Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲವ್ನೀತ್ ಶತಕ ವ್ಯರ್ಥ: ಗೆದ್ದು ಬೀಗಿದ ಮೈಸೂರು ವಾರಿಯರ್ಸ್

Maharaja Trophy T20 2023: ವಿಶೇಷ ಎಂದರೆ ಇದು ಹುಬ್ಬಳ್ಳಿ ಟೈಗರ್ಸ್ ತಂಡದ ಮೊದಲ ಸೋಲು. ಕಳೆದ ಐದು ಪಂದ್ಯಗಳಲ್ಲಿ ಸತತ ಗೆಲುವಿನೊಂದಿಗೆ ನಾಗಾಲೋಟ ಮುಂದುವರೆಸಿದ್ದ ಮನೀಶ್ ಪಾಂಡೆಗೆ ಸೋಲುಣಿಸುವಲ್ಲಿ ಕೊನೆಗೂ ಮೈಸೂರು ವಾರಿಯರ್ಸ್ ಯಶಸ್ವಿಯಾಗಿದ್ದಾರೆ.

ಲವ್ನೀತ್ ಶತಕ ವ್ಯರ್ಥ: ಗೆದ್ದು ಬೀಗಿದ ಮೈಸೂರು ವಾರಿಯರ್ಸ್
Luvnith
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 20, 2023 | 5:09 PM

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮಹಾರಾಜ ಟ್ರೋಫಿ ಟಿ20 ಟೂರ್ನಿಯ 15ನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಹುಬ್ಬಳ್ಳಿ ಟೈಗರ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕರುಣ್ ನಾಯರ್ ಮೊದಲು ಬೌಲಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಹುಬ್ಳಳ್ಳಿ ಟೈಗರ್ಸ್ ಪರ ಆರಂಭಿಕ ಆಟಗಾರ ಲವ್ನೀತ್ ಸಿಸೋಡಿಯಾ ಅಬ್ಬರಿಸಿದ್ದರು. ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಎಡಗೈ ದಾಂಡಿಗ ಮೈಸೂರು ವಾರಿಯರ್ಸ್ ಬೌಲರ್​ಗಳ ಬೆಂಡೆತ್ತಿದರು.

ಪರಿಣಾಮ ಲವ್ನೀತ್ ಬ್ಯಾಟ್​ನಿಂದ 62 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 7 ಫೋರ್​ಗಳು ಮೂಡಿಬಂತು. ಅಲ್ಲದೆ ಭರ್ಜರಿ ಶತಕವನ್ನು ಸಿಡಿಸಿದರು. ಆದರೆ ಶತಕದ ಬೆನ್ನಲ್ಲೇ ಹಿಟ್​ ವಿಕೆಟ್ ಆಗುವ ಮೂಲಕ ಲವ್ನೀತ್ ಸಿಸೋಡಿಯಾ (105) ಹೊರನಡೆದರು.

ಇನ್ನು ಮಧ್ಯಮ ಕ್ರಮಾಂಕದಲ್ಲಿ ನಾಯಕ ಮನೀಶ್ ಪಾಂಡೆ 33 ರನ್​ಗಳ ಕಾಣಿಕೆ ನೀಡಿದರು. ಇದರೊಂದಿಗೆ ಹುಬ್ಳ್ಳಳ್ಳಿ ಟೈಗರ್ಸ್ ತಂಡದ ಮೊತ್ತ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 185 ಕ್ಕೆ ಬಂದು ನಿಂತಿತು.

186 ರನ್​ಗಳ ಕಠಿಣ ಗುರಿ ಪಡೆದ ಮೈಸೂರು ವಾರಿಯರ್ಸ್ ತಂಡಕ್ಕೆ ಆರಂಭಿಕ ದಾಂಡಿಗ ರವಿಕುಮಾರ್ ಸಮರ್ಥ್ ಸ್ಪೋಟಕ ಆರಂಭ ಒದಗಿಸಿದ್ದರು. 42 ಎಸೆತಗಳನ್ನು ಎದುರಿಸಿದ ಸಮರ್ಥ್ 3 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 73 ರನ್​ಗಳಿಸಿ ರನೌಟ್ ಆದರು.

ಆ ಬಳಿಕ ಬಂದ ನಾಯಕ ಕರುಣ್ ನಾಯರ್ 25 ಎಸೆತಗಳಲ್ಲಿ 45 ರನ್​ ಚಚ್ಚಿದರು. ಇನ್ನು ಅಜಿತ್ ಕಾರ್ತಿಕ್ 29 ರನ್​ಗಳ ಕೊಡುಗೆ ನೀಡಿದರು. ಇನ್ನು ಶೊಯೇಬ್ ಮ್ಯಾನೇಜರ್ 16 ಎಸೆತಗಳಲ್ಲಿ ಅಜೇಯ 21 ರನ್​ ಹಾಗೂ ಶಿವಕುಮಾರ್ ರಕ್ಷಿತ್ 11 ಎಸೆತಗಳಲ್ಲಿ ಅಜೇಯ 22 ರನ್​ ಬಾರಿಸುವ ಮೂಲಕ 18.5 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಮೈಸೂರು ವಾರಿಯರ್ಸ್ ತಂಡವು 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ವಿಶೇಷ ಎಂದರೆ ಇದು ಹುಬ್ಬಳ್ಳಿ ಟೈಗರ್ಸ್ ತಂಡದ ಮೊದಲ ಸೋಲು. ಕಳೆದ ಐದು ಪಂದ್ಯಗಳಲ್ಲಿ ಸತತ ಗೆಲುವಿನೊಂದಿಗೆ ನಾಗಾಲೋಟ ಮುಂದುವರೆಸಿದ್ದ ಮನೀಶ್ ಪಾಂಡೆಗೆ ಸೋಲುಣಿಸುವಲ್ಲಿ ಕೊನೆಗೂ ಮೈಸೂರು ವಾರಿಯರ್ಸ್ ಯಶಸ್ವಿಯಾಗಿದ್ದಾರೆ.

ಮೈಸೂರು ವಾರಿಯರ್ಸ್ ಪ್ಲೇಯಿಂಗ್ 11: ರವಿಕುಮಾರ್ ಸಮರ್ಥ್ , ಕೋದಂಡ ಅಜಿತ್ ಕಾರ್ತಿಕ್ , ಕರುಣ್ ನಾಯರ್ (ನಾಯಕ) , ಶಿವಕುಮಾರ್ ರಕ್ಷಿತ್ (ವಿಕೆಟ್ ಕೀಪರ್) , ಮನೋಜ್ ಭಾಂಡಗೆ , ಜಗದೀಶ ಸುಚಿತ್ , ಮುರಳೀಧರ ವೆಂಕಟೇಶ್ , ಮೋನಿಶ್ ರೆಡ್ಡಿ , ಶಶಿ ಕುಮಾರ್ ಕೆ , ಶ್ರೀಶ ಆಚಾರ್ , ಶೋಯಬ್ ಮ್ಯಾನೇಜರ್ , ಲಂಕೇಶ್ ಕೆ ಎಸ್.

ಇದನ್ನೂ ಓದಿ: ಏಷ್ಯಾಕಪ್​ಗೆ 17 ಸದಸ್ಯರ ಸಂಭಾವ್ಯ ಟೀಮ್ ಇಂಡಿಯಾ ಹೀಗಿದೆ

ಹುಬ್ಬಳ್ಳಿ ಟೈಗರ್ಸ್ ಪ್ಲೇಯಿಂಗ್ 11: ಲುವ್ನಿತ್ ಸಿಸೋಡಿಯಾ (ವಿಕೆಟ್ ಕೀಪರ್) , ಮೊಹಮ್ಮದ್ ತಾಹಾ , ಬೆಂಗಳೂರು ಮೋಹಿತ್ , ನಾಗ ಭರತ್ , ಮನೀಶ್ ಪಾಂಡೆ (ನಾಯಕ) , ಪ್ರವೀಣ್ ದುಬೆ , ಮನ್ವಂತ್ ಕುಮಾರ್ ಎಲ್ , ಕೆ ಸಿ ಕಾರ್ಯಪ್ಪ , ಸಂತೋಕ್ ಸಿಂಗ್ , ನಾಥನ್ ಡಿಮೆಲ್ಲೊ , ಎಂ ಬಿ ದರ್ಶನ್ , ಮಲ್ಲಿಕ್​ ಸಾಬ್ ಸಿರೂರ್.

ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ