AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja Trophy 2023: ಫೈನಲ್​ಗೆ ಲಗ್ಗೆಯಿಟ್ಟ ಹುಬ್ಬಳ್ಳಿ ಟೈಗರ್ಸ್​

Maharaja Trophy T20 2023: 150 ರನ್​ಗಳ ಸುಲಭ ಗುರಿ ಬೆನ್ನತ್ತಿದ ಹುಬ್ಬಳ್ಳಿ ಟೈಗರ್ಸ್ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಲವ್ನೀತ್ ಸಿಸೋಡಿಯಾ 13 ರನ್​ಗಳಿಸಿ 2ನೇ ಓವರ್​ನಲ್ಲೇ ನಿರ್ಗಮಿಸಿದರು. ಆದರೆ ಮತ್ತೊಂದೆಡೆ ಸ್ಪೋಟಕ ದಾಂಡಿಗ ಮೊಹಮ್ಮದ್ ತಾಹ ಅಬ್ಬರಿಸಲಾರಂಭಿಸಿದರು.

Maharaja Trophy 2023: ಫೈನಲ್​ಗೆ ಲಗ್ಗೆಯಿಟ್ಟ ಹುಬ್ಬಳ್ಳಿ ಟೈಗರ್ಸ್​
Hubli Tigers
TV9 Web
| Edited By: |

Updated on: Aug 28, 2023 | 4:55 PM

Share

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಸೆಮಿಫೈನಲ್​ನಲ್ಲಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಹುಬ್ಬಳ್ಳಿ ಟೈಗರ್ಸ್ ತಂಡವು ಫೈನಲ್​ಗೆ ಪ್ರವೇಶಿಸಿದೆ. ಶಿವಮೊಗ್ಗ ಲಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಮನೀಶ್ ಪಾಂಡೆ ಬೌಲಿಂಗ್ ಮಾಡುವ ನಿರ್ಧಾರ ತೆಗೆದುಕೊಂಡರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಶಿವಮೊಗ್ಗ ಲಯನ್ಸ್ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹನ್ ಕದಮ್ ಹಾಗೂ ನಿಹಾಲ್ ಉಳ್ಳಾಲ್ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಪವರ್​ಪ್ಲೇನಲ್ಲಿ ಕೇವಲ 37 ರನ್​ಗಳಿಸಲಷ್ಟೇ ಶಕ್ತರಾದರು.

ಈ ಹಂತದಲ್ಲಿ ನಿಹಾಲ್ (7) ಔಟಾದರೆ, ಆ ಬಳಿಕ ಬಂದ ವಿನಯ್ ಸಾಗರ್ (12) ಹಾಗೂ ಅಭಿನವ್ ಮನೋಹರ್ (2) ಕೂಡ ಬೇಗನೆ ನಿರ್ಗಮಿಸಿದರು. ಇನ್ನು ಶರತ್ 18 ರನ್​ಗಳಿಸಿದರೆ, ನಾಯಕ ಶ್ರೇಯಸ್ ಗೋಪಾಲ್ 16 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಅಂತಿಮ ಹಂತದಲ್ಲಿ ಪ್ರಣವ್ ಭಾಟಿಯಾ 7 ಎಸೆತಗಳಲ್ಲಿ 16 ರನ್ ಬಾರಿಸುವ ಮೂಲಕ ಶಿವಮೊಗ್ಗ ಲಯನ್ಸ್ ತಂಡದ ಮೊತ್ತವನ್ನು 149-7 ಕ್ಕೆ ತಂದು ನಿಲ್ಲಿಸಿದರು.

150 ರನ್​ಗಳ ಸುಲಭ ಗುರಿ ಬೆನ್ನತ್ತಿದ ಹುಬ್ಬಳ್ಳಿ ಟೈಗರ್ಸ್ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಲವ್ನೀತ್ ಸಿಸೋಡಿಯಾ 13 ರನ್​ಗಳಿಸಿ 2ನೇ ಓವರ್​ನಲ್ಲೇ ನಿರ್ಗಮಿಸಿದರು. ಆದರೆ ಮತ್ತೊಂದೆಡೆ ಸ್ಪೋಟಕ ದಾಂಡಿಗ ಮೊಹಮ್ಮದ್ ತಾಹ ಅಬ್ಬರಿಸಲಾರಂಭಿಸಿದರು.

ಇತ್ತ ತಾಹ ಅಬ್ಬರ ಆರಂಭವಾಗುತ್ತಿದ್ದಂತೆ ಶಿವಮೊಗ್ಗ ಲಯನ್ಸ್ ಬೌಲರ್​ಗಳು ಲಯ ತಪ್ಪಿದರು. ಇದರ ಲಾಭವನ್ನು ಪಡೆಯುವಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೃಷ್ಣನ್ ಶ್ರೀಜಿತ್ ಕೂಡ ಯಶಸ್ವಿಯಾದರು.

ಪರಿಣಾಮ ಮೊಹಮ್ಮದ್ ತಾಹ ಕೇವಲ 38 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 69 ರನ್ ಬಾರಿಸಿದರು. ಇನ್ನು ಶ್ರೀಜಿತ್ 39 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 61 ರನ್​ ಸಿಡಿಸಿ 14 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಗೆಲುವಿನೊಂದಿಗೆ ಮನೀಶ್ ಪಾಂಡೆ ನೇತೃತ್ವದ ಹುಬ್ಬಳ್ಳಿ ಟೈಗರ್ಸ್ ತಂಡವು ಫೈನಲ್​ಗೆ ಪ್ರವೇಶಿಸಿದೆ.

ಹುಬ್ಬಳ್ಳಿ ಟೈಗರ್ಸ್ ಪ್ಲೇಯಿಂಗ್ 11: ಮೊಹಮ್ಮದ್ ತಾಹ , ಲವ್ನೀತ್ ಸಿಸೋಡಿಯಾ, ಕೃಷ್ಣನ್ ಶ್ರೀಜಿತ್ , ಮನೀಶ್ ಪಾಂಡೆ (ನಾಯಕ) , ಪ್ರವೀಣ್ ದುಬೆ , ಮನ್ವಂತ್ ಕುಮಾರ್ ಎಲ್ , ಸಂಜಯ್ ಅಶ್ವಿನ್ (ವಿಕೆಟ್ ಕೀಪರ್) , ಲವಿಶ್ ಕೌಶಲ್ , ಎಂಬಿ ದರ್ಶನ್ , ಕೆ ಸಿ ಕಾರಿಯಪ್ಪ , ವಿಧ್ವತ್ ಕಾವೇರಪ್ಪ.

ಇದನ್ನೂ ಓದಿ: ಏಷ್ಯಾಕಪ್​ನಲ್ಲಿ ನಿರ್ಧಾರವಾಗಲಿದೆ ಯಾರು ನಂಬರ್ 1

ಶಿವಮೊಗ್ಗ ಲಯನ್ಸ್ ಪ್ಲೇಯಿಂಗ್ 11: ರೋಹನ್ ಕದಂ , ನಿಹಾಲ್ ಉಳ್ಳಾಲ್ ( ವಿಕೆಟ್ ಕೀಪರ್) , ವಿನಯ್ ಸಾಗರ್ , ಅಭಿನವ್ ಮನೋಹರ್ , ಶ್ರೇಯಸ್ ಗೋಪಾಲ್ ( ನಾಯಕ ) , ರೋಹಿತ್ ಕುಮಾರ್ ಕೆ , ಎಸ್ ಶಿವರಾಜ್ , ಕ್ರಾಂತಿ ಕುಮಾರ್ , ನಿಶ್ಚಿತ್ ಎನ್ ರಾವ್ , ಎಚ್ ಎಸ್ ಶರತ್ , ಪ್ರಣವ್ ಭಾಟಿಯಾ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ