AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: 21 ಬೌಂಡರಿ, 136 ರನ್.. ರಣಜಿಯಲ್ಲಿ ಶತಕ ಸಿಡಿಸಿದ ಕ್ರೀಡಾ ಸಚಿವ! ಸೆಮೀಸ್​ಗೆ ಬಂಗಾಳ ಎಂಟ್ರಿ

Ranji Trophy: ಮನೋಜ್ ತಿವಾರಿ ಕೂಡ ಮೊದಲ ಇನಿಂಗ್ಸ್‌ನಲ್ಲಿ 73 ರನ್ ಗಳಿಸಿದ್ದರು. ಬಂಗಾಳದ ಮೊದಲ ಇನ್ನಿಂಗ್ಸ್‌ನಲ್ಲಿ 9 ಬ್ಯಾಟ್ಸ್‌ಮನ್‌ಗಳು 50 ಕ್ಕೂ ಹೆಚ್ಚು ರನ್ ಗಳಿಸಿ ವಿಶ್ವದಾಖಲೆ ಮಾಡಿದರು.

Ranji Trophy: 21 ಬೌಂಡರಿ, 136 ರನ್.. ರಣಜಿಯಲ್ಲಿ ಶತಕ ಸಿಡಿಸಿದ ಕ್ರೀಡಾ ಸಚಿವ! ಸೆಮೀಸ್​ಗೆ ಬಂಗಾಳ ಎಂಟ್ರಿ
ಮನೋಜ್ ತಿವಾರಿ
TV9 Web
| Updated By: ಪೃಥ್ವಿಶಂಕರ|

Updated on:Jun 10, 2022 | 3:55 PM

Share

ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ಮನೋಜ್ ತಿವಾರಿ (Manoj Tiwari) ಮತ್ತೊಮ್ಮೆ ರಣಜಿ ಟ್ರೋಫಿ (Ranji Trophy)ಯಲ್ಲಿ ತಮ್ಮ ಸಾಮರ್ಥ್ಯ ತೋರಿಸಿದ್ದಾರೆ. ಮನೋಜ್ ತಿವಾರಿ ಅವರು ಜಾರ್ಖಂಡ್ ವಿರುದ್ಧ ಎರಡನೇ ಇನ್ನಿಂಗ್ಸ್‌ನಲ್ಲಿ ಶತಕ ಗಳಿಸಿದರು, ಅವರ ಬ್ಯಾಟ್‌ನಿಂದ 136 ರನ್ ಹೊರಬಂದವು. ಮನೋಜ್ ತಿವಾರಿ ಅವರ ಇನ್ನಿಂಗ್ಸ್‌ನಲ್ಲಿ 19 ಬೌಂಡರಿ ಮತ್ತು 2 ಸಿಕ್ಸರ್‌ಗಳು ಸೇರಿದ್ದವು. ಬೆಂಗಾಲ್ ಮತ್ತು ಜಾರ್ಖಂಡ್ ನಡುವಿನ ಈ ಪಂದ್ಯ ಡ್ರಾ ಆಗಿದ್ದು, ಮೊದಲ ಇನಿಂಗ್ಸ್ ಮುನ್ನಡೆ ಆಧಾರದ ಮೇಲೆ ಬೆಂಗಾಲ್ ಸೆಮಿಫೈನಲ್ ಪ್ರವೇಶಿಸಿದೆ.

ಮೊದಲು ಬ್ಯಾಟ್ ಮಾಡಿದ ಪಶ್ಚಿಮ ಬಂಗಾಳ ಮೊದಲ ಇನಿಂಗ್ಸ್​ನಲ್ಲಿ 7 ವಿಕೆಟ್ ನಷ್ಟಕ್ಕೆ 773 ರನ್ ಗಳಿಸಿತು. ಸುದೀಪ್ ಕುಮಾರ್ ಘರಾಮಿ 186 ಮತ್ತು ಅನುಸ್ತಪ್ ಮಜುಂದಾರ್ 117 ರನ್ ಗಳಿಸಿದರು. ಮನೋಜ್ ತಿವಾರಿ ಕೂಡ ಮೊದಲ ಇನಿಂಗ್ಸ್‌ನಲ್ಲಿ 73 ರನ್ ಗಳಿಸಿದ್ದರು. ಬಂಗಾಳದ ಮೊದಲ ಇನ್ನಿಂಗ್ಸ್‌ನಲ್ಲಿ 9 ಬ್ಯಾಟ್ಸ್‌ಮನ್‌ಗಳು 50 ಕ್ಕೂ ಹೆಚ್ಚು ರನ್ ಗಳಿಸಿ ವಿಶ್ವದಾಖಲೆ ಮಾಡಿದರು.

ಮೊದಲ ಇನಿಂಗ್ಸ್‌ನಲ್ಲಿ 186 ರನ್ ಗಳಿಸಿದ ಸುದೀಪ್ ಕುಮಾರ್ ಘರಾಮಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಜಾರ್ಖಂಡ್ ಬಗ್ಗೆ ಮಾತನಾಡುವುದಾದರೆ, ವಿರಾಟ್ ಸಿಂಗ್ ಮೊದಲ ಇನ್ನಿಂಗ್ಸ್‌ನಲ್ಲಿ ಅಜೇಯ 113 ರನ್ ಗಳಿಸಿದರು, ಆದರೆ ತಂಡವು ಕೇವಲ 298 ರನ್‌ಗಳಿಗೆ ಆಲೌಟ್ ಆಯಿತು.

ಇದನ್ನೂ ಓದಿ
Image
IND vs SA: ಅವೇಶ್ ಖಾನ್ ಬೆಂಕಿ ಎಸೆತಕ್ಕೆ ದುಸೇನ್ ಬ್ಯಾಟ್ ಎರಡು ಭಾಗವಾಯ್ತು..! ವಿಡಿಯೋ ನೋಡಿ
Image
ENG vs NZ: ಸೋಲಿನ ಸುಳಿಯಲ್ಲಿರುವ ನ್ಯೂಜಿಲೆಂಡ್​ಗೆ ಆಘಾತ; ನಾಯಕ ವಿಲಿಯಮ್ಸನ್​ಗೆ ಕೊರೊನಾ ಸೋಂಕು

ಬಂಗಾಳ, ಮಧ್ಯಪ್ರದೇಶ, ಮುಂಬೈ ಮತ್ತು ಉತ್ತರ ಪ್ರದೇಶ ತಂಡಗಳು ರಣಜಿ ಟ್ರೋಫಿಯ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿವೆ. ಸೆಮಿಫೈನಲ್ ಪಂದ್ಯಗಳು ಜೂನ್ 14 ರಿಂದ ನಡೆಯಲಿದ್ದು, ಜೂನ್ 14 ರಂದು ಮೊದಲ ಸೆಮಿಫೈನಲ್ ಬಂಗಾಳ ಮತ್ತು ಮಧ್ಯಪ್ರದೇಶ ನಡುವೆ ನಡೆಯಲಿದೆ. ಮತ್ತೊಂದೆಡೆ ಎರಡನೇ ಸೆಮಿಫೈನಲ್‌ನಲ್ಲಿ ಮುಂಬೈ ಮತ್ತು ಉತ್ತರ ಪ್ರದೇಶ ಪೈಪೋಟಿ ನಡೆಸಲಿವೆ.

ಪ್ರಸಕ್ತ ಸಾಲಿನ ರಣಜಿ ಟ್ರೋಫಿಯಲ್ಲಿ ಮುಂಬೈ ಆಟಗಾರರು ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಮೇಲುಗೈ ಸಾಧಿಸಿದ್ದಾರೆ. ಶಮ್ಸ್ ಮುಲಾನಿ 37 ವಿಕೆಟ್ ಪಡೆದಿದ್ದಾರೆ. ಮತ್ತೊಂದೆಡೆ, ಸರ್ಫರಾಜ್ ಖಾನ್ 140 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 704 ರನ್ ಗಳಿಸಿದ್ದಾರೆ.

Published On - 2:48 pm, Fri, 10 June 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್