AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದುವರೆದ ಮನೀಶ್ ಪಾಂಡೆ ಪಡೆಯ ಗೆಲುವಿನ ನಾಗಾಲೋಟ

Maharaja Trophy T20 2023: ಈ ಬಾರಿಯ ಮಹಾರಾಜ ಟ್ರೋಫಿಯಲ್ಲಿ ಮನೀಶ್ ಪಾಂಡೆ ನಾಯಕತ್ವದ ಹುಬ್ಬಳ್ಳಿ ಟೈಗರ್ಸ್ ತಂಡವು ಭರ್ಜರಿ ಪ್ರದರ್ಶನ ನೀಡುತ್ತಿದೆ. ಇದುವರೆಗೆ ಆಡಿದ 5 ಪಂದ್ಯಗಳಲ್ಲೂ ಗೆಲುವು ದಾಖಲಿಸುವ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ. ಇನ್ನು ಐದು ಪಂದ್ಯಗಳಲ್ಲಿ 3 ಜಯಗಳಿಸಿರುವ ಮೈಸೂರು ವಾರಿಯರ್ಸ್ ತಂಡ 2ನೇ ಸ್ಥಾನದಲ್ಲಿದೆ.

ಮುಂದುವರೆದ ಮನೀಶ್ ಪಾಂಡೆ ಪಡೆಯ ಗೆಲುವಿನ ನಾಗಾಲೋಟ
Hubli Tigers
TV9 Web
| Edited By: |

Updated on: Aug 19, 2023 | 10:30 PM

Share

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮಹಾರಾಜ ಟ್ರೋಫಿ ಟಿ20 ಟೂರ್ನಿಯ 14ನೇ ಪಂದ್ಯದಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಶಿವಮೊಗ್ಗ ಲಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಹುಬ್ಬಳ್ಳಿ ಟೈಗರ್ಸ್ ಮೊದಲು ಬೌಲಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿತು.

ಅದರಂತೆ ಮೊದಲ ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸಿದ ಶಿವಮೊಗ್ಗ ಲಯನ್ಸ್ ತಂಡವು ಉತ್ತಮ ಆರಂಭ ಪಡೆಯಲಿಲ್ಲ. ಆರಂಭಿಕ ಆಟಗಾರ ನಿಹಾಲ್ ಉಳ್ಳಾಲ್ (3) ರನೌಟ್ ಆದರೆ, ರೋಹನ್ ಕದಮ್ (14) ಕೆಸಿ ಕಾರ್ಯಪ್ಪ ಎಸೆತದಲ್ಲಿ ಔಟಾದರು.

ಇನ್ನು ರೋಹನ್ ನವೀನ್ 18 ರನ್​ಗಳಿಸಿದರೆ, ರೋಹಿತ್ ಕುಮಾರ್ 3 ರನ್​ ಬಾರಿಸಿ ಮನ್ವಂತ್​ ಕುಮಾರ್​ಗೆ ವಿಕೆಟ್ ಒಪ್ಪಿಸಿದರು. ಇನ್ನು ನಾಯಕ ಶ್ರೇಯಸ್ ಗೋಪಾಲ್ (10) ಐದನೇ ವಿಕೆಟ್ ಆಗಿ ನಿರ್ಗಮಿಸಿದರೆ, ಇದರ ಬೆನ್ನಲ್ಲೇ ಕ್ರಾಂತಿ ಕುಮಾರ್ ಶೂನ್ಯಕ್ಕೆ ಔಟಾದರು.

ಈ ಹಂತದಲ್ಲಿ ಕಣಕ್ಕಿಳಿದ ಅಭಿನವ್ ಮನೋಹರ್ (10) ಅವರನ್ನು ಮನ್ವಂತ್ ಕುಮಾರ್ ಪೆವಿಲಿಯನ್​ಗೆ ಕಳುಹಿಸಿದರು. ಆದರೆ 8ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಪ್ರಣವ್ ಭಾಟಿಯಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

ಹುಬ್ಬಳ್ಳಿ ಟೈಗರ್ಸ್ ಬೌಲರ್​ಗಳ ವಿರುದ್ಧ ಅಬ್ಬರಿಸಿದ ಪ್ರಣವ್ ಭಾಟಿಯಾ 4 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 30 ಎಸೆತಗಳಲ್ಲಿ ಅಜೇಯ 46 ರನ್​ ಸಿಡಿಸಿದರು. ಈ ಅಮೂಲ್ಯ ಕಾಣಿಕೆಯೊಂದಿಗೆ ಶಿವಮೊಗ್ಗ ಲಯನ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 138 ರನ್ ಕಲೆಹಾಕಿತು.

139 ರನ್​ಗಳ ಸುಲಭ ಗುರಿ ಬೆನ್ನತ್ತಿದ ಹುಬ್ಬಳ್ಳಿ ಟೈಗರ್ಸ್ ತಂಡಕ್ಕೆ ಲವ್ನೀತ್ ಸಿಸೋಡಿಯಾ ಹಾಗೂ ಮೊಹಮ್ಮದ್ ತಾಹ ಸ್ಪೋಟಕ ಆರಂಭ ಒದಗಿಸಿದ್ದರು. 9.4 ಓವರ್​ಗಳಲ್ಲಿ 85 ರನ್ ಪೇರಿಸಿದ ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಶ್ರೇಯಸ್ ಗೋಪಾಲ್ ಯಶಸ್ವಿಯಾದರು.

37 ರನ್​ಗಳಿಸಿ ತಾಹ ಔಟಾದರೂ, ಮತ್ತೊಂದೆಡೆ ಲವ್ನೀತ್ ಸಿಸೋಡಿಯಾ ಅಬ್ಬರ ಮುಂದುವರೆದಿತ್ತು. 46 ಎಸೆತಗಳನ್ನು ಎದುರಿಸಿದ ಸಿಸೋಡಿಯಾ 2 ಭರ್ಜರಿ ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ 69 ರನ್​ ಚಚ್ಚಿ ವಿಕೆಟ್ ಒಪ್ಪಿಸಿದರು.

ಇನ್ನು ನಾಗ ಭರತ್ ಅಜೇಯ 23 ಹಾಗೂ ಕೃಷ್ಣನ್ ಶ್ರೀಜಿತ್ ಅಜೇಯ 7 ರನ್​ಗಳಿಸುವ ಮೂಲಕ 16.2 ಓವರ್​ಗಳಲ್ಲಿ ತಂಡವನ್ನು 139 ರನ್​ಗಳ ಗುರಿ ಮುಟ್ಟಿಸಿದರು. ಇದರೊಂದಿಗೆ ಹುಬ್ಬಳ್ಳಿ ಟೈಗರ್ಸ್ ತಂಡವು 8 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿತು.

ಟೈಗರ್ಸ್​ ಗೆಲುವಿನ ನಾಗಾಲೋಟ:

ಈ ಬಾರಿಯ ಮಹಾರಾಜ ಟ್ರೋಫಿಯಲ್ಲಿ ಮನೀಶ್ ಪಾಂಡೆ ನಾಯಕತ್ವದ ಹುಬ್ಬಳ್ಳಿ ಟೈಗರ್ಸ್ ತಂಡವು ಭರ್ಜರಿ ಪ್ರದರ್ಶನ ನೀಡುತ್ತಿದೆ. ಇದುವರೆಗೆ ಆಡಿದ 5 ಪಂದ್ಯಗಳಲ್ಲೂ ಗೆಲುವು ದಾಖಲಿಸುವ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ. ಇನ್ನು ಐದು ಪಂದ್ಯಗಳಲ್ಲಿ 3 ಜಯಗಳಿಸಿರುವ ಮೈಸೂರು ವಾರಿಯರ್ಸ್ ತಂಡ 2ನೇ ಸ್ಥಾನದಲ್ಲಿದೆ.

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ