AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja Trophy: ಮೊದಲ ಬಾರಿಗೆ ಮಂಗಳೂರು ಮುಡಿಗೇರಿದ ಮಹಾರಾಜ ಟ್ರೋಫಿ ಕಿರೀಟ

Mangalore Dragons Win Maharaja T20 Trophy: ಮೈಸೂರಿನಲ್ಲಿ ನಡೆದ ಮಹಾರಾಜ ಟಿ20 ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮಂಗಳೂರು ಡ್ರಾಗನ್ಸ್ ತಂಡವು ಹುಬ್ಬಳ್ಳಿ ಟೈಗರ್ಸ್ ತಂಡವನ್ನು ಸೋಲಿಸಿ ಚಾಂಪಿಯನ್ ಆಯಿತು. ಮಳೆಯಿಂದಾಗಿ ಪಂದ್ಯ ಅರ್ಧಕ್ಕೆ ನಿಂತು, ವಿ.ಜಯದೇವನ್ ನಿಯಮದ ಪ್ರಕಾರ ಮಂಗಳೂರು ತಂಡ 8 ವಿಕೆಟ್‌ಗಳ ಜಯ ಸಾಧಿಸಿತು. ಹುಬ್ಬಳ್ಳಿ ತಂಡ 154 ರನ್ ಗಳಿಸಿತು ಆದರೆ ಮಂಗಳೂರು ತಂಡ 10.4 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 85 ರನ್ ಗಳಿಸಿತ್ತು.

Maharaja Trophy: ಮೊದಲ ಬಾರಿಗೆ ಮಂಗಳೂರು ಮುಡಿಗೇರಿದ ಮಹಾರಾಜ ಟ್ರೋಫಿ ಕಿರೀಟ
Mangaluru Dragons
ಪೃಥ್ವಿಶಂಕರ
|

Updated on:Aug 29, 2025 | 2:33 PM

Share

ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಕ್ರೀಡಾಂಗಣದಲ್ಲಿ ನಡೆದ ಮಹಾರಾಜ ಟಿ20 ಟ್ರೋಫಿಯ (Maharaja T20 Trophy) ಫೈನಲ್ ಪಂದ್ಯದಲ್ಲಿ ಮಂಗಳೂರು ಡ್ರಾಗನ್ಸ್ ತಂಡವು, ಹುಬ್ಬಳ್ಳಿ ಟೈಗರ್ಸ್​ ತಂಡವನ್ನು (Hubli Tigers vs Mangaluru Dragons) ವಿ ಜಯದೇವನ್ ನಿಯಮದಡಿಯಲ್ಲಿ (VJD (V Jayadevan) Method) 8 ವಿಕೆಟ್​ಗಳಿಂದ ಮಣಿಸಿ ಮೊದಲ ಬಾರಿಗೆ ಮಹಾರಾಜ ಟ್ರೋಫಿಯ ಚಾಂಪಿಯನ್ ಆಗಿ ಹೊರಹೊಮ್ಮಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಹುಬ್ಬಳ್ಳಿ ತಂಡವು 8 ವಿಕೆಟ್​ಗಳ ನಷ್ಟಕ್ಕೆ 154 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಮಂಗಳೂರು ತಂಡ 10.4 ಓವರ್​ಗಳ ಮುಕ್ತಾಯಕ್ಕೆ 2 ವಿಕೆಟ್ ಕಳೆದುಕೊಂಡು 85 ರನ್ ಕಲೆಹಾಕಿತ್ತು. ಆದರೆ ಈ ವೇಳೆಗೆ ಮಳೆ ಧಾರಕಾರವಾಗಿ ಸುರಿಯಲಾರಂಭಿಸಿತು. ಹೀಗಾಗಿ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಲಾಯಿತು. ಸಾಕಷ್ಟು ಸಮಯ ಕಾದ ಬಳಿಕವೂ ಮಳೆ ನಿಲ್ಲಲಿಲ್ಲ. ಹೀಗಾಗಿ ವಿ ಜಯದೇವನ್ ನಿಯಮದಡಿಯಲ್ಲಿ ಮಂಗಳೂರು ತಂಡವನ್ನು ವಿಜಯಿ ಎಂದು ಘೋಷಿಸಲಾಯಿತು.

ವಾಸ್ತವವಾಗಿ ಇದೇ ಮಂಗಳೂರು ಡ್ರಾಗನ್ಸ್ ಹಾಗೂ ಹುಬ್ಬಳ್ಳಿ ಟೈಗರ್ಸ್​ ನಡುವೆ ಮೊದಲ ಕ್ವಾಲಿಫೈಯರ್ ಪಂದ್ಯ ನಡೆದಿತ್ತು. ಆ ಪಂದ್ಯದಲ್ಲಿ ಮಂಗಳೂರು ತಂಡವನ್ನು ಮಣಿಸಿದ್ದ ಹುಬ್ಬಳ್ಳಿ ತಂಡ ನೇರವಾಗಿ ಫೈನಲ್​ಗೇರಿತ್ತು. ಆ ಬಳಿಕ ನಡೆದಿದ್ದ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಮಣಿಸಿದ್ದ ಮಂಗಳೂರು ತಂಡ ಮತ್ತೊಮ್ಮೆ ಫೈನಲ್​ನಲ್ಲಿ ಹುಬ್ಬಳ್ಳಿ ತಂಡಕ್ಕೆ ಎದುರಾಳಿಯಾಗಿತ್ತು. ಒಂದೆಡೆ ಹುಬ್ಬಳ್ಳಿ ತಂಡಕ್ಕೆ ಹಿಂದಿನ ಗೆಲುವಿನ ಬಲ ಸಿಕ್ಕಿದ್ದರೆ, ಇತ್ತ ಮಂಗಳೂರು ತಂಡಕ್ಕೆ ಕಳೆದ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಳ್ಳುವ ಅವಕಾಶವಿತ್ತು. ಅದರಂತೆ ಇಂದು ನಡೆದ ಫೈನಲ್​​ನಲ್ಲಿ ಹುಬ್ಬಳ್ಳಿ ತಂಡವನ್ನು ಮಣಿಸುವಲ್ಲಿ ಮಂಗಳೂರು ಯಶಸ್ವಿಯಾಯಿತು.

ಕೈಹಿಡಿಯದ ದೇವದತ್ ಪಡಿಕ್ಕಲ್

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಹುಬ್ಬಳ್ಳಿ ತಂಡಕ್ಕೆ ಸಾಧಾರಣ ಆರಂಭ ಸಿಕ್ಕಿತು. 38 ರನ್​ಗಳಿಗೆ ತಂಡದ ಮೊದಲ ವಿಕೆಟ್ ಪತನವಾಯಿತು. ಕ್ವಾಲಿಫೈಯರ್ 1 ಪಂದ್ಯದಲ್ಲಿ ಇದೇ ಮಂಗಳೂರು ವಿರುದ್ಧ ಅಜೇಯ 99 ರನ್ ಬಾರಿಸಿದ್ದ ನಾಯಕ ದೇವದತ್ ಪಡಿಕಲ್, ಇಂದು ನಡೆದ ಫೈನಲ್ ಪಂದ್ಯದಲ್ಲಿ ಕೇವಲ 10 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ತಂಡದ ಸೋಲಿಗೆ ಇದು ಕೂಡ ಪ್ರಮುಖ ಕಾರಣವಾಯಿತು. ಮತ್ತೊಬ್ಬ ಆರಂಭಿಕ ಮೊಹಮ್ಮದ್ ತಾಹ ಕೂಡ 27 ರನ್​ಗಳಿಗೆ ಸುಸ್ತಾದರು.

ಮಂಕಾದ ಮನೋಹರ್

ಕಾರ್ತಿಕೇಯ ಇನ್ನಿಂಗ್ಸ್ ಕೂಡ 8 ರನ್​ಗಳಿಗೆ ಅಂತ್ಯವಾಯಿತು. ರಿತೇಶ್ 13 ರನ್ ಬಾರಿಸಿದರೆ, ಸ್ಫೋಟಕ ದಾಂಟಿಗ ಅಭಿನವ್ ಮನೋಹರ್ ಕೇವಲ 17 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ಕೆಳಕ್ರಮಾಂಕದಲ್ಲಿ ತಂಡಕ್ಕೆ ರನ್​ಗಳ ಮಳೆ ಹರಿಸುತ್ತಿದ್ದ ಅಭಿನವ್ ಫೈನಲ್ ಪಂದ್ಯದಲ್ಲಿ ಪರಿಣಾಮಕಾರಿಯಾಗಲಿಲ್ಲ. ಆದಾಗ್ಯೂ ತಂಡದ ಪರ ಏಕಾಂಗಿ ಹೋರಾಟ ನೀಡಿದ ಕೆ ಶ್ರೀಜಿತ್ 52 ರನ್​ಗಳ ಇನ್ನಿಂಗ್ಸ್ ಆಡಿದರು. ಇವರ ಆಟದಿಂದಾಗಿ ತಂಡ 8 ವಿಕೆಟ್ ನಷ್ಟಕ್ಕೆ 154 ರನ್ ಕಲೆಹಾಕಿತು.

ಹುಬ್ಬಳ್ಳಿ ಬೌಲರ್​ಗಳ ಎಡವಟ್ಟು

ಇತ್ತ 154 ರನ್​ಗಳ ಗುರಿ ಬೆನ್ನಟ್ಟಿದ ಮಂಗಳೂರು ತಂಡ ಆರಂಭದಲ್ಲಿ ಮುಕ್ತವಾಗಿ ರನ್ ಕಲೆಹಾಕಲು ಸಾಧ್ಯವಾಗಲಿಲ್ಲ. ಆದರೆ ಹುಬ್ಬಳ್ಳಿ ತಂಡದ ಬೌಲರ್​ಗಳು ಮಾಡಿದ ಎಡವಟ್ಟು ಮಂಗಳೂರು ಬ್ಯಾಟರ್​ಗಳಿಗೆ ವರವಾಯಿತು. ಹುಬ್ಬಳ್ಳಿ ತಂಡದ ಸ್ಪಿನ್ನರ್​ಗಳು ನೋ ಬಾಲ್ ಮಾಡುವ ಮೂಲಕ ಆರಂಭಿಕ ಶರತ್​ಗೆ ಜೀವದಾನ ನೀಡಿ ದೊಡ್ಡ ತಪ್ಪು ಮಾಡಿದರು. ಇದು ಮಾತ್ರವಲ್ಲದೆ ವಿಕೆಟ್ ಕೀಪರ್ ಕೂಡ ಶರತ್ ಅವರ ಸುಲಭ ಸ್ಟಂಪ್ ಔಟ್ ಅನ್ನು ಮಿಸ್ ಮಾಡಿದರು. ಇದರ ಲಾಭ ಪಡೆದ ಶರತ್, ಸ್ಫೋಟಕ ಬ್ಯಾಟಿಂಗ್ ಮಾಡಿ ತಂಡವನ್ನು ಸೋಲಿನಿಂದ ಪಾರು ಮಾಡಿದರು.

ಮಂಗಳೂರಿಗೆ ವರವಾದ ಮಳೆ

ಆದಾಗ್ಯೂ ಅರ್ಧಶತಕದಂಚಿನಲ್ಲಿ ಎಡವಿದ ಶರತ್ 49 ರನ್​ಗಳಿಗೆ ಔಟಾದರು. ಮತ್ತೊಬ್ಬ ಆರಂಬಿಕ ಲೋಚನ್ 18 ರನ್​ಗಳಿಗೆ ಪೆವಿಲಿಯನ್‌ ಸೇರಿಕೊಂಡರು. ಕೆಲವೇ ಓವರ್​ಗಳ ಅಂತರದಲ್ಲಿ ಇವರಿಬ್ಬರ ವಿಕೆಟ್ ಉರುಳಿಸುವ ಮೂಲಕ ಹುಬ್ಬಳ್ಳಿ ತಂಡ ಮತ್ತೆ ಮೇಲುಗೈ ಸಾಧಿಸುತ್ತಿರುವಂತೆ ಕಂಡುಬಂತು ಆದರೆ ಆ ವೇಳೆಗೆ ಮಳೆ ಸುರಿಯಲಾರಂಭಿಸಿತು. ಹೀಗಾಗಿ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಬೇಕಾಯಿತು. ಆ ನಂತರ ವಿ ಜಯದೇವನ್ ನಿಯಮದ ಪ್ರಕಾರ ಮಂಗಳೂರು ತಂಡವನ್ನು ವಿಜಯಿ ಎಂದು ಘೋಷಿಸಲಾಯಿತು. ಒಂದು ವೇಳೆ ಹುಬ್ಬಳ್ಳಿ ತಂಡ ಆರಂಭದಿಂದಲೇ ರನ್​ಗಳಿಗೆ ಕಡಿವಾಣ ಹಾಕಿದರೆ, ಅದಕ್ಕೆ ಚಾಂಪಿಯನ್ ಪಟ್ಟ ಒಲಿಯುವ ಸಾಧ್ಯತೆಗಳಿದ್ದವು.

Published On - 10:44 pm, Thu, 28 August 25

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ