AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೀಶ್ ಪಾಂಡೆ ಸಿಡಿಲಬ್ಬರದ ಮುಂದೆ ಮಂಡಿಯೂರಿದ ಮಂಗಳೂರು ಡ್ರಾಗನ್ಸ್

Maharaja Trophy T20 2023: ಶರತ್ ವಿಕೆಟ್ ಸಿಗುತ್ತಿದ್ದಂತೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಹುಬ್ಬಳ್ಳಿ ಟೈಗರ್ಸ್ ಬೌಲರ್​ಗಳು ರನ್​ ಗತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರು. ಇನ್ನು 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೃಷ್ಣಮೂರ್ತಿ ಸಿದ್ಧಾರ್ಥ್ ಅಜೇಯ  47 ರನ್​ಬಾರಿಸಿದರೂ ತಂಡಕ್ಕೆ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ.

ಮನೀಶ್ ಪಾಂಡೆ ಸಿಡಿಲಬ್ಬರದ ಮುಂದೆ ಮಂಡಿಯೂರಿದ ಮಂಗಳೂರು ಡ್ರಾಗನ್ಸ್
Manish Pandey
TV9 Web
| Edited By: |

Updated on:Aug 17, 2023 | 9:17 PM

Share

Maharaja Trophy T20 2023: ಮಹಾರಾಜ ಟ್ರೋಫಿ ಟಿ20 ಟೂರ್ನಿಯ 10ನೇ ಪಂದ್ಯದಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮಂಗಳೂರು ಡ್ರಾಗನ್ಸ್ ತಂಡದ ನಾಯಕ ಕೃಷ್ಣಪ್ಪ ಗೌತಮ್ ಬೌಲಿಂಗ್ ಆಯ್ದುಕೊಂಡಿದ್ದರು. ಇತ್ತ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಹುಬ್ಬಳ್ಳಿ ಟೈಗರ್ಸ್ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಲವ್ನೀತ್ ಸಿಸೋಡಿಯಾ ಕೇವಲ 1 ರನ್​ಗಳಿಸಿ ಪ್ರತೀಕ್ ಜೈನ್​ಗೆ ವಿಕೆಟ್ ಒಪ್ಪಿಸಿದ್ದರು.

ಈ ವೇಳೆ ಮೊಹಮ್ಮದ್ ತಾಹ ಜೊತೆಗೂಡಿದ ಕೃಷ್ಣನ್ ಶ್ರೀಜಿತ್ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು. ಒಂದೆಡೆ ತಾಹ ಅಬ್ಬರಿಸಲಾರಂಭಿಸಿದರೆ, ಮತ್ತೊಂದೆಡೆ ಶ್ರೀಜಿತ್ ಸಿಡಿಲಬ್ಬರ ಶುರು ಮಾಡಿದರು. ಪರಿಣಾಮ ಆರಂಭಿಕ ಯಶಸ್ಸು ಪಡೆದಿದ್ದ ಮಂಗಳೂರು ಡ್ರಾಗನ್ಸ್ ಬೌಲರ್​ಗಳು ಲಯ ತಪ್ಪಿದರು.

ಇದರ ಸಂಪೂರ್ಣ ಲಾಭ ಪಡೆದ ತಾಹ ಆಕ್ರಮಣಕಾರಿ ಬ್ಯಾಟಿಂಗ್ ಮುಂದುವರೆಸಿದರು. ಅಲ್ಲದೆ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳನ್ನು ಚಚ್ಚಿದರು. ಈ ಮೂಲಕ ಕೇವಲ 28 ಎಸೆತಗಳಲ್ಲಿ 52 ರನ್​ ಸಿಡಿಸಿದರು. ಮೊಹಮ್ಮದ್ ತಾಹ ಅವರ ಈ ಸಿಡಿಲಬ್ಬರದ ಬ್ಯಾಟಿಂಗ್ ಪರಿಣಾಮ 9ನೇ ಓವರ್​ನಲ್ಲಿ ಹುಬ್ಬಳ್ಳಿ ಟೈಗರ್ಸ್​ ತಂಡದ ಮೊತ್ತ 97 ಕ್ಕೆ ಬಂದು ನಿಂತಿತು.

ಇನ್ನು ತಾಹ ನಿರ್ಗಮನದ ಬಳಿಕ ಬಿರುಸಿನ ಆಟ ಮುಂದುವರೆಸಿದ ಶ್ರೀಜಿತ್ 3 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 29 ಎಸೆತಗಳಲ್ಲಿ 52 ರನ್​ ಬಾರಿಸಿದರು. ಇದೇ ವೇಳೆ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮನೀಶ್ ಪಾಂಡೆಯ ಅಬ್ಬರಕ್ಕೆ ಮಂಗಳೂರು ಡ್ರಾಗನ್ಸ್ ಬೌಲರ್​ಗಳು ಹೈರಾಣರಾದರು.

ಕ್ರೀಸ್​ಗೆ ಆಗಮಿಸುತ್ತಿದ್ದಂತೆ ವಿಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಪಾಂಡೆ 4 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಕೇವಲ 34 ಎಸೆತಗಳಲ್ಲಿ ಅಜೇಯ 69 ರನ್​ ಬಾರಿಸಿದರು. ಮನೀಶ್ ಪಾಂಡೆಯ ಈ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ಹುಬ್ಬಳ್ಳಿ ಟೈಗರ್ಸ್ ತಂಡವು 20 ಓವರ್​ಗಳಲ್ಲಿ ​5 ವಿಕೆಟ್ ನಷ್ಟಕ್ಕೆ 215 ರನ್​ ಕಲೆಹಾಕಿತು.

216 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಮಂಗಳೂರು ಡ್ರಾಗನ್ಸ್ ತಂಡವು ನಿಧಾನಗತಿಯ ಆರಂಭ ಪಡೆಯಿತು. ಇದಾಗ್ಯೂ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿಕೆಟ್ ಕೀಪರ್ ಬ್ಯಾಟರ್ ಶರತ್ ಬಿಆರ್​ ಕೇವಲ 18 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 38 ರನ್​ ಚಚ್ಚಿದರು. ಈ ವೇಳೆ ಕಾರ್ಯಪ್ಪ ಎಸೆದ ಎಸೆತವನ್ನು ಗುರುತಿಸುವಲ್ಲಿ ಎಡವಿದ ಶರತ್ (38) ಮನೀಶ್ ಪಾಂಡೆಗೆ ಕ್ಯಾಚ್ ನೀಡಿದರು.

ಶರತ್ ವಿಕೆಟ್ ಸಿಗುತ್ತಿದ್ದಂತೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಹುಬ್ಬಳ್ಳಿ ಟೈಗರ್ಸ್ ಬೌಲರ್​ಗಳು ರನ್​ ಗತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರು. ಇನ್ನು 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೃಷ್ಣಮೂರ್ತಿ ಸಿದ್ಧಾರ್ಥ್ ಅಜೇಯ  47 ರನ್​ಬಾರಿಸಿದರೂ ತಂಡಕ್ಕೆ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ.

ಅಂತಿಮವಾಗಿ 8 ವಿಕೆಟ್​ ಕಳೆದುಕೊಂಡು  152 ರನ್​ಗಳಿಸಿ ಮಂಗಳೂರು ಡ್ರಾಗನ್ಸ್​ ತಂಡ ಸೋಲೊಪ್ಪಿಕೊಂಡಿತು. ಇತ್ತ ಮನೀಶ್ ಪಾಂಡೆ ನೇತೃತ್ವದ ಹುಬ್ಬಳ್ಳಿ ಟೈಗರ್ಸ್ ತಂಡವು 63 ರನ್​ಗಳ ಅಮೋಘ ಗೆಲುವು ತಮ್ಮದಾಗಿಸಿಕೊಂಡರು.

ಮಂಗಳೂರು ಡ್ರಾಗನ್ಸ್ ಪ್ಲೇಯಿಂಗ್ 11: ಶರತ್ ಬಿಆರ್ (ವಿಕೆಟ್ ಕೀಪರ್) , ನವೀನ್ ಎಂಜಿ , ಅನೀಶ್ವರ್ ಗೌತಮ್ , ಕೃಷ್ಣಮೂರ್ತಿ ಸಿದ್ಧಾರ್ಥ್ , ಬಿಯು ಶಿವಕುಮಾರ್ , ಅನಿರುದ್ಧ ಜೋಶಿ , ಕೃಷ್ಣಪ್ಪ ಗೌತಮ್ (ನಾಯಕ) , ಧೀರಜ್ ಜೆ ಗೌಡ , ಆದಿತ್ಯ ಗೋಯಲ್ , ಪ್ರತೀಕ್ ಜೈನ್ , ಪಾರಸ್ ಆರ್ಯ.

ಇದನ್ನೂ ಓದಿ: ಸಿಕ್ಸ್​ ಸಿಡಿಸಿ ವಿಶ್ವ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

ಹುಬ್ಬಳ್ಳಿ ಟೈಗರ್ಸ್ ಪ್ಲೇಯಿಂಗ್ 11: ಲುವ್ನಿತ್ ಸಿಸೋಡಿಯಾ (ವಿಕೆಟ್ ಕೀಪರ್) , ಮೊಹಮ್ಮದ್ ತಾಹ , ಕೃಷ್ಣನ್ ಶ್ರೀಜಿತ್ , ನಾಗ ಭರತ್ , ಮನೀಶ್ ಪಾಂಡೆ (ನಾಯಕ) , ಮನ್ವಂತ್ ಕುಮಾರ್ ಎಲ್ , ಪ್ರವೀಣ್ ದುಬೆ , ಲವಿಶ್ ಕೌಶಲ್ , ಕೆ.ಸಿ ಕಾರ್ಯಪ್ಪ , ವಿಧ್ವತ್ ಕಾವೇರಪ್ಪ , ನಾಥನ್ ಡಿಮೆಲ್ಲೋ.

Published On - 9:16 pm, Thu, 17 August 23

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಗಿಲ್ಲಿ ನಟ, ಅಶ್ವಿನಿ ಗೌಡ
ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಗಿಲ್ಲಿ ನಟ, ಅಶ್ವಿನಿ ಗೌಡ