AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಮಳೆಯಿಂದಾಗಿ ಭಾರತ- ಕಿವೀಸ್ ನಡುವಿನ ಮೊದಲ ಟಿ20 ಪಂದ್ಯ ರದ್ದು..!

IND vs NZ: ಇಂದು ವೆಲ್ಲಿಂಗ್‌ಟನ್‌ನಲ್ಲಿ ನಡೆಯಬೇಕಾಗಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾಗಿದೆ.

IND vs NZ: ಮಳೆಯಿಂದಾಗಿ ಭಾರತ- ಕಿವೀಸ್ ನಡುವಿನ ಮೊದಲ ಟಿ20 ಪಂದ್ಯ ರದ್ದು..!
ಮಳೆಯಿಂದ ಪಂದ್ಯ ರದ್ದು
TV9 Web
| Edited By: |

Updated on:Nov 18, 2022 | 2:04 PM

Share

ಇಂದು ವೆಲ್ಲಿಂಗ್‌ಟನ್‌ನಲ್ಲಿ ನಡೆಯಬೇಕಾಗಿದ್ದ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾಗಿದೆ. ಭಾರೀ ಮಳೆಯಿಂದಾಗಿ ಈ ಪಂದ್ಯದ ಟಾಸ್ ಕೂಡ ನಡೆಯಲಿಲ್ಲ. ಸುದೀರ್ಘ ಕಾಯುವಿಕೆಯ ನಂತರ ಅಂಪೈರ್​ಗಳು ಪಂದ್ಯವನ್ನು ರದ್ದುಗೊಳಿಸಲು ನಿರ್ಧರಕ್ಕೆ ಬಂದಿದ್ದಾರೆ. ವೆಲ್ಲಿಂಗ್ಟನ್​ನಲ್ಲಿ ಟಾಸ್ ನಡೆಯುವ ವೇಳೆಗೆ ಮಳೆ ಸುರಿಯಲಾರಂಭಿಸಿತು. ಆಗ ಆರಂಭವಾದ ಮಳೆ ನಿಲ್ಲುವ ಮುನ್ಸೂಚನೆಯನ್ನೇ ನೀಡಲಿಲ್ಲ. ಹೀಗಾಗಿ ಪಂದ್ಯವನ್ನು ರದ್ದುಗೊಳಿಸಲಾಗಿದೆ.

ಒಂದು ಹಂತದಲ್ಲಿ ಮಳೆ ಕೊಂಚ ವಿರಾಮ ತೆಗೆದುಕೊಂಡಿದ್ದರಿಂದ ಆಟ ಶುರುವಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಮತ್ತೆ ಸುರಿಯಲಾರಂಭಿಸಿದ ಮಳೆ ಎಲ್ಲ ನಿರೀಕ್ಷೆಗಳನ್ನು ಧ್ವಂಸ ಮಾಡಿತು. ಹಾಗೆಯೇ ಬಿಡುವಿಲ್ಲದ ಸುರಿದ ಭಾರೀ ಮಳೆಯಿಂದಾಗಿ ಕ್ರೀಡಾಂಗಣದ ಹೊರಭಾಗದ ಹಲವೆಡೆ ನೀರು ತುಂಬಿತ್ತು.

ಟಿ20 ವಿಶ್ವಕಪ್‌ನಲ್ಲಿ ಉಭಯ ತಂಡಗಳ ಪಯಣ ಸೆಮಿಫೈನಲ್‌ನಲ್ಲಿ ಕೊನೆಗೊಂಡಿದ್ದರಿಂದ ಎಲ್ಲರ ಕಣ್ಣುಗಳು ಈ ಮೊದಲ ಟಿ20 ಪಂದ್ಯದ ಮೇಲಿತ್ತು. ಟಿ20 ವಿಶ್ವಕಪ್​ನಲ್ಲಿ ನ್ಯೂಜಿಲೆಂಡ್, ಪಾಕಿಸ್ತಾನದ ಎದುರು ಸೋತು ಪಂದ್ಯಾವಳಿಯಿಂದ ಹೊರಬಿದ್ದರೆ, ಟೀಂ ಇಂಡಿಯಾ, ಇಂಗ್ಲೆಂಡ್ ಎದುರು 10 ವಿಕೆಟ್‌ಗಳಿಂದ ಸೋತು ಮುಜುಗರದೊಂದಿಗೆ ವಿಶ್ವಕಪ್​ಗೆ ವಿದಾಯ ಹೇಳಿತ್ತು.

ಯುವಕರಿಗೆ ಅವಕಾಶ

ಈ ಪ್ರವಾಸದಲ್ಲಿ ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಅವರಿಗೆ ವಿಶ್ರಾಂತಿ ನೀಡಿ ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಶುಭಮನ್ ಗಿಲ್, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್​ಗೆ ಈ ಪಂದ್ಯದಲ್ಲಿ ಅವಕಾಶ ಸಿಗುವ ನಿರೀಕ್ಷೆ ಇತ್ತು. ಅಲ್ಲದೆ ಗಿಲ್ ಕೂಡ ಟಿ20 ತಂಡದಲ್ಲಿ ಚೊಚ್ಚಲ ಪ್ರವೇಶಕ್ಕಾಗಿ ಕಾಯುತ್ತಿದ್ದರು. ಆದರೆ ಮಳೆಯು ಅವರ ಕಾಯುವಿಕೆಯನ್ನು ಮತ್ತಷ್ಟು ವಿಸ್ತರಿಸಿದೆ. ಇದೀಗ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಸರಣಿಯ ಎರಡನೇ ಟಿ20 ಪಂದ್ಯ ನವೆಂಬರ್ 20 ರಂದು ನಡೆಯಲಿದೆ.

ಟಿ20 ಸರಣಿಗೆ ಉಭಯ ತಂಡಗಳು

ನ್ಯೂಜಿಲೆಂಡ್ ಟಿ20 ತಂಡ: ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಲಾಕಿ ಫರ್ಗುಸನ್, ಡ್ಯಾರಿಲ್ ಮಿಚೆಲ್, ಆಡಮ್ ಮಿಲ್ನೆ, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಬ್ಲೇರ್ ಟಿಕ್ನರ್.

ಟಿ20 ಸರಣಿಗೆ ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರಿಷಬ್ ಪಂತ್ (ಉಪನಾಯಕ/ ವಿಕೆಟ್‌ಕೀಪರ್‌), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್‌), ವಾಷಿಂಗ್ಟನ್‌ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್.

Published On - 1:50 pm, Fri, 18 November 22

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ