Ranji Trophy: ಸಂಕಷ್ಟದಲ್ಲಿದ್ದ ತಂಡಕ್ಕೆ ಕ್ರೀಡಾ ಸಚಿವರ ನೆರವು; ರಣಜಿ ಸೆಮಿಫೈನಲ್​ನಲ್ಲಿ ಮನೋಜ್ ಅಬ್ಬರ

Ranji Trophy: ಇದಕ್ಕೂ ಮುನ್ನ ಮನೋಜ್ ತಿವಾರಿ ಕ್ವಾರ್ಟರ್ ಫೈನಲ್‌ನಲ್ಲಿ ಜಾರ್ಖಂಡ್ ವಿರುದ್ಧ ಎರಡನೇ ಇನ್ನಿಂಗ್ಸ್‌ನಲ್ಲಿ 136 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದ್ದರು.

Ranji Trophy: ಸಂಕಷ್ಟದಲ್ಲಿದ್ದ ತಂಡಕ್ಕೆ ಕ್ರೀಡಾ ಸಚಿವರ ನೆರವು; ರಣಜಿ ಸೆಮಿಫೈನಲ್​ನಲ್ಲಿ ಮನೋಜ್ ಅಬ್ಬರ
ಮನೋಜ್ ತಿವಾರಿ
Follow us
| Updated By: ಪೃಥ್ವಿಶಂಕರ

Updated on: Jun 15, 2022 | 7:15 PM

ರಣಜಿ ಟ್ರೋಫಿಯಲ್ಲಿ ಪಶ್ಚಿಮ ಬಂಗಾಳದ ಕ್ರೀಡಾ ಸಚಿವ (West Bengal Sports Minister) ಮನೋಜ್ ತಿವಾರಿ (Manoj Tiwary) ಅಬ್ಬರ ಮುಂದುವರಿದಿದೆ. ರಣಜಿ ಟ್ರೋಫಿ (Ranji Trophy)ಯ ಕ್ವಾರ್ಟರ್ ಫೈನಲ್ ಬಳಿಕ ಇದೀಗ ಸೆಮಿಫೈನಲ್​ನಲ್ಲೂ ಶತಕದ ಸನಿಹಕ್ಕೆ ಬಂದಿದ್ದಾರೆ. ಮಧ್ಯಪ್ರದೇಶ ವಿರುದ್ಧದ ಸೆಮಿಫೈನಲ್‌ನಲ್ಲಿ ತಿವಾರಿ ಅದ್ಭುತ 84 ರನ್ ಗಳಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದ್ದಾರೆ. ಜೊತೆಗೆ ಎರಡನೇ ದಿನದಾಟದ ಅಂತ್ಯಕ್ಕೆ 84 ರನ್ ಗಳಿಸಿ ಅಜೇಯರಾಗಿ ಉಳಿದರು. ಮೊದಲು ಬ್ಯಾಟಿಂಗ್ ಮಾಡಿದ ಮಧ್ಯಪ್ರದೇಶ ಮೊದಲ ಇನಿಂಗ್ಸ್‌ನಲ್ಲಿ 341 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಬೆಂಗಾಲ್ ತಂಡ ಅತ್ಯಂತ ಕಳಪೆ ಆರಂಭ ಮಾಡಿತ್ತು. ಅಲ್ಲದೆ ಬಂಗಾಳ ಶೂನ್ಯಕ್ಕೆ 2 ವಿಕೆಟ್ ಕಳೆದುಕೊಂಡಿತು.

ಮನೋಜ್ ಮತ್ತು ಶಹಬಾಜ್ ನಡುವೆ ದೊಡ್ಡ ಪಾಲುದಾರಿಕೆ

ಇದನ್ನೂ ಓದಿ
Image
ENG vs NZ: ಕಿವೀಸ್ ಮಣಿಸಿದ ಆಂಗ್ಲರಿಗೆ ದಂಡದ ಬರೆ ಎಳೆದ ಐಸಿಸಿ! ಬೆನ್ ಸ್ಟೋಕ್ಸ್ ಬಳಗಕ್ಕೆ ಗೆಲುವಿನಲ್ಲೂ ನಿರಾಸೆ
Image
IND vs SA: 3ನೇ ಟಿ20 ಪಂದ್ಯದ ಗೆಲುವಿನೊಂದಿಗೆ ವೃತ್ತಿಜೀವನದ ವಿಶೇಷ ಶತಕ ಸಿಡಿಸಿದ ರಿಷಭ್ ಪಂತ್..!
Image
IND vs SA: 69 ಬ್ಯಾಟರ್​ಗಳನ್ನು ಹಿಂದಿಕ್ಕಿ ಟಿ20 ರ‍್ಯಾಂಕಿಂಗ್​ನಲ್ಲಿ ಟಾಪ್​ 10ರೊಳಗೆ ಸ್ಥಾನ ಪಡೆದ ಇಶಾನ್ ಕಿಶನ್

ಇದಾದ ಬಳಿಕವೂ ವಿಕೆಟ್ ಪತನದ ಪ್ರಕ್ರಿಯೆ ಮುಂದುವರಿದಿದ್ದು, ಬಂಗಾಳ ಕೇವಲ 54 ರನ್ ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು. ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ಕ್ರೀಡಾ ಸಚಿವರ ಬಲವಾದ ಬೆಂಬಲ ಸಿಕ್ಕಿತು. ತಿವಾರಿ, ಶಹಬಾಜ್ ಅಹ್ಮದ್ ಅವರೊಂದಿಗೆ ಎರಡನೇ ದಿನ ಸ್ಟಂಪ್ ತನಕ ಕ್ರೀಸ್‌ನಲ್ಲಿ ಉಳಿದು ಬಂಗಾಳದ ಸ್ಕೋರ್ ಅನ್ನು 197 ರನ್‌ಗಳಿಗೆ ಕೊಂಡೊಯ್ದರು. ಮನೋಜ್ ತಿವಾರಿ 182 ಎಸೆತಗಳಲ್ಲಿ 9 ಬೌಂಡರಿಗಳ ನೆರವಿನಿಂದ 84 ರನ್ ಗಳಿಸಿದರು. ಅದೇ ಸಮಯದಲ್ಲಿ, ಅಹ್ಮದ್ 149 ಎಸೆತಗಳಲ್ಲಿ 72 ರನ್ ಗಳಿಸಿದ್ದಾರೆ.

ಕ್ವಾರ್ಟರ್ ಫೈನಲ್‌ನಲ್ಲಿ 136 ರನ್

ಇದಕ್ಕೂ ಮುನ್ನ ಮನೋಜ್ ತಿವಾರಿ ಕ್ವಾರ್ಟರ್ ಫೈನಲ್‌ನಲ್ಲಿ ಜಾರ್ಖಂಡ್ ವಿರುದ್ಧ ಎರಡನೇ ಇನ್ನಿಂಗ್ಸ್‌ನಲ್ಲಿ 136 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದ್ದರು. ಅವರು 19 ಬೌಂಡರಿ ಮತ್ತು 2 ಸಿಕ್ಸರ್‌ಗಳನ್ನು ಬಾರಿಸಿದರು. ಬೆಂಗಾಲ್ ಮತ್ತು ಜಾರ್ಖಂಡ್ ನಡುವೆ ನಡೆದ ಕ್ವಾರ್ಟರ್-ಫೈನಲ್ ಡ್ರಾದಲ್ಲಿ ಕೊನೆಗೊಂಡಿತು. ಬೆಂಗಾಲ್ ಮೊದಲ ಇನ್ನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ಸೆಮಿಫೈನಲ್ ಪ್ರವೇಶಿಸಿತು. ಅಲ್ಲದೆ ಮನೋಜ್ ಮೊದಲ ಇನ್ನಿಂಗ್ಸ್‌ನಲ್ಲಿ 73 ರನ್ ಗಳಿಸಿದ್ದರು.

ಇದನ್ನೂ ಓದಿ:Ranji Trophy 2022 Knockouts: ಬೆಂಗಳೂರಿನಲ್ಲಿ ಜೂನ್ 6 ರಿಂದ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್! ವೇಳಾಪಟ್ಟಿ ಹೀಗಿದೆ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ