AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mayank Agarwal: ವಿಷಕಾರಿ ದ್ರವ ಸೇವನೆ: 48 ಗಂಟೆಗಳವರೆಗೆ ಮಯಾಂಕ್​ಗೆ ಮಾತನಾಡಲಾಗುವುದಿಲ್ಲ

Mayank Agarwal: ಫೆಬ್ರವರಿ 2 ರಿಂದ ಶುರುವಾಗಲಿರುವ ರೈಲ್ವೇಸ್ ವಿರುದ್ಧದ ಪಂದ್ಯದಿಂದ ಮಯಾಂಕ್ ಅಗರ್ವಾಲ್ ಹೊರಗುಳಿದಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆದ ಬಳಿಕ ಅವರು ಬೆಂಗಳೂರಿಗೆ ತೆರಳಲಿದ್ದಾರೆ. ಹೀಗಾಗಿ ಕರ್ನಾಟಕ ತಂಡವನ್ನು ಯುವ ಆಟಗಾರ ನಿಕಿನ್ ಜೋಸ್ ಮುನ್ನಡೆಸುವ ಸಾಧ್ಯತೆಯಿದೆ.

Mayank Agarwal: ವಿಷಕಾರಿ ದ್ರವ ಸೇವನೆ: 48 ಗಂಟೆಗಳವರೆಗೆ ಮಯಾಂಕ್​ಗೆ ಮಾತನಾಡಲಾಗುವುದಿಲ್ಲ
Mayank Agarwal
TV9 Web
| Updated By: ಝಾಹಿರ್ ಯೂಸುಫ್|

Updated on: Jan 31, 2024 | 3:23 PM

Share

ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ (Mayank Agarwal) ವಿಷಪೂರಿತ ದ್ರವ ಸೇವಿಸಿದ್ದು, ಹೀಗಾಗಿ ಮುಂದಿನ 48 ಗಂಟೆಗಳ ಕಾಲ ಅವರಿಗೆ ಮಾತನಾಡಲು ಸಾಧ್ಯವಿಲ್ಲ ಎಂದು ವರದಿಯಾಗಿದೆ. ರಣಜಿ ಪಂದ್ಯವಾಡಲು ತ್ರಿಪುರದ ಅಗರ್ತಲದಿಂದ ಸೂರತ್​ಗೆ ತೆರಳಬೇಕಿದ್ದ ವಿಮಾನದಲ್ಲಿದ್ದ ಇರಿಸಲಾಗಿದ್ದ ವಿಷಕಾರಿ ದ್ರವವನ್ನು ಮಯಾಂಕ್ ನೀರು ಎಂದು ಸೇವಿಸಿದ್ದರು. ಇದರ ಬೆನ್ನಲ್ಲೇ ಅಸ್ವಸ್ಥಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಇದೀಗ ಅವರು ಚೇತರಿಸಿಕೊಂಡಿದ್ದಾರೆ. ಇದಾಗ್ಯೂ ಅವರ ಬಾಯಯಲ್ಲಿ ಉರಿ ಊತ ಮತ್ತು ಹುಣ್ಣುಗಳು ಕಾಣಿಸಿಕೊಂಡಿದ್ದು, ಹೀಗಾಗಿ ಮುಂದಿನ 48 ಗಂಟೆಗಳ ಕಾಲ ಅವರಿಗೆ ಮಾತನಾಡಲು ಸಾಧ್ಯವಾಗುವುದಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಏನಿದು ಘಟನೆ?

ತ್ರಿಪುರ ವಿರುದ್ಧದ ರಣಜಿ ಪಂದ್ಯದ ಬಳಿಕ ಕರ್ನಾಟಕ ತಂಡ ತನ್ನ ಮುಂದಿನ ಪಂದ್ಯವಾಡಲು ಗುಜರಾತ್​ಗೆ ತೆರಳಬೇಕಿತ್ತು. ಮಯಾಂಕ್ ಅಗರ್ವಾಲ್ ಸೇರಿದಂತೆ ಕರ್ನಾಟಕ ತಂಡದ ಆಟಗಾರರು ಸೂರತ್​ಗೆ ತೆರಳಲು ಇಂಡಿಗೋ ವಿಮಾನ ಹತ್ತಿದ್ದರು. ಈ ವೇಳೆ ವಿಮಾನದಲ್ಲಿ ಇಡಲಾಗಿದ್ದ ವಿಷಕಾರಿ ದ್ರವ ಪದಾರ್ಥವನ್ನು ನೀರು ಎಂದು ಮಯಾಂಕ್ ಅಗರ್ವಾಲ್ ಕುಡಿದಿದ್ದಾರೆ.

ಇದರ ಬೆನ್ನಲ್ಲೇ ಅವರ ಗಂಟಲಿನಲ್ಲಿ ಉರಿಯ ಅನುಭವವಾಗಿದೆ. ಇದರಿಂದ ಅಸ್ವಸ್ಥಗೊಂಡ ಅವರನ್ನು ಕೂಡಲೇ ಎಎಲ್​ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಪರಿಶೀಲಿಸಿದಾಗ ಅವರ ಬಾಯಲ್ಲಿ ಊತ ಹಾಗೂ ಸುಟ್ಟು ಗಾಯಗಳು ಕಂಡು ಬಂದಿದೆ ಎಂದು ವರದಿಯಾಗಿದೆ.

ವೈದ್ಯಕೀಯ ರಿಪೋರ್ಟ್ ಬೆನ್ನಲ್ಲೇ ಇದೀಗ ಮಯಾಂಕ್ ಅಗರ್ವಾಲ್ ತನ್ನ ಮ್ಯಾನೇಜರ್  NCCPS ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ನಾವು ತನಿಖೆಯನ್ನು ಕೈಗೆತ್ತಿಕೊಳ್ಳಲಿದ್ದೇವೆ ಎಂದು ಪಶ್ಚಿಮ ತ್ರಿಪುರ ಎಸ್​ಪಿ ಕಿರಣ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: IND vs ENG: 2ನೇ ಟೆಸ್ಟ್​ಗೆ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಹೆಸರಿಸಿದ ಹರ್ಭಜನ್ ಸಿಂಗ್

ಮಾಯಾಂಕ್ ಅಲಭ್ಯ:

ಫೆಬ್ರವರಿ 2 ರಿಂದ ಶುರುವಾಗಲಿರುವ ರೈಲ್ವೇಸ್ ವಿರುದ್ಧದ ಪಂದ್ಯದಿಂದ ಮಯಾಂಕ್ ಅಗರ್ವಾಲ್ ಹೊರಗುಳಿದಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆದ ಬಳಿಕ ಅವರು ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಕರ್ನಾಟಕ ತಂಡದ ಮ್ಯಾನೇಜರ್ ರಮೇಶ್ ತಿಳಿಸಿದ್ದಾರೆ. ಹೀಗಾಗಿ ಕರ್ನಾಟಕ ತಂಡದ ಮುಂದಿನ ಪಂದ್ಯಗಳಲ್ಲಿ ಮಯಾಂಕ್ ಅಗರ್ವಾಲ್ ಕಾಣಿಸಿಕೊಳ್ಳುವುದು ಅನುಮಾನ. ಅವರ ಅನುಪಸ್ಥಿತಿಯಲ್ಲಿ ಕರ್ನಾಟಕ ತಂಡವನ್ನು ಯುವ ಆಟಗಾರ ನಿಕಿನ್ ಜೋಸ್ ಮುನ್ನಡೆಸುವ ಸಾಧ್ಯತೆಯಿದೆ.

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ