AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ- ಪಾಕ್ ಪಂದ್ಯ ವೀಕ್ಷಿಸಲು ತೆರಳಿದ್ದ ಮುಂಬೈ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಅಮೋಲ್ ಕಾಳೆ ನಿಧನ

MCA president Amol Kale: ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯವನ್ನು ವೀಕ್ಷಿಸಲು ಅಮೋಲ್ ಕಾಳೆ ಭಾನುವಾರ ನ್ಯೂಯಾರ್ಕ್‌ಗೆ ತೆರಳಿದ್ದರು. ಪಂದ್ಯ ವೀಕ್ಷಿಸಿದ ಬಳಿಕ ತಮ್ಮ ಸಹೋದ್ಯೋಗಿಗಳೊಂದಿಗೆ ಕ್ರೀಡಾಂಗಣದಿಂದ ವಾಪಸ್ಸಾಗುವ ವೇಳೆ ಅವರಿಗೆ ಹೃದಯ ಸ್ತಂಭನದಿಂದಾಗಿ ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ.

ಭಾರತ- ಪಾಕ್ ಪಂದ್ಯ ವೀಕ್ಷಿಸಲು ತೆರಳಿದ್ದ ಮುಂಬೈ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಅಮೋಲ್ ಕಾಳೆ ನಿಧನ
ಅಮೋಲ್ ಕಾಳೆ
ಪೃಥ್ವಿಶಂಕರ
|

Updated on:Jun 10, 2024 | 7:29 PM

Share

ಭಾರತ ಕ್ರಿಕೆಟ್​ಗೆ ಆಘಾತ ಎದುರಾಗಿದೆ. ಮುಂಬೈ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಅಮೋಲ್ ಕಾಳೆ (MCA president Amol Kale) ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಮಾಹಿತಿ ಪ್ರಕಾರ, ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಟಿ20 ವಿಶ್ವಕಪ್ (T20 World Cup 2024) ಪಂದ್ಯವನ್ನು ವೀಕ್ಷಿಸಲು ಅಮೋಲ್ ಕಾಳೆ ಭಾನುವಾರ ನ್ಯೂಯಾರ್ಕ್‌ಗೆ ತೆರಳಿದ್ದರು. ಪಂದ್ಯ ವೀಕ್ಷಿಸಿದ ಬಳಿಕ ತಮ್ಮ ಸಹೋದ್ಯೋಗಿಗಳೊಂದಿಗೆ ಕ್ರೀಡಾಂಗಣದಿಂದ ವಾಪಸ್ಸಾಗುವ ವೇಳೆ ಅವರಿಗೆ ಹೃದಯ ಸ್ತಂಭನವಾಗಿ (Cardiac Arrest) ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ.

ಖಚಿತಪಡಿಸಿದ ಜಿತೇಂದ್ರ ಅಹ್ವಾದ್

ಮಹಾರಾಷ್ಟ್ರದ ವಿರೋಧ ಪಕ್ಷದ ಉಪನಾಯಕ ಜಿತೇಂದ್ರ ಅಹ್ವಾದ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ಮುಂಬೈ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಅಮೋಲ್ ಕಾಳೆ ಉತ್ತಮ ಸಂಘಟಕ ಮತ್ತು ಕ್ರಿಕೆಟ್ ಪ್ರೇಮಿಯಾಗಿದ್ದರು. ಜಗತ್ತಿಗೆ ವಿದಾಯ ಹೇಳುವ ವಯಸ್ಸು ನಿಮಗಾಗಿರಲಿಲ್ಲ. ಇದು ನನಗೆ ವೈಯಕ್ತಿಕ ನಷ್ಟವಾಗಿದೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

2 ವರ್ಷಗಳ ಹಿಂದೆ ಎಂಸಿಎ ಅಧ್ಯಕ್ಷರಾಗಿ ಆಯ್ಕೆ

ಸಂದೀಪ್ ಪಾಟೀಲ್ ನಂತರ ಅಮೋಲ್ ಕಾಳೆ ಎಂಸಿಎ ಅಧ್ಯಕ್ಷರಾಗಿ ಅಕ್ಟೋಬರ್ 2022 ರಲ್ಲಿ ಆಯ್ಕೆಯಾಗಿದ್ದರು. ಅವರ ಆಡಳಿತಾವಧಿಯಲ್ಲಿ ಮುಂಬೈ ಕ್ರಿಕೆಟ್ ಅಸೋಸಿಯೇಷನ್‌ನಲ್ಲಿ ಹಲವಾರು ಕ್ರಾಂತಿಕಾರಿ ಬದಲಾವಣೆಗಳನ್ನು ತರಲಾಗಿತ್ತು. ಮುಂದಿನ ಅವಧಿಯಿಂದ ಮುಂಬೈ ಹಿರಿಯ ಪುರುಷರ ತಂಡದ ಆಟಗಾರರ ಪಂದ್ಯ ಶುಲ್ಕವನ್ನು ದ್ವಿಗುಣಗೊಳಿಸುವ ನಿರ್ಧಾರ ಕೂಡ ಇದರಲ್ಲಿ ಒಂದಾಂಗಿತ್ತು. ಇದರರ್ಥ, ಪುರುಷರ ತಂಡದ ಆಟಗಾರರಿಗೆ ಬಿಸಿಸಿಐ ನೀಡುವ ಪಂದ್ಯ ಶುಲ್ಕಕ್ಕೆ ಸಮನಾದ ಪಂದ್ಯ ಶುಲ್ಕವನ್ನು ಮುಂಬೈ ಆಟಗಾರರು ಪಡೆಯಲಿದ್ದಾರೆ. ಅಮೋಲ್ ಕಾಳೆ ಅವರ ಈ ನಿರ್ಧಾರಕ್ಕೆ ಭಾರೀ ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು.

ಅಮೋಲ್ ಕಾಳೆ ಒಬ್ಬ ವಾಣಿಜ್ಯೋದ್ಯಮಿ

ಅಮೋಲ್ ಕಾಳೆ ಹುಟ್ಟಿದ್ದು ನಾಗ್ಪುರದಲ್ಲಿ. ಅವರು ಸುಮಾರು ಒಂದು ದಶಕದಿಂದ ಮುಂಬೈನಲ್ಲಿ ವಾಸಿಸುತ್ತಿದ್ದರು. ಅಮೋಲ್ ಕಾಳೆ ತಿರುಪತಿಯ ತಿರುಮಲ ತಿರುಪತಿ ದೇವಸ್ತಾನಮ್ಸ್ (ಟಿಟಿಡಿ) ನಲ್ಲಿ ಟ್ರಸ್ಟಿ ಕೂಡ ಆಗಿದ್ದರು. ಮುಂಬೈನಲ್ಲಿ ಹಲವು ಬಗೆಯ ಉದ್ಯಮಗಳನ್ನು ನಡೆಸುತ್ತಿದ್ದರು. ಅಮೋಲ್ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ನಿಕಟವರ್ತಿ ಕೂಡ. MCA ಅಧ್ಯಕ್ಷರ ಜೊತೆಗೆ, ಅಮೋಲ್ ಕಾಳೆ ಅವರು ಇಂಡಿಯನ್ ಸ್ಟ್ರೀಟ್ ಪ್ರೀಮಿಯರ್ ಲೀಗ್‌ನ ಸಹ-ಪ್ರವರ್ತಕರಾಗಿದ್ದರು.

ದೇಶೀಯ ಸರ್ಕ್ಯೂಟ್ನಲ್ಲಿ ಯಶಸ್ಸಿಗೆ ಕ್ರೆಡಿಟ್

ಅಮೋಲ್ ಕಾಳೆ ಅವರ ಅಧಿಕಾರಾವಧಿಯಲ್ಲಿ ವಾಂಖೆಡೆ 2023 ರ ವಿಶ್ವಕಪ್ ಪಂದ್ಯಗಳನ್ನು ಆಯೋಜಿಸಿತ್ತು. ಇದರಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸೆಮಿಫೈನಲ್ ಪಂದ್ಯವೂ ಸೇರಿದೆ. ದೇಶೀಯ ಕ್ರಿಕೆಟ್ ಸರ್ಕ್ಯೂಟ್‌ನ ಯಶಸ್ಸು ಅವರ ನಾಯಕತ್ವಕ್ಕೆ ಒಂದು ಉದಾಹರಣೆಯಾಗಿತ್ತು. ಇವರ ಅಧಿಕಾರಾವಧಿಯಲ್ಲಿ ಮುಂಬೈ ಇತ್ತೀಚೆಗೆ 2023-24ರಲ್ಲಿ ರಣಜಿ ಟ್ರೋಫಿಯನ್ನು ವಶಪಡಿಸಿಕೊಂಡಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:26 pm, Mon, 10 June 24

ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ