AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಹ ತೂಫಾನ್​ಗೆ ತತ್ತರಿಸಿದ ಬೆಂಗಳೂರು ಬ್ಲಾಸ್ಟರ್ಸ್

Hubli Tigers vs Bengaluru Blasters: 38 ಎಸೆತಗಳನ್ನು ಎದುರಿಸಿದ ಮಯಾಂಕ್ ಅಗರ್ವಾಲ್ 6 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 68 ರನ್ ಸಿಡಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿಶ್ಚಲ್ 42 ಎಸೆತಗಳಲ್ಲಿ 54 ರನ್ ಬಾರಿಸಿದರು.

ತಾಹ ತೂಫಾನ್​ಗೆ ತತ್ತರಿಸಿದ ಬೆಂಗಳೂರು ಬ್ಲಾಸ್ಟರ್ಸ್
Mohammed Taha
TV9 Web
| Edited By: |

Updated on: Aug 22, 2023 | 7:15 PM

Share

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮಹಾರಾಜ ಟ್ರೋಫಿ ಟಿ20 ಟೂರ್ನಿಯ 19ನೇ ಪಂದ್ಯದಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಬೆಂಗಳೂರು ಬ್ಲಾಸ್ಟರ್ಸ್ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಬೆಂಗಳೂರು ತಂಡಕ್ಕೆ ಮಯಾಂಕ್ ಉತ್ತಮ ಆರಂಭ ಒದಗಿಸಿದ್ದರು.

38 ಎಸೆತಗಳನ್ನು ಎದುರಿಸಿದ ಮಯಾಂಕ್ ಅಗರ್ವಾಲ್ 6 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 68 ರನ್ ಸಿಡಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿಶ್ಚಲ್ 42 ಎಸೆತಗಳಲ್ಲಿ 54 ರನ್ ಬಾರಿಸಿದರು.

ಹಾಗೆಯೇ ಶುಭಾಂಗ್ ಹೆಗ್ಡೆ 18 ಎಸೆತಗಳಲ್ಲಿ 29 ರನ್ ಬಾರಿಸುವ ಮೂಲಕ ಬೆಂಗಳೂರು ಬ್ಲಾಸ್ಟರ್ಸ್​ ತಂಡದ ಮೊತ್ತವನ್ನು 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 188 ಕ್ಕೆ ತಂದು ನಿಲ್ಲಿಸಿದರು.

189 ರನ್​ಗಳ ಕಠಿಣ ಗುರಿ ಪಡೆದ ಹುಬ್ಬಳ್ಳಿ ಟೈಗರ್ಸ್ ತಂಡದ ಪರ ಲವ್ನೀತ್ ಸಿಸೋಡಿಯಾ 20 ರನ್​ ಬಾರಿಸಿ ಔಟಾದರೆ, ಮತ್ತೊಂದೆಡೆ ಮೊಹಮ್ಮದ್ ತಾಹ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ತಾಹ 35 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 66 ರನ್​ ಚಚ್ಚಿದರು. ಆ ಬಳಿಕ ಬಂದ ಶ್ರೀಜಿತ್ 45 ರನ್​ಗಳ ಕಾಣಿಕೆ ನೀಡಿದರು.

ಇನ್ನು ನಾಯಕ ಮನೀಶ್ ಪಾಂಡೆ 22 ಎಸೆತಗಳಲ್ಲಿ 3 ಫೋರ್​ಗಳೊಂದಿಗೆ ಅಜೇಯ 35 ರನ್ ಬಾರಿಸುವ ಮೂಲಕ 18.3 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಹುಬ್ಬಳ್ಳಿ ಟೈಗರ್ಸ್ ತಂಡವು 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಬೆಂಗಳೂರು ಬ್ಲಾಸ್ಟರ್ಸ್​ ಪ್ಲೇಯಿಂಗ್ 11: ಮಯಾಂಕ್ ಅಗರ್ವಾಲ್ (ನಾಯಕ) , ಭುವನ್ ರಾಜು , ಡಿ. ನಿಶ್ಚಲ್ , ಲೋಚನ್ ಅಪ್ಪಣ್ಣ , ಸೂರಜ್ ಅಹುಜಾ (ವಿಕೆಟ್ ಕೀಪರ್ ) , ಶುಭಾಂಗ್ ಹೆಗ್ಡೆ , ರಿಷಿ ಬೋಪಣ್ಣ , ಸರ್ಫರಾಜ್ ಅಶ್ರಫ್ , ಗೌರವ್ , ಎಲ್​ಆರ್​ ಕುಮಾರ್ , ಅಮನ್ ಖಾನ್.

ಇದನ್ನೂ ಓದಿ: ಸಿಕ್ಸ್​ ಸಿಡಿಸಿ ವಿಶ್ವ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

ಹುಬ್ಬಳ್ಳಿ ಟೈಗರ್ಸ್ ಪ್ಲೇಯಿಂಗ್ 11: ಮೊಹಮ್ಮದ್ ತಾಹ , ಕೃಷ್ಣನ್ ಶ್ರೀಜಿತ್ , ಲವ್ನೀತ್ ಸಿಸೋಡಿಯಾ (ವಿಕೆಟ್ ಕೀಪರ್ ) , ಮನೀಶ್ ಪಾಂಡೆ (ನಾಯಕ) , ಮನ್ವಂತ್ ಕುಮಾರ್ ಎಲ್ , ಪ್ರವೀಣ್ ದುಬೆ , ಎಂಬಿ ದರ್ಶನ್ , ಲವಿಶ್ ಕೌಶಲ್ , ಕೆಸಿ ಕಾರ್ಯಪ್ಪ, ವಿಧ್ವತ್ ಕಾವೇರಪ್ಪ , ನಾಥನ್ ಡಿಮೆಲ್ಲೊ.

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ