AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja Trophy T20 2023: ಸೆಮೀಸ್​ಗೆ ಎಂಟ್ರಿ ಕೊಟ್ಟ ಮೈಸೂರು ವಾರಿಯರ್ಸ್

Maharaja Trophy T20 2023: 154 ರನ್​ಗಳ ಸುಲಭ ಗುರಿ ಪಡೆದ ಮೈಸೂರು ವಾರಿಯರ್ಸ್ ತಂಡದ ಆರಂಭಿಕರು ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದರು. ಕಾರ್ತಿಕ್ 14 ಎಸೆತಗಳಲ್ಲಿ 20 ರನ್​ಗಳಿಸಿ ಔಟಾದರೆ, ಮತ್ತೊಂದೆಡೆ ರವಿಕುಮಾರ್ ಸಮರ್ಥ್ 50 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 62 ರನ್ ಬಾರಿಸಿದರು.

Maharaja Trophy T20 2023: ಸೆಮೀಸ್​ಗೆ ಎಂಟ್ರಿ ಕೊಟ್ಟ ಮೈಸೂರು ವಾರಿಯರ್ಸ್
Mysore Warriors
TV9 Web
| Edited By: |

Updated on: Aug 26, 2023 | 10:33 PM

Share

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮಹಾರಾಜ ಟ್ರೋಫಿ ಟಿ20 ಟೂರ್ನಿಯ 28ನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಕರುಣ್ ನಾಯರ್ ಪಡೆ ಸೆಮಿಫೈನಲ್ ಆಡುವುದನ್ನು ಖಚಿತಪಡಿಸಿಕೊಂಡಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಜಯಿಸಿದ ಮೈಸೂರು ವಾರಿಯರ್ಸ್ ತಂಡವು ಮೊದಲು ಫೀಲ್ಡಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿತು.

ಇತ್ತ ಮೊದಲ ಇನಿಂಗ್ಸ್​ ಆರಂಭಿಸಿದ ಗುಲ್ಬರ್ಗಾ ಮಿಸ್ಟಿಕ್ಸ್​ ತಂಡಕ್ಕೆ ಎಲ್​ಆರ್ ಚೇತನ್ (34) ಉತ್ತಮ ಆರಂಭ ಒದಗಿಸಿದ್ದರು. ಹಾಗೆಯೇ ಮ್ಯಾಕ್ನೀಲ್ ನೊರೊನ್ಹಾ 25 ರನ್​ಗಳ ಕೊಡುಗೆ ನೀಡಿದ್ದರು. ಇದಾಗ್ಯೂ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ.

ಅಂತಿಮ ಹಂತದಲ್ಲಿ ಶ್ರೀನಿವಾಸ್ ಶರತ್ ಬಾರಿಸಿದ 26 ರನ್​ಗಳ ನೆರವಿನೊಂದಿಗೆ ಗುಲ್ಬರ್ಗ ಮಿಸ್ಟಿಕ್ಸ್ ತಂಡವು 7 ವಿಕೆಟ್ ನಷ್ಟಕ್ಕೆ 153 ರನ್​ ಕಲೆಹಾಕಿತು.

154 ರನ್​ಗಳ ಸುಲಭ ಗುರಿ ಪಡೆದ ಮೈಸೂರು ವಾರಿಯರ್ಸ್ ತಂಡದ ಆರಂಭಿಕರು ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದರು. ಕಾರ್ತಿಕ್ 14 ಎಸೆತಗಳಲ್ಲಿ 20 ರನ್​ಗಳಿಸಿ ಔಟಾದರೆ, ಮತ್ತೊಂದೆಡೆ ರವಿಕುಮಾರ್ ಸಮರ್ಥ್ 50 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 62 ರನ್ ಬಾರಿಸಿದರು.

ಇನ್ನು ಕರುಣ್ ನಾಯರ್ 23 ರನ್​ಗಳ ಕೊಡುಗೆ ನೀಡಿದರೆ, ಲಂಕೇಶ್ ಕೆಎಸ್ ಅಜೇಯ 39 ರನ್ ಬಾರಿಸಿದರು. ಈ ಮೂಲಕ ಮೈಸೂರು ವಾರಿಯರ್ಸ್ ತಂಡವು 18 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 154 ರನ್​ ಕಲೆಹಾಕಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಈ ಗೆಲುವಿನೊಂದಿಗೆ ಮೈಸೂರು ವಾರಿಯರ್ಸ್ ತಂಡವು ಸೆಮಿಫೈನಲ್ ಪ್ರವೇಶಿಸಿದ 2ನೇ ತಂಡ ಎನಿಸಿಕೊಂಡಿದೆ. ಇದಕ್ಕೂ ಮುನ್ನ ಹುಬ್ಬಳ್ಳಿ ಟೈಗರ್ಸ್ ತಂಡವು ನಾಕೌಟ್ ಹಂತಕ್ಕೇರಿತ್ತು.

ಗುಲ್ಬರ್ಗ ಮಿಸ್ಟಿಕ್ಸ್​ ಪ್ಲೇಯಿಂಗ್ 11: ಎಲ್ ಆರ್ ಚೇತನ್ , ಆದರ್ಶ್ ಪ್ರಜ್ವಲ್ , ಶ್ರೀನಿವಾಸ್ ಶರತ್ ( ವಿಕೆಟ್ ಕೀಪರ್ ) , ಸ್ಮರಣ್ ಆರ್ , ಅಮಿತ್ ವರ್ಮಾ , ಮ್ಯಾಕ್ನೀಲ್ ಹ್ಯಾಡ್ಲಿ ನೊರೊನ್ಹಾ , ಅನೀಶ್ ಕೆ ವಿ , ವಿಜಯ್ ಕುಮಾರ್ ವೈಶಾಕ್ (ನಾಯಕ) , ಅವಿನಾಶ್ ಡಿ , ಹಾರ್ದಿಕ್ ರಾಜ್ , ಶರಣ್ ಗೌಡ.

ಇದನ್ನೂ ಓದಿ: ಗುರ್ಬಾಝ್ ಅಬ್ಬರಕ್ಕೆ ಧೋನಿ ದಾಖಲೆ ಉಡೀಸ್

ಮೈಸೂರು ವಾರಿಯರ್ಸ್ ಪ್ಲೇಯಿಂಗ್ 11: ಎಸ್​ಯು ಕಾರ್ತಿಕ್ , ಕರುಣ್ ನಾಯರ್ (ನಾಯಕ) , ಲಂಕೇಶ್ ಕೆಎಸ್ , ಶೋಯೆಬ್ ಮ್ಯಾನೇಜರ್ , ಶಿವಕುಮಾರ್ ರಕ್ಷಿತ್ ( ವಿಕೆಟ್ ಕೀಪರ್ ) , ಮನೋಜ್ ಭಾಂಡಗೆ , ಜಗದೀಶ ಸುಚಿತ್ , ಆದಿತ್ಯ ಮಣಿ , ಮೋನಿಶ್ ರೆಡ್ಡಿ , ಶಶಿ ಕುಮಾರ್ ಕೆ , ಕುಶಾಲ್ ವಾಧ್ವಾನಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ