AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಮ ವೇಗಿ… ಖಡಕ್ ರಿಪ್ಲೈ ನೀಡಿದ ಜಸ್​ಪ್ರೀತ್ ಬುಮ್ರಾ

Border - Gavaskar Trophy 2024: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್‌ 22 ರಿಂದ ಶುರುವಾಗಲಿದೆ. ಈ ಸರಣಿ ಮೊದಲ ಪಂದ್ಯ ಪರ್ತ್​ನಲ್ಲಿ ನಡೆದರೆ, ಡಿಸೆಂಬರ್ 6 ರಿಂದ ಶುರುವಾಗಲಿರುವ 2ನೇ ಪಂದ್ಯ ಅಡಿಲೇಡ್ ನಲ್ಲಿ ನಡೆಯಲಿದೆ. ಹಾಗೆಯೇ 3ನೇ ಪಂದ್ಯ ಡಿಸೆಂಬರ್ 14 ರಿಂದ ಬ್ರಿಸ್ಬೇನ್ ನಲ್ಲಿ ಜರುಗಲಿದೆ.

ಮಧ್ಯಮ ವೇಗಿ... ಖಡಕ್ ರಿಪ್ಲೈ ನೀಡಿದ ಜಸ್​ಪ್ರೀತ್ ಬುಮ್ರಾ
Jasprit Bumrah
ಝಾಹಿರ್ ಯೂಸುಫ್
|

Updated on: Nov 21, 2024 | 12:15 PM

Share

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯು ಶುಕ್ರವಾರದಿಂದ (ನ.22) ಶುರುವಾಗಲಿದೆ. ಈ ಸರಣಿ ನಿಮಿತ್ತ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಟೀಮ್ ಇಂಡಿಯಾ ನಾಯಕ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಂಡಿದ್ದರು. ಈ ವೇಳೆ ಪತ್ರಕರ್ತರೊಬ್ಬರು ಬುಮ್ರಾ ಅವರನ್ನು ಮಧ್ಯಮ ವೇಗಿ ಎಂದು ಸಂಭೋಧಿಸಿದ ಘಟನೆಯೊಂದು ನಡೆದಿದೆ.

ಸುದ್ದಿಗೋಷ್ಠಿಯ ಪ್ರಶ್ನೋತ್ತರಗಳ ನಡುವೆ ಮಧ್ಯಮ ವೇಗದ ಆಲ್​ರೌಂಡರ್ ಆಗಿ ಭಾರತ ತಂಡದ ನಾಯಕತ್ವ ವಹಿಸಿಕೊಂಡಿರುವುದು ಹೇಗೆನಿಸುತ್ತಿದೆ ಎಂದು ಪ್ರಶ್ನಿಸಿದ್ದರು.

ಈ ಪ್ರಶ್ನೆಯಿಂದ ಅಚ್ಚರಿಗೊಂಡ ಜಸ್​ಪ್ರೀತ್ ಬುಮ್ರಾ, ನಾನು ಗಂಟೆಗೆ 150 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಬಲ್ಲೆ. ಕನಿಷ್ಠ ವೇಗದ ಬೌಲರ್ ನಾಯಕ ಎಂದು ಹೇಳುವಂತೆ ಎಂದು ಕೇಳಿಕೊಂಡರು.

ಈ ಮೂಲಕ ಜಸ್​ಪ್ರೀತ್ ಬುಮ್ರಾ ತಮ್ಮನ್ನು ವೇಗದ ಬೌಲರ್ ನಾಯಕನೆಂದು ಸಂಭೋಧಿಸುವಂತೆ ಪತ್ರಕರ್ತನಲ್ಲಿ ಮನವಿ ಮಾಡಿದರು. ಕೂಡಲೇ ಪ್ರಶ್ನೆ ಕೇಳಿದ ಜರ್ನಲಿಸ್ಟ್ ತಮ್ಮ ತಪ್ಪನ್ನು ತಿದ್ದಿಕೊಂಡರು.

ಇನ್ನು ಪರ್ತ್​ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಉಪನಾಯಕ ಜಸ್​ಪ್ರೀತ್ ಬುಮ್ರಾ ಮುನ್ನಡೆಸಲಿದ್ದಾರೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ವೈಯುಕ್ತಿಕ ಕಾರಣಗಳಿಂದಾಗಿ ಮೊದಲ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದು, ಹೀಗಾಗಿ ಪ್ರಥಮ ಪಂದ್ಯದಲ್ಲಿ ಬುಮ್ರಾ ಟೀಮ್ ಇಂಡಿಯಾ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ.

5 ಪಂದ್ಯಗಳ ಟೆಸ್ಟ್ ಸರಣಿ:

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್‌ 22 ರಿಂದ ಶುರುವಾಗಲಿದೆ. ಈ ಸರಣಿ ಮೊದಲ ಪಂದ್ಯ ಪರ್ತ್​ನಲ್ಲಿ ನಡೆದರೆ, ಡಿಸೆಂಬರ್ 6 ರಿಂದ ಶುರುವಾಗಲಿರುವ 2ನೇ ಪಂದ್ಯ ಅಡಿಲೇಡ್ ನಲ್ಲಿ ನಡೆಯಲಿದೆ. ಹಾಗೆಯೇ 3ನೇ ಪಂದ್ಯ ಡಿಸೆಂಬರ್ 14 ರಿಂದ ಬ್ರಿಸ್ಬೇನ್ ನಲ್ಲಿ ಜರುಗಲಿದೆ. ಡಿಸೆಂಬರ್ 26 ರಿಂದ ಮೆಲ್ಬೋರ್ನ್​ನಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ನಡೆಯಲಿದ್ದು, ಸಿಡ್ನಿಯಲ್ಲಿ ಜರುಗಲಿರುವ ಕೊನೆಯ ಟೆಸ್ಟ್ ಪಂದ್ಯ ಜನವರಿ 3 ರಿಂದ ಆರಂಭವಾಗಲಿದೆ.

ಇದನ್ನೂ ಓದಿ: IPL 2025: RCB ಅಂಗಳದಲ್ಲಿ ಅಶುತೋಷ್ ಶರ್ಮಾ

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವ್​ದತ್ ಪಡಿಕ್ಕಲ್.

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!