Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಯಾಂಕ್ ಶತಕ, ಶ್ರೇಯಸ್ ಸ್ಪಿನ್ ಮ್ಯಾಜಿಕ್; ರಣಜಿಯಲ್ಲಿ ಕರ್ನಾಟಕಕ್ಕೆ ಮೊದಲ ಗೆಲುವು

Ranji Trophy 2024: ಕರ್ನಾಟಕ ರಣಜಿ ತಂಡ ಬಿಹಾರ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಮಯಾಂಕ್ ಅಗರ್ವಾಲ್ ಶತಕ (105 ರನ್) ಮತ್ತು ಶ್ರೇಯಸ್ ಗೋಪಾಲ್ ಅವರ ಅದ್ಭುತ ಬೌಲಿಂಗ್ (8 ವಿಕೆಟ್‌ಗಳು) ಗೆಲುವಿಗೆ ಪ್ರಮುಖ ಕಾರಣ. ಬಿಹಾರ ತಂಡದ ಮೊದಲ ಇನ್ನಿಂಗ್ಸ್ 143 ರನ್‌ ಮತ್ತು ಎರಡನೇ ಇನ್ನಿಂಗ್ಸ್ 212 ರನ್‌ಗಳಿಗೆ ಕುಸಿದಿತು. ಈ ಗೆಲುವಿನೊಂದಿಗೆ ಕರ್ನಾಟಕ ತಂಡ 8 ಅಂಕಗಳೊಂದಿಗೆ ಸಿ ಗುಂಪಿನಲ್ಲಿ ಎರಡನೇ ಸ್ಥಾನಕ್ಕೆ ಏರಿದೆ.

ಮಯಾಂಕ್ ಶತಕ, ಶ್ರೇಯಸ್ ಸ್ಪಿನ್ ಮ್ಯಾಜಿಕ್; ರಣಜಿಯಲ್ಲಿ ಕರ್ನಾಟಕಕ್ಕೆ ಮೊದಲ ಗೆಲುವು
ಕರ್ನಾಟಕ ತಂಡ
Follow us
ಪೃಥ್ವಿಶಂಕರ
|

Updated on: Oct 29, 2024 | 9:39 PM

ಪ್ರಸ್ತುತ ನಡೆಯುತ್ತಿರುವ ರಣಜಿಯ ಟ್ರೋಫಿಯ ಮೊದಲ ಸುತ್ತಿನಲ್ಲಿ ಕೊನೆಗೂ ಕರ್ನಾಟಕ ತಂಡ ತನ್ನ ಗೆಲುವಿನ ಖಾತೆ ತೆರೆದಿದೆ. ಬಿಹಾರದ ಮೊಯಿನ್-ಉಲ್-ಹಕ್ ಸ್ಟೇಡಿಯಂನಲ್ಲಿ ನಡೆದ ಕರ್ನಾಟಕ ಹಾಗೂ ಬಿಹಾರ ನಡುವಿನ ಸಿ ಗುಂಪಿನ ಪಂದ್ಯದಲ್ಲಿ ಆತಿಥೇಯ ಬಿಹಾರ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿದ ಕರ್ನಾಟಕ ತಂಡ ಪ್ರಸಕ್ತ ಸೀಸನ್​ನಲ್ಲಿ ಮೊದಲ ಗೆಲುವನ್ನು ದಾಖಲಿಸಿತು. ತಂಡದ ಪರ ಬ್ಯಾಟಿಂಗ್​ನಲ್ಲಿ ಮಿಂಚಿದ ಮಯಾಂಕ್ ಅಗರ್ವಾಲ್ ಶತಕದ ಇನ್ನಿಂಗ್ಸ್ ಆಡಿದರೆ, ಬೌಲಿಂಗ್‌ನಲ್ಲಿ ಎರಡೂ ಇನ್ನಿಂಗ್ಸ್​ಗಳಲ್ಲಿ ಕಮಾಲ್ ಮಾಡಿದ ಸ್ಪಿನ್ನರ್ ಶ್ರೇಯಸ್ ಗೋಪಾಲ್ ಒಟ್ಟು 8 ವಿಕೆಟ್ ಕಬಳಿಸಿದರು. ಈ ಗೆಲುವಿನೊಂದಿಗೆ ಕರ್ನಾಟಕ ತಂಡ ಆಡಿರುವ ಮೂರು ಪಂದ್ಯಗಳಲ್ಲಿ 1 ಗೆಲುವಿನೊಂದಿಗೆ 8 ಅಂಕ ಕಲೆಹಾಕಿ ಸಿ ಗುಂಪಿನಲ್ಲಿ ಎರಡನೇ ಸ್ಥಾನಕ್ಕೇರಿದೆ.

143 ರನ್​ಗಳಿಗೆ ಆಲೌಟ್

ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಬಿಹಾರ ತಂಡ ಮೊದಲ ಇನ್ನಿಂಗ್ಸ್​ನಲ್ಲಿ 143 ರನ್​ಗಳಿಗೆ ಆಲೌಟ್ ಆಯಿತು. ತಂಡದ ಪರ ಶರ್ಮನ್ ನಿಗ್ರೋಧ್ ಅತ್ಯಧಿಕ 60 ರನ್​ಗಳ ಇನ್ನಿಂಗ್ಸ್ ಆಡಿದರೆ, ಬಿಪಿನ್ ಸೌರಭ್ 31 ರನ್ ಕಲೆಹಾಕಿದರು. ಕರ್ನಾಟಕ ಪರ ಶ್ರೇಯಸ್ ಗೋಪಾಲ್ 4 ವಿಕೆಟ್ ಪಡೆದರೆ, ಮೊಹ್ಸಿನ್ ಖಾನ್ 3 ವಿಕೆಟ್ ಪಡೆದರು.

ಮಯಾಂಕ್ ಶತಕದ ಇನ್ನಿಂಗ್ಸ್

ಇತ್ತ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡಕ್ಕೆ ನಾಯಕನ ಶತಕದ ಇನ್ನಿಂಗ್ಸ್ ಪ್ರಬಲ ಮುನ್ನಡೆ ಸಾಧಿಸುವಂತೆ ಮಾಡಿತು. ತಮ್ಮ ಇನ್ನಿಂಗ್ಸ್​ನಲ್ಲಿ 131 ಎಸೆತಗಳನ್ನು ಎದುರಿಸಿ ಮಯಾಂಕ್ 12 ಬೌಂಡರಿಗಳ ಸಹಿತ 105 ರನ್ ಗಳಿಸಿ ಔಟಾದರು. ನಾಯಕನಿಗೆ ಸಾಥ್ ನೀಡಿದ ಮನಿಶ್ ಪಾಂಡೆ ಕೂಡ 56 ರನ್​ಗಳ ಅರ್ಧಶತಕದ ಇನ್ನಿಂಗ್ಸ್ ಆಡಿದರೆ, ಅಭಿನವ್ ಮನೋಹರ್ 37 ರನ್​ಗಳ ಕಾಣಿಕೆ ನೀಡಿದರು. ಅಂತಿಮವಾಗಿ ಕರ್ನಾಟಕ ತಂಡ ಮೊದಲ ಇನ್ನಿಂಗ್ಸ್​ನಲ್ಲಿ 287 ರನ್ ಕಲೆಹಾಕಿ, 140 ರನ್​ಗಳ ಮುನ್ನಡೆ ಪಡೆದುಕೊಂಡಿತು.

ಕರ್ನಾಟಕಕ್ಕೆ 8 ವಿಕೆಟ್ ಜಯ

ಇನ್ನಿಂಗ್ಸ್ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಬಿಹಾರ ತಂಡ 212 ರನ್​ಗಳಿಗೆ ತನ್ನ ಎರಡನೇ ಇನ್ನಿಂಗ್ಸ್ ಮುಗಿಸಿ ಕರ್ನಾಟಕದ ಗೆಲುವಿಗೆ 69 ರನ್​ಗಳ ಗುರಿ ನೀಡಿತು. ಎರಡನೇ ಇನ್ನಿಂಗ್ಸ್​ನಲ್ಲಿ ಸಕೀಬುಲ್ ಗನಿ 130 ರನ್​ಗಳ ಶತಕದ ಇನ್ನಿಂಗ್ಸ್ ಆಡಿದರೆ, ಬಾಬುಲ್ ಕುಮಾರ್ 44 ರನ್​ಗಳ ಕಾಣಿಕೆ ನೀಡಿದರು. ಇತ್ತ ಕರ್ನಾಟಕದ ಪರ ಶ್ರೇಯಸ್ ಗೋಪಾಲ್ ಮತ್ತೆ 4 ವಿಕೆಟ್ ಪಡೆದರೆ, ವೈಶಾಖ್ ವಿಜಯ್​ಕುಮಾರ್ 3 ವಿಕೆಟ್ ಪಡೆದರು. ಅಂತಿಮವಾಗಿ 69 ರನ್​ಗಳ ಗುರಿ ಬೆನ್ನಟ್ಟಿದ ಕರ್ನಾಟಕ 2 ವಿಕೆಟ್ ಕಳೆದುಕೊಂಡು ಜಯದ ನಗೆಬೀರಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ
ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ