AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದುವರೆದ ಮನೀಶ್ ಪಾಂಡೆ ಪಡೆಯ ಗೆಲುವಿನ ನಾಗಾಲೋಟ

Maharaja Trophy T20 2023: ಈ ಬಾರಿಯ ಮಹಾರಾಜ ಟ್ರೋಫಿಯಲ್ಲಿ ಮನೀಶ್ ಪಾಂಡೆ ನಾಯಕತ್ವದ ಹುಬ್ಬಳ್ಳಿ ಟೈಗರ್ಸ್ ತಂಡವು ಭರ್ಜರಿ ಪ್ರದರ್ಶನ ನೀಡುತ್ತಿದೆ. ಇದುವರೆಗೆ ಆಡಿದ 5 ಪಂದ್ಯಗಳಲ್ಲೂ ಗೆಲುವು ದಾಖಲಿಸುವ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ. ಇನ್ನು ಐದು ಪಂದ್ಯಗಳಲ್ಲಿ 3 ಜಯಗಳಿಸಿರುವ ಮೈಸೂರು ವಾರಿಯರ್ಸ್ ತಂಡ 2ನೇ ಸ್ಥಾನದಲ್ಲಿದೆ.

ಮುಂದುವರೆದ ಮನೀಶ್ ಪಾಂಡೆ ಪಡೆಯ ಗೆಲುವಿನ ನಾಗಾಲೋಟ
Hubli Tigers
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 19, 2023 | 10:30 PM

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮಹಾರಾಜ ಟ್ರೋಫಿ ಟಿ20 ಟೂರ್ನಿಯ 14ನೇ ಪಂದ್ಯದಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಶಿವಮೊಗ್ಗ ಲಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಹುಬ್ಬಳ್ಳಿ ಟೈಗರ್ಸ್ ಮೊದಲು ಬೌಲಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿತು.

ಅದರಂತೆ ಮೊದಲ ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸಿದ ಶಿವಮೊಗ್ಗ ಲಯನ್ಸ್ ತಂಡವು ಉತ್ತಮ ಆರಂಭ ಪಡೆಯಲಿಲ್ಲ. ಆರಂಭಿಕ ಆಟಗಾರ ನಿಹಾಲ್ ಉಳ್ಳಾಲ್ (3) ರನೌಟ್ ಆದರೆ, ರೋಹನ್ ಕದಮ್ (14) ಕೆಸಿ ಕಾರ್ಯಪ್ಪ ಎಸೆತದಲ್ಲಿ ಔಟಾದರು.

ಇನ್ನು ರೋಹನ್ ನವೀನ್ 18 ರನ್​ಗಳಿಸಿದರೆ, ರೋಹಿತ್ ಕುಮಾರ್ 3 ರನ್​ ಬಾರಿಸಿ ಮನ್ವಂತ್​ ಕುಮಾರ್​ಗೆ ವಿಕೆಟ್ ಒಪ್ಪಿಸಿದರು. ಇನ್ನು ನಾಯಕ ಶ್ರೇಯಸ್ ಗೋಪಾಲ್ (10) ಐದನೇ ವಿಕೆಟ್ ಆಗಿ ನಿರ್ಗಮಿಸಿದರೆ, ಇದರ ಬೆನ್ನಲ್ಲೇ ಕ್ರಾಂತಿ ಕುಮಾರ್ ಶೂನ್ಯಕ್ಕೆ ಔಟಾದರು.

ಈ ಹಂತದಲ್ಲಿ ಕಣಕ್ಕಿಳಿದ ಅಭಿನವ್ ಮನೋಹರ್ (10) ಅವರನ್ನು ಮನ್ವಂತ್ ಕುಮಾರ್ ಪೆವಿಲಿಯನ್​ಗೆ ಕಳುಹಿಸಿದರು. ಆದರೆ 8ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಪ್ರಣವ್ ಭಾಟಿಯಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

ಹುಬ್ಬಳ್ಳಿ ಟೈಗರ್ಸ್ ಬೌಲರ್​ಗಳ ವಿರುದ್ಧ ಅಬ್ಬರಿಸಿದ ಪ್ರಣವ್ ಭಾಟಿಯಾ 4 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 30 ಎಸೆತಗಳಲ್ಲಿ ಅಜೇಯ 46 ರನ್​ ಸಿಡಿಸಿದರು. ಈ ಅಮೂಲ್ಯ ಕಾಣಿಕೆಯೊಂದಿಗೆ ಶಿವಮೊಗ್ಗ ಲಯನ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 138 ರನ್ ಕಲೆಹಾಕಿತು.

139 ರನ್​ಗಳ ಸುಲಭ ಗುರಿ ಬೆನ್ನತ್ತಿದ ಹುಬ್ಬಳ್ಳಿ ಟೈಗರ್ಸ್ ತಂಡಕ್ಕೆ ಲವ್ನೀತ್ ಸಿಸೋಡಿಯಾ ಹಾಗೂ ಮೊಹಮ್ಮದ್ ತಾಹ ಸ್ಪೋಟಕ ಆರಂಭ ಒದಗಿಸಿದ್ದರು. 9.4 ಓವರ್​ಗಳಲ್ಲಿ 85 ರನ್ ಪೇರಿಸಿದ ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಶ್ರೇಯಸ್ ಗೋಪಾಲ್ ಯಶಸ್ವಿಯಾದರು.

37 ರನ್​ಗಳಿಸಿ ತಾಹ ಔಟಾದರೂ, ಮತ್ತೊಂದೆಡೆ ಲವ್ನೀತ್ ಸಿಸೋಡಿಯಾ ಅಬ್ಬರ ಮುಂದುವರೆದಿತ್ತು. 46 ಎಸೆತಗಳನ್ನು ಎದುರಿಸಿದ ಸಿಸೋಡಿಯಾ 2 ಭರ್ಜರಿ ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ 69 ರನ್​ ಚಚ್ಚಿ ವಿಕೆಟ್ ಒಪ್ಪಿಸಿದರು.

ಇನ್ನು ನಾಗ ಭರತ್ ಅಜೇಯ 23 ಹಾಗೂ ಕೃಷ್ಣನ್ ಶ್ರೀಜಿತ್ ಅಜೇಯ 7 ರನ್​ಗಳಿಸುವ ಮೂಲಕ 16.2 ಓವರ್​ಗಳಲ್ಲಿ ತಂಡವನ್ನು 139 ರನ್​ಗಳ ಗುರಿ ಮುಟ್ಟಿಸಿದರು. ಇದರೊಂದಿಗೆ ಹುಬ್ಬಳ್ಳಿ ಟೈಗರ್ಸ್ ತಂಡವು 8 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿತು.

ಟೈಗರ್ಸ್​ ಗೆಲುವಿನ ನಾಗಾಲೋಟ:

ಈ ಬಾರಿಯ ಮಹಾರಾಜ ಟ್ರೋಫಿಯಲ್ಲಿ ಮನೀಶ್ ಪಾಂಡೆ ನಾಯಕತ್ವದ ಹುಬ್ಬಳ್ಳಿ ಟೈಗರ್ಸ್ ತಂಡವು ಭರ್ಜರಿ ಪ್ರದರ್ಶನ ನೀಡುತ್ತಿದೆ. ಇದುವರೆಗೆ ಆಡಿದ 5 ಪಂದ್ಯಗಳಲ್ಲೂ ಗೆಲುವು ದಾಖಲಿಸುವ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ. ಇನ್ನು ಐದು ಪಂದ್ಯಗಳಲ್ಲಿ 3 ಜಯಗಳಿಸಿರುವ ಮೈಸೂರು ವಾರಿಯರ್ಸ್ ತಂಡ 2ನೇ ಸ್ಥಾನದಲ್ಲಿದೆ.

ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್