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಬೆಂಗಳೂರು ಬ್ಲಾಸ್ಟರ್ಸ್ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಬೆಂಗಳೂರು ತಂಡಕ್ಕೆ ಮಯಾಂಕ್ ಉತ್ತಮ ಆರಂಭ ಒದಗಿಸಿದ್ದರು.

38 ಎಸೆತಗಳನ್ನು ಎದುರಿಸಿದ ಮಯಾಂಕ್ ಅಗರ್ವಾಲ್ 6 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 68 ರನ್ ಸಿಡಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿಶ್ಚಲ್ 42 ಎಸೆತಗಳಲ್ಲಿ 54 ರನ್ ಬಾರಿಸಿದರು.

ಹಾಗೆಯೇ ಶುಭಾಂಗ್ ಹೆಗ್ಡೆ 18 ಎಸೆತಗಳಲ್ಲಿ 29 ರನ್ ಬಾರಿಸುವ ಮೂಲಕ ಬೆಂಗಳೂರು ಬ್ಲಾಸ್ಟರ್ಸ್​ ತಂಡದ ಮೊತ್ತವನ್ನು 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 188 ಕ್ಕೆ ತಂದು ನಿಲ್ಲಿಸಿದರು.

189 ರನ್​ಗಳ ಕಠಿಣ ಗುರಿ ಪಡೆದ ಹುಬ್ಬಳ್ಳಿ ಟೈಗರ್ಸ್ ತಂಡದ ಪರ ಲವ್ನೀತ್ ಸಿಸೋಡಿಯಾ 20 ರನ್​ ಬಾರಿಸಿ ಔಟಾದರೆ, ಮತ್ತೊಂದೆಡೆ ಮೊಹಮ್ಮದ್ ತಾಹ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ತಾಹ 35 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 66 ರನ್​ ಚಚ್ಚಿದರು. ಆ ಬಳಿಕ ಬಂದ ಶ್ರೀಜಿತ್ 45 ರನ್​ಗಳ ಕಾಣಿಕೆ ನೀಡಿದರು.

ಇನ್ನು ನಾಯಕ ಮನೀಶ್ ಪಾಂಡೆ 22 ಎಸೆತಗಳಲ್ಲಿ 3 ಫೋರ್​ಗಳೊಂದಿಗೆ ಅಜೇಯ 35 ರನ್ ಬಾರಿಸುವ ಮೂಲಕ 18.3 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಹುಬ್ಬಳ್ಳಿ ಟೈಗರ್ಸ್ ತಂಡವು 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಬೆಂಗಳೂರು ಬ್ಲಾಸ್ಟರ್ಸ್​ ಪ್ಲೇಯಿಂಗ್ 11: ಮಯಾಂಕ್ ಅಗರ್ವಾಲ್ (ನಾಯಕ) , ಭುವನ್ ರಾಜು , ಡಿ. ನಿಶ್ಚಲ್ , ಲೋಚನ್ ಅಪ್ಪಣ್ಣ , ಸೂರಜ್ ಅಹುಜಾ (ವಿಕೆಟ್ ಕೀಪರ್ ) , ಶುಭಾಂಗ್ ಹೆಗ್ಡೆ , ರಿಷಿ ಬೋಪಣ್ಣ , ಸರ್ಫರಾಜ್ ಅಶ್ರಫ್ , ಗೌರವ್ , ಎಲ್​ಆರ್​ ಕುಮಾರ್ , ಅಮನ್ ಖಾನ್.

ಇದನ್ನೂ ಓದಿ: ಸಿಕ್ಸ್​ ಸಿಡಿಸಿ ವಿಶ್ವ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

ಹುಬ್ಬಳ್ಳಿ ಟೈಗರ್ಸ್ ಪ್ಲೇಯಿಂಗ್ 11: ಮೊಹಮ್ಮದ್ ತಾಹ , ಕೃಷ್ಣನ್ ಶ್ರೀಜಿತ್ , ಲವ್ನೀತ್ ಸಿಸೋಡಿಯಾ (ವಿಕೆಟ್ ಕೀಪರ್ ) , ಮನೀಶ್ ಪಾಂಡೆ (ನಾಯಕ) , ಮನ್ವಂತ್ ಕುಮಾರ್ ಎಲ್ , ಪ್ರವೀಣ್ ದುಬೆ , ಎಂಬಿ ದರ್ಶನ್ , ಲವಿಶ್ ಕೌಶಲ್ , ಕೆಸಿ ಕಾರ್ಯಪ್ಪ, ವಿಧ್ವತ್ ಕಾವೇರಪ್ಪ , ನಾಥನ್ ಡಿಮೆಲ್ಲೊ.

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ